Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಲಿಂಗಿಗಳ ಜಗಳ: ಒರ್ವನ ಮರಣ
    ಸುದ್ದಿ

    ಸಲಿಂಗಿಗಳ ಜಗಳ: ಒರ್ವನ ಮರಣ

    vartha chakraBy vartha chakraಜುಲೈ 15, 2022Updated:ಜುಲೈ 15, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.15-ಕಳೆದ ಜು. 7 ರಂದು ಮಾರತ​ಹಳ್ಳಿ ಲಾಡ್ಜ್​ವೊಂದರಲ್ಲಿ ಶಂಕಾಸ್ಪದ ಸ್ಥಿತಿಯಲ್ಲಿ ಯುವಕನ‌ ಶವ ಪತ್ತೆಯಾದ ಪ್ರಕರಣವನ್ನು ಬೇಧಿಸಿದ ಪೊಲೀಸರು ಸಲಿಂಗಕಾಮಿಗಳ ನಡುವೆ ಉಂಟಾದ ಕಲಹದಲ್ಲಿ ಉಂಟಾಗಿರುವ ಕೊಲೆ ಎನ್ನುವ ಸ್ಫೋಟಕ ಸಂಗತಿಯನ್ನು ಬಯಲಿಗೆಳೆದಿದ್ದಾರೆ.
    ಕೊಲೆಯಾದ ಯುವಕನನ್ನು ತಮಿಳುನಾಡು ಮೂಲದ ರಾಜಗೋಪಾಲ್ (24)ಎಂದು ಗುರುತಿಸಲಾಗಿದೆ. ಆತನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ತಮಿಳು ವಣ್ಣನ್ ನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
    ಇಬ್ಬರ ನಡುವೆ ಸಲಿಂಗಕಾಮ ಸಂಬಂಧವಿದ್ದು ಕಳೆದ ಜುಲೈ 4 ರಂದು ರಾಜಗೋಪಾಲ್, ಮಾರತಹಳ್ಳಿಯ ರಿಲ್ಯಾಕ್ಸ್ ಲಾಡ್ಜ್​ನಲ್ಲಿ ರೂಂ ಬುಕ್ ಮಾಡಿದ್ದ. ಈ ವೇಳೆ ರಾಜಗೋಪಾಲ್​ ಜತೆಗೆ ತಮಿಳುವಣ್ಣನ್​ ಸಹ ಇದ್ದ. ಎರಡು ದಿನದ ಬಳಿಕ ರೂಂ ರಿನೀವಲ್ ಮಾಡಿರಲಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್​ ಸಿಬ್ಬಂದಿ ಕೋಣೆಯನ್ನು ಪರಿಶೀಲಿಸಿದಾಗ ರಾಜಗೋಪಾಲ್​ ಶವ ಪತ್ತೆಯಾಗಿತ್ತು.
    ತಕ್ಷಣ ಲಾಡ್ಜ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು. ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
    ಮರಣೋತ್ತರ ಪರೀಕ್ಷೆ ಬಳಿಕ ಕುತ್ತಿಗೆ ಹಿಸುಕಿ ಉಸಿರು ಗಟ್ಟಿಸಿ ಕೊಲೆಯಾಗಿದೆ ಎಂಬುದು ಬಯಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರಿಗೆ ರಾಜಗೋಪಾಲ್​ ಜೊತೆ ತಮಿಳು ವಣ್ಣನ್​ ಇದ್ದ ಎಂಬ ವಿಚಾರ ಗೊತ್ತಾಗಿ‌ ಆತ ಪರಾರಿಯಾ​ಗಿರುವ ಸಂಗತಿಯು ತಿಳಿಯಿತು.
    ಖಚಿತವಾದ ಮಾಹಿತಿಯನ್ನು ‌ಆಧರಿಸಿ‌ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿ ತಮಿಳು ವಣ್ಣನ್​ ವಿಚಾರಣೆ ವೇಳೆಯಲ್ಲಿ ಕಳೆದ 4 ವರ್ಷಗಳಿಂದ ಇಬ್ಬರು ಸಲಿಂಗಕಾಮ ಸಂಬಂಧ ಹೊಂದಿದ್ದರು. ಕೊಲೆ ಆರೋಪಿ ತಮಿಳುವಣ್ಣನ್ ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮೊದಲು ತಮಿಳುನಾಡಿನ ಚೆನ್ನೈನಲ್ಲಿ ಆಸ್ಪತ್ರೆಯೊಂದರಲ್ಲಿ ಇಬ್ಬರು ಕೆಲಸ ಮಾಡ್ತಿದ್ದರು.
    ಇಬ್ಬರಿಗೂ ಮದುವೆ ಆಗಿತ್ತಾದರೂ ತಮ್ಮ ಸಂಬಂಧ ಮುಂದುವರಿಸಿದರಿಂದ ಇಬ್ಬರ ದಾಂಪತ್ಯವೂ ಮುರಿದುಬಿದ್ದಿತ್ತು.
    ಮದುವೆ ಮುರಿದು ಬಿದ್ದ ಬಳಿಕ ಆರೋಪಿ ತಮಿಳು ವಣ್ಣನ್ ನಗರಕ್ಕೆ ಬಂದು ಪ್ರತಿಷ್ಠಿತ ಆಸ್ಪತ್ರೆಯ ಲ್ಯಾಬ್​ನಲ್ಲಿ ಕೆಲಸ ಮಾಡುತ್ತಿದ್ದು, ಚೆನ್ನೈನಿಂದ ಆಗಾಗ ರಾಜಗೋಪಾಲ್​ನನ್ನು ಮಾರತಹಳ್ಳಿಯ ಲಾಡ್ಜ್​ಗೆ​ ಕರೆಸಿಕೊಳ್ಳುತ್ತಿದ್ದ ಎಂಬುದು ತಿಳಿದುಬಂದಿದೆ.
    ಇಬ್ಬರು ಲೈಂಗಿಕ ಸಂಪರ್ಕ ಬಳಿಕ ಹಣ ಕೊಡುವಂತೆ ಆರೋಪಿಗೆ ರಾಜಗೋಪಾಲ್ ಪೀಡಿಸಿದ್ದ ವಿಚಾರ ಇಬ್ಬರ ನಡುವೆ ಜಗಳಕ್ಕೆ ಕಾರಣವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ರಾಜಗೋಪಾಲ್ ನನ್ನ‌ ಕತ್ತು ಬಿಗಿದು ಕೊಲೆ ಮಾಡಿ ಲಾಡ್ಜ್ ಗೆ ಬೀಗ ಹಾಕಿ ಪರಾರಿಯಾಗಿದ್ದ ಎಂದು ತಿಳಿಸಿದರು.

    Bangalore ಕೊಲೆ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಕಿಕ್ ಬಾಕ್ಸಿಂಗ್ ನಿಂದ ನನ್ನ ಮಗನ ಕೊಲೆಯಾಗಿದೆ: ತಂದೆಯ ಆರೋಪ
    Next Article ಮಣಿಪಾಲ: ಶಾರ್ಟ್​ ಸರ್ಕ್ಯೂಟ್​​ನಿಂದ ಹೊತ್ತಿ ಉರಿದ ರೆಸ್ಟೋರೆಂಟ್
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_jyPi ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • fen daison_cyOt ರಲ್ಲಿ ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    • Williamgeate ರಲ್ಲಿ ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe