ಬೆಂಗಳೂರು-ಕರಾವಳಿ-ಮಲೆನಾಡಿನಲ್ಲಿ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಸಂಘ ಪರಿವಾರ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರವೀಣ್ ಹತ್ಯೆಯಿಂದ ಇಡೀ ಕರಾವಳಿ ಬೆಚ್ಚಿಬಿದ್ದಿದ್ದು, ಈಗ ಮತ್ತೊಂದು ಕೊಲೆ ನಡೆದಿರುವುದರಿಂದ ಪೊಲೀಸ್ ಇಲಾಖೆ ಕೂಡ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಹಾಗೆಯೇ ಸಂಘ ಪರಿವಾರ ಸಹಿತವಾಗಿ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಹಾಗು ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ರವಾನೆ ಮಾಡಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಎಲ್ಲಾ ಸೂಕ್ಷ್ಮ ಪ್ರದೇಶ, ಚೆಕ್ಪೋಸ್ಟ್ಗಳಲ್ಲಿ ಬೀಟ್ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಅನುಮಾನಾಸ್ಪದ ನಡೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಸಾರ್ವಜನಿಕರು ಕೂಡ ಈ ಬಗ್ಗೆ ಯಾವುದೇ ಮಾಹಿತಿ ಇದ್ದರೂ ಪೊಲೀಸ್ ಇಲಾಖೆಗೆ ನೀಡಬಹುದು. ಚೆಕ್ಪೋಸ್ಟ್ಗಳಲ್ಲಿ ನಿರಂತರ ತಪಾಸಣೆ ನಡೆಸಲು ಸೂಚಿಸಲಾಗಿದೆ.
Previous Articleವಿಕ್ರಾಂತ್ ರೋಣ ಪ್ರದರ್ಶನ ವೇಳೆ ಮಾರಾಮಾರಿ: ಓರ್ವನಿಗೆ ಗಾಯ
Next Article ಅರಗ ಜ್ಞಾನೇಂದ್ರನನ್ನು ಕಿತ್ತು ಹಾಕಿ…!