ಬೆಂಗಳೂರು, ಜುಲೈ 11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಮಲೆನಾಡು, ಕೊಡಗು, ಕರಾವಳಿ ಹಾಗು ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗು ನೆರವಾಗಿಯೂ ಮಾತನಾಡಿದ್ದು, ಮಳೆ ತಗ್ಗಿರುವುದರಿಂದ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ, ಸ್ಥಿತಿಗತಿಯನ್ನು ಅವಲಂಬಿಸಿ ಪರಿಹಾರಕ್ಕೆ ಸೂಚನೆ ನೀಡಲಾಗುವುದು ಎಂದರು…