Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಕ್ಷಾಮ ನಿವಾರಣೆಗೆ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ
    Trending

    ವಿದ್ಯುತ್ ಕ್ಷಾಮ ನಿವಾರಣೆಗೆ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ

    vartha chakraBy vartha chakraನವೆಂಬರ್ 9, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.9 – ರಾಜ್ಯದ ವಿದ್ಯುತ್ ಕ್ಷಾಮಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ರಾಜ್ಯ ಸರ್ಕಾರ ಜಲ ವಿದ್ಯುತ್‌, ಸೋಲಾರ್‌ ಸೇರಿದಂತೆ 15 ಸಾವಿರ ಕೋಟಿ ರೂಪಾಯಿ ಮೊತ್ತದ 2270 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.
    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌ ನತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಪರಸ್ಪರ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದರು.

    ಇದಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌, ರಾಜ್ಯ ವಿದ್ಯುತ್ ಸ್ವಾವಲಂಬಿ ಯಾಗುವ ನಿಟ್ಟಿನಲ್ಲಿ ಅನೇಕ ‌ಕ್ರಮಗಳಿಗೆ ಮುಂದಾಗಿದೆ.ನಮ್ಮಲ್ಲಿ ಲಭ್ಯವಿರುವ ಮೂಲಗಳಿಂದ ವಿದ್ಯುತ್ ಉತ್ಪಾದಿಸಿ ಕೊರತೆ ನೀಗಿಸಲು ಪ್ರಯತ್ನ ನಡೆಸಲಾಗಿದೆ ಎಂದು ಹೇಳಿದರು.
    ಈ ಕುರಿತು ಕೇಂದ್ರ ಇಂಧನ ಸಚಿವ ಆರ್‌.ಕೆ.ಸಿಂಗ್‌ ಹಾಗೂ ಟಿಎಚ್‌ಡಿಸಿಎಲ್‌ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಆರ್.ಕೆ. ಬಿಷ್ಣೋಯ್‌ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಲಾಗಿತ್ತು. ಒಪ್ಪಂದದಂತೆ ಕದ್ರಾ ಜಲಾಶಯದಲ್ಲಿ 100 ಮೆಗಾವಾಟ್‌ ಸಾಮರ್ಥ್ಯದ ‘ಫ್ಲೋಟಿಂಗ್‌ ಸೋಲಾರ್‌’, 170 ಮೆಗಾವಾಟ್‌ ಸಾಮರ್ಥ್ಯದ ನೆಲದಡಿಯ ವಿದ್ಯುತ್‌ ಯೋಜನೆ, ಕೆಪಿಸಿಎಲ್ ಆವರಣದಲ್ಲಿ ಮೇಲ್ಛಾವಣಿ ಸೌರ ಸ್ಥಾವರ, ವಾರಾಹಿಯಲ್ಲಿ 1,500 ಮೆಗಾವಾಟ್‌ ಸಾಮರ್ಥ್ಯದ ‘ಪಂಪ್ಡ್‌ ಸ್ಟೋರೇಜ್‌’ ಘಟಕ ಸ್ಥಾಪನೆ ಮಾಡಲಾಗುವುದು ಎಂದು ವಿವರಿಸಿದರು.

    ಬೀದರ್‌ನಲ್ಲಿ 500 ಮೆಗಾವಾಟ್‌ ಸಾಮರ್ಥ್ಯದ ಸೋಲಾರ್ ಪಾರ್ಕ್‌ ಸ್ಥಾಪಿಸಲು ಕ್ರೆಡಲ್ ಸಂಸ್ಥೆ ಹಾಗೂ ಟಿಎಚ್‌ಡಿಸಿಎಲ್‌ ಮಧ್ಯೆ ಪ್ರತ್ಯೇಕ ಒಪ್ಪಂದ ಮಾಡಿಕೊಳ್ಳಲಾಯಿತು ಎಂದರು ಕೇಂದ್ರ ಸರ್ಕಾರದ ಟಿಎಚ್‌ಡಿಸಿಎಲ್‌ ಜತೆ ಮಾಡಿಕೊಂಡಿರುವ ಈ ಒಪ್ಪಂದ ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಯನ್ನು ಪೂರೈಸಲು, ಕೊರತೆ ನೀಗಿಸಲು ಸಹಕಾರಿಯಾಗಲಿದೆ. ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಯೋಜನೆಯ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಹೇಳಿದರು.

    Government Karnataka Politics Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಕಾಂತರಾಜು ವರದಿಗೆ ಲಿಂಗಾಯತರ ವಿರೋಧ | Kantharaj Panel Report
    Next Article ಬಾಂಗ್ಲಾ ವಲಸಿಗರ ಅಕ್ರಮ ಚಟುವಟಿಕೆಗಳ ವಿರಾಟ್ ಜಾಲ | Bangladeshi Immigrants
    vartha chakra
    • Website

    Related Posts

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    ಡಿಸೆಂಬರ್ 7, 2023

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಡಿಸೆಂಬರ್ 6, 2023

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಡಿಸೆಂಬರ್ 6, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Renatingk ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    ಡಿಸೆಂಬರ್ 7, 2023

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಡಿಸೆಂಬರ್ 6, 2023

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಡಿಸೆಂಬರ್ 6, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಬರ ನಿರ್ವಹಣೆಗೆ ಹಣ ಬಿಡುಗಡೆ #government
    Subscribe