ಹಾಸನ,ಜು.4– ಐಪಿಎಲ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಹಣ ಹೊಂದಿಸಲಾಗದೇ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಪಾಪಿ ಪತಿ ದಾರುಣವಾಗಿ ಕೊಲೆ ಮಾಡಿರುವ ದುರ್ಘಟನೆ ದೊಡ್ಡಮಂಡಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟೊಯೊಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಪತ್ನಿ ತೇಜಸ್ವಿನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದು ಆತನ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.
ಆರೋಪಿ ಮಂಜುನಾಥ್ಗೆ 7 ವರ್ಷಗಳ ಹಿಂದೆ ತೇಜಸ್ವಿನಿ ಜೊತೆ ಮದುವೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ 150 ಗ್ರಾಂ ಚಿನ್ನ, ಲಕ್ಷಗಟ್ಟಲೆ ನಗದು ಕೊಡಲಾಗಿದೆ. ನಂತರ ಇನ್ನೂ ಹೆಚ್ಚಿನ ವರದಕ್ಷಿಣೆ ತರುವಂತೆ ನನ್ನ ಮಗಳಿಗೆ ಮಂಜುನಾಥ್ ಮತ್ತು ಆತನ ಪೋಷಕರು ಕಿರುಕುಳ ನೀಡಲಾರಂಭಿಸಿದರು. ಈ ವಿಚಾರವಾಗಿ ಅನೇಕ ಬಾರಿ ಗ್ರಾಮಸ್ಥರು ಚರ್ಚಿಸಿ ರಾಜಿ ಮಾಡಿಸಿದ್ದರು ಎಂದು ತೇಜಸ್ವಿನಿ ಪಾಲಕರು ತಿಳಿಸಿದ್ದಾರೆ.
ಮಂಜುನಾಥ್ 80 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ. ಆದರೆ ಆನ್ಲೈನ್ ಜೂಜಾಟ ಹಾಗು ಕ್ರಿಕೆಟ್ ಬೆಟ್ಟಿಂಗ್ಗೆ ದಾಸನಾಗಿ ಹಣ ಕಳೆದುಕೊಂಡು, ಕೆಲಸವನ್ನೂ ಕಳೆದುಕೊಂಡ ಆತ, ಬೆಂಗಳೂರಿನಿಂದ ವಾಪಸ್ ಹಾಸನಕ್ಕೆ ಬಂದಿದ್ದ.
ಕುಟುಂಬ ನಿರ್ವಹಣೆಗಾಗಿ ಪತಿ ಕಷ್ಟಪಡುವುದನ್ನು ನೋಡದೆ, ತೇಜಸ್ವಿನಿ ಸಹ ಕೆಲಸಕ್ಕೆ ಹೋಗಲು ಮುಂದಾಗಿದ್ದಾರೆ. ಇದನ್ನು ಸಹಿಸದ ನನ್ನ ಅಳಿಯ ಮಗಳ ಶೀಲದ ಮೇಲೆ ಅನುಮಾನಪಟ್ಟು ಆಕೆಯನ್ನು ಮನೆಯ ರೂಮ್ನಲ್ಲಿ ಕೂಡಿಹಾಕಿ ಬಳಿಕ ತವರು ಮನೆಯಿಂದ ಎಲ್ಲ ಆಸ್ತಿ ಬರೆಸಿಕೊಂಡು ಬರುವಂತೆ ಹಿಂಸಿಸಿ ಮಗಳನ್ನ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದರು.
ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಮತ್ತು ತಾಯಿ ಸರೋಜಮ್ಮ ಹಾಗು ತಂದೆ ಬಸವೇಗೌಡರ ಮೇಲೆ ಕಾನೂನು ಕ್ರಮ ಜರುಗಿಸಿ ಕಠಿಣ ಶಿಕ್ಷೆ ಕೊಡುವಂತೆ ಒತ್ತಾಯಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
