Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನರ್ಹತೆ ಕೋರಿ ಜೆಡಿಎಸ್ ಮನವಿ..
    ಸುದ್ದಿ

    ಅನರ್ಹತೆ ಕೋರಿ ಜೆಡಿಎಸ್ ಮನವಿ..

    vartha chakraBy vartha chakraಜುಲೈ 8, 2022Updated:ಜುಲೈ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.8- ಇತ್ತೀಚೆಗೆ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪ ಎದುರಿಸುತ್ತಿರುವ ಕೆ. ಶ್ರೀನಿವಾಸ ಗೌಡ ಮತ್ತು ಎಸ್‌.ಆರ್‌. ಶ್ರೀನಿವಾಸ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜೆಡಿಎಸ್‌ ಮನವಿ ಸಲ್ಲಿಸಿದೆ.
    ಜೆಡಿಎಸ್‌ ಮುಖ್ಯ ಸಚೇತಕ ವೆಂಕಟರಾವ್‌ ನಾಡಗೌಡ ಅವರು ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿ ,ಇಬ್ಬರೂ ಶಾಸಕರು ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದು, ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅನ್ಯ ಪಕ್ಷಗಳ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮನವಿಯೊಂದಿಗೆ ಲಗತ್ತಿಸಿದ್ದಾರೆ. ಇಬ್ಬರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ.
    ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟರಾವ್ ನಾಡಗೌಡ,ಇಬ್ಬರೂ ಶಾಸಕರೂ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಶ್ರೀನಿವಾಸ ಗೌಡ ಅವರು ಕಾಂಗ್ರೆಸ್‌ ಜತೆ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇವೆ. ಸ್ಪೀಕರ್‌ ಕಾಗೇರಿ ಅವರೂ ಕ್ರಮದ ಭರವಸೆ ನೀಡಿದ್ದಾರೆʼ ಎಂದರು.
    ಇಂತಹ ದೂರುಗಳಿಂದ ಪ್ರಯೋಜನ ಆಗುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿರುವುದು ನಿಜ. ಆದರೆ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಸಂದೇಶ ರವಾನೆ ಆಗಬಾರದು. ಈ ಉದ್ದೇಶದಿಂದ ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಹೇಳಿದರು.

    Politics
    Share. Facebook Twitter Pinterest LinkedIn Tumblr Email WhatsApp
    Previous Articleಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಇನ್ನಿಲ್ಲ
    Next Article ತಮಿಳು ಸ್ಟಾರ್ ನಟ ವಿಕ್ರಮ್ ಗೆ ಹಾರ್ಟ್ ಅಟ್ಯಾಕ್
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • chickencog ರಲ್ಲಿ Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    • narkologiyakrasnodarvucky ರಲ್ಲಿ ಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura
    • chickencog ರಲ್ಲಿ ಉಗ್ರಂ ನೆರಳಿನಲ್ಲಿ ‌ಸಲಾರ್ | Salaar
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe