Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇರೆಯವರ ಮಕ್ಕಳನ್ನು ಬಾವಿಗೆ ತಳ್ಳಿ ಚೆಂದ ನೋಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ
    ಸುದ್ದಿ

    ಬೇರೆಯವರ ಮಕ್ಕಳನ್ನು ಬಾವಿಗೆ ತಳ್ಳಿ ಚೆಂದ ನೋಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ

    vartha chakraBy vartha chakraಜುಲೈ 28, 2022Updated:ಜುಲೈ 28, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಬೇರೆಯವರ ಮಕ್ಕಳನ್ನು‌‌ ಬಾವಿಗೆ ತಳ್ಳಿ‌ ಬಿಜೆಪಿ ನಾಯಕರು ಚೆಂದ ನೋಡುತ್ತಿದ್ದಾರೆ ಎಂಬ ಮಾತನ್ನು ಬಿಜೆಪಿಯ ಬೆಂಗಳೂರು ನಾಯಕರೊಬ್ಬರು ಹೇಳಿರುವುದು ಈಗಿನ ಸ್ಥಿತಿಗೆ ಕನ್ನಡಿ ಹಿಡಿದಂತಿದೆ.
    ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಬಿಜೆಪಿ ವಲಯದಲ್ಲಿ ತ್ವೇಷಮಯ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಕಾರ್ಯಕರ್ತರೇ ತಮ್ಮ‌ ನಾಯಕರನ್ನು ದೂಷಿಸುತ್ತಿದ್ದಾರೆ.
    ಕೊಲೆ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಿ ಆ ಮೂಲಕ‌ ಕಾರ್ಯಕರ್ತರ ಸಾವನ್ನು ತಡೆಯುವ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ನಾಯಕರು‌ ಏನನ್ನೂ‌ ಮಾಡುತ್ತಿಲ್ಲ. ಕೊಲೆ ಕೃತ್ಯ ನಡೆದ ಬಳಿಕ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಲ್ಲೂ ಬಿಜೆಪಿ ಸರ್ಕಾರ ವಿಫಲವಾಗಿದೆ. ಹೀಗಾಗಿಯೇ ಹಿಂದೂಪರ ಕಾರ್ಯಕರ್ತರನ್ನು ನಿರಂತರವಾಗಿ ಕೊಲೆ ಮಾಡಲಾಗುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದ ಪಕ್ಷ ಸಂಘಟನೆಯೇ ಕಷ್ಟವಾಗಿದೆ ಎಂದು ಕಾರ್ಯಕರ್ತರು, ಅನೇಕ ತಳಮಟ್ಟದ ನಾಯಕರು ಅಭಿಪ್ರಾಯಪಡುತ್ತಿದ್ದಾರೆ.
    ನಮ್ಮ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ನಾವು ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ವಿರೋಧ ಪಕ್ಷದಲ್ಲಿದ್ದಾಗಲೂ ಹೋರಾಟ ಮಾಡಬೇಕಿದೆ. ಆಡಳಿತ ಪಕ್ಷವಿದ್ದರೂ ಹೋರಾಡಬೇಕಾಗಿದೆ. ಪರಿಸ್ಥಿತಿ ಹೀಗಿರುವಾಗ ಬಿಜೆಪಿ ನಾಯಕರೇಕೆ ಆಡಳಿತ ನಡೆಸಬೇಕು ಎಂಬ ಪ್ರಶ್ನೆ ಬಿಜೆಪಿ‌ ವಲಯದಲ್ಲಿ ಜೋರಾಗಿಯೇ ಕೇಳಿಬರುತ್ತಿದೆ.
    ಈ ವೈಫಲ್ಯಗಳ ಹಿನ್ನೆಲೆಯಲ್ಲಿಯೇ ಪ್ರವೀಣ್ ಕುಟುಂಬಕ್ಕೆ ಬುಧವಾರ ಸಾಂತ್ವನ ಹೇಳಲು ಬೆಳ್ಳಾರೆಗೆ ಬಂದ ಸಚಿವ ಸುನಿಲ್‌ಕುಮಾರ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ವಿರುದ್ಧ ಕಾರ್ಯಕರ್ತರು ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಹಿಂದಿನ‌ ಚುನಾವಣಾ ಪ್ರಚಾರ ವೇಳೆ ‘ನಮ್ಮ ಕಾರ್ಯಕರ್ತರನ್ನು ಮುಟ್ಟಿ ನೋಡಿ’ ಎಂದು ನಳಿನ್‌ಕುಮಾರ್ ಕಟೀಲ್ ಸವಾಲು ಹಾಕಿದ್ದ ಮಾತಿನ ವಿಡಿಯೋ ಈಗ ವೈರಲ್ ಆಗಿದೆ. ಆಗ ಮನಬಂದಂತೆ ಮಾತನಾಡಿ ಈಗ ಕಾರ್ಯಕರ್ತರ ಕೊಲೆಯಾದರೂ ಮೌನ ವಹಿಸಿರುವ ಬಿಜೆಪಿ‌ ನಾಯಕರಿಗೆ ಕಾರ್ಯಕರ್ತರೇ ಹಿಡಿಶಾಪ ಹಾಕುತ್ತಿದ್ದಾರೆ.
    ವೈರಲ್ ಆಯ್ತು ತೇಜಸ್ವಿ ಆಡಿಯೋ:
    ಇದೀಗ ಬಿಜೆಪಿ ಯುವ ಮೋರ್ಚಾ ಮುಖಂಡರೊಬ್ಬರ ಜೊತೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ.
    ಯುವಮೋರ್ಛಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸಂಸದ ತೇಜಸ್ವಿ ಸೂರ್ಯ ಸಾಮೂಹಿಕ ರಾಜೀನಾಮೆ ಕುರಿತಂತೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮುಖಂಡ ಸಂದೀಪ್ ಅವರ ಜೊತೆ ಫೋನ್ ಸಂಭಾಷಣೆ ವೇಳೆ ‘ಕಾಂಗ್ರೆಸ್ ಸರ್ಕಾರ ಇರ್ತಿದ್ರೆ ಕಲ್ಲು ಹೊಡೆಯಬಹುದಿತ್ತು. ಆದರೆ ಏನು ಮಾಡುವುದು. ನಮ್ಮದೇ ಸರ್ಕಾರವಿದೆ. ಎಲ್ಲರೂ ಸೇರಿ ಸಿಎಂ ಭೇಟಿ ಮಾಡೋಣ’ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

    News Politics tejaswi surya ಕಾಂಗ್ರೆಸ್ ಕೊಲೆ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಅವರಿಗೆ ಕಾದಿದೆಯಾ ಸಂಕಷ್ಟ…!?
    Next Article ಬಿಬಿಎಂಪಿ ಚುನಾವಣೆ: ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಿ…
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • KennethSOYNC ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • KennethSOYNC ರಲ್ಲಿ ATM ಸರ್ಕಾರ ಬೇಗ ತೊಲಗಬೇಕಂತೆ | ATM Sarkara
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe