Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಗ್ರರ ಅಡಗುದಾಣವಾದ ಕರ್ನಾಟಕ..?
    ಸುದ್ದಿ

    ಉಗ್ರರ ಅಡಗುದಾಣವಾದ ಕರ್ನಾಟಕ..?

    vartha chakraBy vartha chakraಆಗಷ್ಟ್ 1, 2022Updated:ಆಗಷ್ಟ್ 1, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.1-ಸುಶಿಕ್ಷಿತ ರಾಜ್ಯ ಎಂದೇ ಖ್ಯಾತಿ ಪಡೆದಿದ್ದ ಕರ್ನಾಟಕವು‌ ಉಗ್ರರ ಅಡಗುತಾಣವಾಗುತ್ತಿರುವ ಆತಂಕ ಎದುರಾಗಿದೆ. ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ ಶಂಕಿತ ಉಗ್ರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಬೆನ್ನಲ್ಲೇ ರಾಜ್ಯ ಮೂರು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ( ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿ ಓರ್ವ ಶಂಕಿತ ಉಗ್ರನನ್ನು ಸೆರೆಹಿಡಿದಿದ್ದಾರೆ.
    ಕಾರವಾರ, ಬೆಳಗಾವಿ, ತುಮಕೂರಿನಲ್ಲಿ ಎನ್‌ಐಎ ಅಧಿಕಾರಿಗಳು ಏಕಕಾಲದ ದಾಳಿ ನಡೆಸಿ ಭಟ್ಕಳ ಮೂಲದ ಓರ್ವ ಶಂಕಿತ ಉಗ್ರನನ್ನು ಬಂಧಿಸಿ ಆತನ ಜೊತೆಗೆ ಆತನ‌ ತಮ್ಮನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಕೈಗೊಂಡಿದ್ದಾರೆ.
    ಆರೋಪಿ ಅಬ್ದುಲ್ ಮಸ್ತಿರ್‌ (30) ಶಂಕಿತ ಉಗ್ರನಾಗಿದ್ದು, ಈತ ಐಎಸ್‍ಐಎಸ್ ಬರಹಗಳನ್ನು ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸುತ್ತಿರುವುದನ್ನು ಪತ್ತೆಹಚ್ಚಲಾಗಿದೆ.
    ಅದರಂತೆ ರಹಸ್ಯ ಕಾರ್ಯಾಚರಣೆ ಕೈಗೊಂಡು‌ ಅಬ್ದುಲ್ ಮಸ್ತಿರನನ್ನು ಭಟ್ಕಳ ನಗರದ ಅರ್ಬನ್ ಬ್ಯಾಂಕ್ ಬಳಿಯ ಆತನ ಮನೆಯ ಮೇಲೆ‌ ದಾಳಿ ನಡೆಸಿದ ಎನ್‍ಐಎ ಅಧಿಕಾರಿಗಳ ತಂಡ ಬಂಧಿಸಿ ವಿಚಾರಣೆ ಕೈಗೊಂಡಿದೆ.
    ಪ್ರಾಥಮಿಕ ಮಾಹಿತಿಯಂತೆ ಈತ ಭಟ್ಕಳ ನಗರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಐಎಸ್‍ಐಎಸ್‍ನ ಬರಹಗಳನ್ನು ಭಾರತೀಯ ಭಾಷೆಗಳಿಗೆ ಈತ ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಎಂಬ ಆರೋಪದಡಿ ಈತನನ್ನು ಬಂಧಿಸಿ ವಿಚಾರಣೆ ನಡೆಸಿ ಭಟ್ಕಳದಲ್ಲೇ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ಸ್ಥಳೀಯ ಪೊಲೀಸರ ಸಹಕಾರದಿಂದ ಆರೋಪಿ ಅಬ್ದುಲ್ ಮಸ್ತಿರನನ್ನು ಬಂಧಿಸಿ ನಡೆಸಿದ ವಿಚಾರಣೆಯಲ್ಲಿ ಆತ ಐಎಸ್‌ಐ ಸಂಪರ್ಕ ಹೊಂದಿರುವುದು ಕಂಡುಬಂದಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ. ಚಿನ್ನದ ಪಳ್ಳಿಯ ಬಳಿಯ ಅತನ ಮನೆಯಲ್ಲಿ ಇರುವಾಗಲೆ ಗುಪ್ತಚರ, ಸ್ಥಳೀಯ ಪೊಲೀಸರ ಸಹಕಾರದಿಂದ ದಾಳಿ ನಡೆಸಲಾಗಿದೆ.
    ಇತ್ತೀಚಿಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಉಗ್ರರನ್ನು ಬಂಧಿಸಿ ತನಿಖೆಯನ್ನು ತೀವ್ರಗೊಳಿಸಿರುವ ಬೆನ್ನಲ್ಲೇ ಭಟ್ಕಳದಲ್ಲಿ ಎನ್‍ಐಎ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಒಂದು ವರ್ಷದಲ್ಲಿ ಎನ್‌ಐಎ ಭಟ್ಕಳದಲ್ಲಿ ಎರಡನೆ ಬಾರಿ ದಾಳಿ ನಡೆಸುತ್ತಿದ್ದು ಭಟ್ಕಳ ಮತ್ತೊಮ್ಮೆ ಬೆಚ್ಚಿಬೀಳುವಂತಾಗಿದೆ.
    ಈ ನಡುವೆ ಶಂಕಿತ ಉಗ್ರರು ವಾಸಿಸುತ್ತಿದ್ದ ಮನೆಗಳು, ಅಕ್ಕಪಕ್ಕದ ಮನೆ ಪರಿಶೀಲನೆ ನಡೆಸಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಎಷ್ಟು ದಿನಗಳಿಂದ ವಾಸಿಸುತ್ತಿದ್ದರು ಅವರ ಜೊತೆಗಿನ ಸಂಪರ್ಕದ ಬಗ್ಗೆಯೂ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
    ಈ‌ ಮಧ್ಯೆ ಸಿಸಿಬಿ ಪೊಲೀಸರು ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿ ನಡೆಸುತ್ತಿರುವ ವಿಚಾರಣೆಯಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಭಾರತ ಸರ್ಕಾರ ತೆಗೆದುಹಾಕಿ ಕಾಶ್ಮೀರಕ್ಕೆ ಇದ್ದ ಸವಲತ್ತು ಕಿತ್ತುಕೊಳ್ಳಲಾಗಿದೆ. ನಮ್ಮಿಂದ ಕಾಶ್ಮೀರವನ್ನು ಕಿತ್ತುಕೊಂಡವರ ವಿರುದ್ಧ ನಾವು ಹೋರಾಡಲೇಬೇಕು ಎನ್ನುವ ನಿಲುವಿಗೆ ಬಂಧಿತ ಶಂಕಿತ ಉಗ್ರರು ಅಂಟಿಕೊಂಡಿರುವುದು ಕಂಡುಬಂದಿದೆ.

    Verbattle
    Verbattle
    Verbattle
    News ಉಗ್ರ ಕಲೆ
    Share. Facebook Twitter Pinterest LinkedIn Tumblr Email WhatsApp
    Previous ArticleISIS ನಂಟು: ತುಮಕೂರು, ಭಟ್ಕಳದಲ್ಲಿ ಶೋಧ.. !
    Next Article ನಿರ್ದಾಕ್ಷಿಣ್ಯ ಕ್ರಮ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dtswxp ರಲ್ಲಿ ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    • LinwoodGah ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Dtswxp ರಲ್ಲಿ ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.