Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕ್ರಾಂತ್ ರೋಣ ಹೇಗಿದೆ? ಇಲ್ಲಿದೆ ಕಿಚ್ಚ ಬಾಸ್ ಸಿನಿಮಾ ವಿಮರ್ಶೆ
    ಸುದ್ದಿ

    ವಿಕ್ರಾಂತ್ ರೋಣ ಹೇಗಿದೆ? ಇಲ್ಲಿದೆ ಕಿಚ್ಚ ಬಾಸ್ ಸಿನಿಮಾ ವಿಮರ್ಶೆ

    vartha chakraBy vartha chakraಜುಲೈ 28, 2022Updated:ಜುಲೈ 28, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಸಖತ್​ ನಿರೀಕ್ಷೆ ಮೂಡಿಸಿದ್ದ ‘ವಿಕ್ರಾಂತ್​ ರೋಣ’ ಇಂದು (ಜುಲೈ 28) ಎಲ್ಲೆಡೆ ರಿಲೀಸ್​ ಆಗಿದೆ. ಅಭಿಮಾನಿಗಳು ಮುಗಿಬಿದ್ದು ಈ ಸಿನಿಮಾವನ್ನು ನೋಡುತ್ತಿದ್ದಾರೆ. ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆದ ಪ್ರೇಕ್ಷಕರ ಸಡಗರ ಜೋರಾಗಿದೆ. ಕಿಚ್ಚ ಸುದೀಪ್ ಅವರ ನಟನೆ ಬಗ್ಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದ್ದೂರಿ ಮೇಕಿಂಗ್​, 3ಡಿ ದೃಶ್ಯ ವೈಭವದ ಬಗ್ಗೆಯೂ ಉತ್ತಮ ಮಾತುಗಳು ಕೇಳಿಬರುತ್ತಿವೆ. ಹಾಗಾದರೆ ಚಿತ್ರ ಹೇಗಿದೆ? ಇಲ್ಲಿದೆ ವಿಕ್ರಾಂತ್ ರೋಣ ವಿಮರ್ಶೆ.
    ಕಮರೊಟ್ಟು ಗ್ರಾಮ. ಇದು ಕರಾವಳಿಯಲ್ಲಿರುವ ಒಂದು ಕಾಲ್ಪನಿಕ ಊರು. ಇಲ್ಲಿ ಭೂತಾರಾಧಕರಿದ್ದಾರೆ. ಊರಿನಲ್ಲಿ ನಡೆಯುತ್ತಿರುವ ಮಕ್ಕಳ ಕೊಲೆಗೆ ಕಮರೊಟ್ಟು ಮನೆಯಲ್ಲಿ ವಾಸವಾಗಿರುವ ಬ್ರಹ್ಮ ರಾಕ್ಷಸ ಎಂದು ನಂಬಿದವರಿದ್ದಾರೆ. ಈ ಊರಿಗೆ ವಿಕ್ರಾಂತ್ ರೋಣ (ಸುದೀಪ್​), ಸಂಜು (ನಿರೂಪ್ ಭಂಡಾರಿ) ಆಗಮನ ಆಗುತ್ತದೆ. ಆ ಕೊಲೆಗಳು ನಡೆಯುತ್ತಿರುವುದೇಕೆ? ವಿಕ್ರಾಂತ್​ ರೋಣ, ಸಂಜುಗೂ ಕಥೆಗೂ ಏನು ಸಂಬಂಧ ಅನ್ನೋದನ್ನು ಸಿನಿಮಾದಲ್ಲಿ ಕಣ್ತುಂಬಿಕೊಳ್ಳಬೇಕು. ವಿಕ್ರಾಂತ್ ರೋಣಾ 147 ನಿಮಿಷಗಳ ಸಿನಿಮಾವಾಗಿದ್ದು, ಅದ್ಭುತ ಘಟನೆಗಳು, ಊಹಿಸಲಾಗದ ಟ್ವಿಸ್ಟ್​ಗಳ ಜೊತೆ ಉತ್ತಮ ಅದರ ಛಾಯಾಗ್ರಹಣಕ್ಕಾಗಿ ಜನರಿಗೆ ಬಹಳ ಇಷ್ಟವಾಗಿದೆ, ಅನೂಪ್​ ಭಂಡಾರಿ ಅವರ ಈ ಹಿಂದಿನ ರಂಗಿತರಂಗ ಸಿನಿಮಾ ನೋಡಿವರಿಗೆ ಅವರ ನಿರ್ದೇಶನದ ಬಗ್ಗೆ ಅರಿವಿರುತ್ತದೆ. ಒಂದು ಕಥೆಯನ್ನು ಸುಂದರವಾಗಿ ಹೇಳುವ ಕಲೆ ಅವರಲ್ಲಿದೆ. ಅದೇ ರೀತಿ ಈ ಸಿನಿಮಾ ಸಹ ಮೂಡಿ ಬಂದಿದೆ. ಸಿನಿಮಾದ ಬಹುತೇಕ ದೃಶ್ಯಗಳು ಸೆಟ್​ನಲ್ಲೇ ಶೂಟ್ ಮಾಡಲಾಗಿದೆ. ಆದಾಗ್ಯೂ ಎಲ್ಲವೂ ನೈಜ ಎಂಬಂತಹ ಫೀಲ್ ಕೊಡುತ್ತದೆ. ಆರ್ಟ್​ ಡೈರೆಕ್ಟರ್​ ಶಿವಕುಮಾರ್ ಶ್ರಮ ಸಾರ್ಥಕ ಆಗಿದೆ. ಹಿನ್ನೆಲೆ ಸಂಗೀತ, ಸಂಗೀತ ಸಂಯೋಜನೆ ಮಾಡಿದ ಅಜನೀಶ್ ಲೋಕನಾಥ್ ಹಾಗು ಛಾಯಾಗ್ರಾಹಕ ವಿಲಿಯಮ್​ ಡೇವಿಡ್​ ಅವರ ಕೆಲಸ ಚಿತ್ರದ ಮೆರುಗನ್ನು ಹೆಚ್ಚಿಸಿದೆ. ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಬರುವ ಒಂದೇ ಶಾಟ್​ನ ಫೈಟಿಂಗ್ ಮೈನವಿರೇಳಿಸುತ್ತದೆ. ನೀತಾ ಅಶೋಕ್, ರವಿಶಂಕರ್ ಗೌಡ, ವಾಸುಕಿ ವೈಭವ್​, ರಮೇಶ್ ಕುಕ್ಕುವಲ್ಲಿ, ಚಿತ್ಕಲಾ ಬಿರಾದಾರ್​ ಮೊದಲಾದವರು ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್ ‘ರಾ ರಾ ರಕ್ಕಮ್ಮ’ ಹಾಡಿನಲ್ಲಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ, ರಂಗಿತರಂಗ ಶೇಡ್ ಸ್ವಲ್ಪ ಜಾಸ್ತಿ ಇದೆ. ಕೆಲ ಹಾಡು ದೃಶ್ಯಗಳು ಎಕ್ಸ್ಟ್ರಾ ಎನಿಸುತ್ತದೆ. ಆದರೂ ಅನೂಪ್ ಭಂಡಾರಿ ಸಕ್ಸಸ್ ಕಾಣುತ್ತಾರೆ ಎನ್ನೋದರಲ್ಲಿ ಅನುಮಾನವಿಲ್ಲ. ಪರಭಾಷೆಯ ಅನೇಕ ಸೆಲೆಬ್ರಿಟಿಗಳು ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಶುಭ ಕೋರಿದ್ದಾರೆ. ರಾಜಮೌಳಿ, ಕಾರ್ತಿ ಮುಂತಾದವರು ಸುದೀಪ್​ಗೆ ವಿಶ್​ ಮಾಡಿದ್ದಾರೆ. ಕನ್ನಡದ ಚಿತ್ರ ಇಷ್ಟರಮಟ್ಟಿಗೆ ಸದ್ದು ಮಾಡ್ತಿದೆ ಅಂದ್ರೆ ಅದು ಹೆಮ್ಮೆಯ ವಿಷಯ.

    Entertainment vikrant rona ಕಲೆ ಕೊಲೆ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleದಕ್ಷಿಣ ಕನ್ನಡ ಬಂದ್ ಸುದ್ದಿ ಹರಿದಾಟ: ಬಜರಂಗದಳದಿಂದ ಅಧಿಕೃತ ಸ್ಪಷ್ಟನೆ
    Next Article Bjp ಮುಖಂಡನ ಹತ್ಯೆ: ಮಹತ್ವದ ಸುಳಿವು ಲಭ್ಯ..
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe ರಲ್ಲಿ ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | PSI Exam
    • Bobbyglupe ರಲ್ಲಿ ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    • ckc6r ರಲ್ಲಿ ಒಳ ಜಗಳವೇ ಸೋಲಿಗೆ ಕಾರಣವಂತೆ.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe