Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ಶ್ವೇತ ಪತ್ರ ಬೇಕಂತೆ | BJP
    ಚುನಾವಣೆ 2024

    ಬಿಜೆಪಿಗೆ ಶ್ವೇತ ಪತ್ರ ಬೇಕಂತೆ | BJP

    vartha chakraBy vartha chakraಏಪ್ರಿಲ್ 28, 202425 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.28: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಆರ್ಥಿಕ ನೆರವು ಬಿಡುಗಡೆ ವಿಚಾರ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾತಿನ ಚಟಾಪಟಿಗೆ ಕಾರಣವಾಗಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಮಲತಾಯಿ ಧೋರಣೆ ತೋರಿಸುತ್ತಿದ್ದು,ಅಲ್ಪ ಪ್ರಮಾಣದ ಆರ್ಥಿಕ ನೆರವು ನೀಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು ನೀಡಿದೆ.
    ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಆಡಳಿತ ನಡೆಸುತ್ತಿದ್ದ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ಎಷ್ಟು ಅನುದಾನ ಬಿಡುಗಡೆ ಮಾಡಿತ್ತು ಎಂಬುದನ್ನು ಬಹಿರಂಗಪಡಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.

    ಸುದ್ದಿಗಾರದೊಂದಿಗೆ ಮಾತನಾಡಿದ ಅವರು ಈ ವಿಷಯದಲ್ಲಿ ಜನರಿಗೆ ಸತ್ಯ ಸಂಗತಿ ತಿಳಿಯಬೇಕು ಹೀಗಾಗಿ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು.
    ಅಂ.ದು ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಕೊಟ್ಟ ಪರಿಹಾರ ನೋಡಿದರೆ ಸ್ಮಶಾನದಲ್ಲಿ ಬಾಯಿ ಬಡಿದುಕೊಳ್ಳಬೇಕು. ಸಿದ್ದರಾಮಯ್ಯನವರೇ ನಾವು 4,860 ಕೋಟಿ ರೂ. ಪರಿಹಾರ ಕೇಳಿದ್ದೇವೆ ಅಂತ ಅಂತ ಹೇಳಿದ್ದಾರೆ. ಕೇಂದ್ರ 3,454 ಕೋಟಿ ರೂ. ನೀಡಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಇಬ್ಬರೂ ಸುಳ್ಳು ರಾಮಯ್ಯ, ಸುಳ್ಳು ಕುಮಾರ್‌, ಬುರುಡೆ ಕುಮಾರ್‌ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲಿನ ಬರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗೆ ಸಂಬಂಧಿಸಿದಂತೆ ಅಂದಿನ ಯುಪಿಎ ಸರ್ಕಾರ ಮತ್ತು ಇಂದಿನ ಎನ್ ಡಿ ಎ ಸರ್ಕಾರ ನೀಡಿರುವ ಪರಿಹಾರದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಅವರು, ಕಳೆದ ಹತ್ತು ವರ್ಷಗಳ ಯುಪಿಎ ಸರ್ಕಾರದ ಅವಧಿಯಲ್ಲಿ ನಾವು 44,838.59 ಕೋಟಿ ರೂ. ಕೇಳಿದ್ದರೆ ಮನೆಹಾಳರು ಕೊಟ್ಟಿದ್ದು ಕೇವಲ 3,579.22 ಕೋಟಿ ರೂ. ಮಾತ್ರ. ಕಳೆದ ಹತ್ತು ವರ್ಷದಲ್ಲಿ ಎನ್‌ಡಿಎ ಸರ್ಕಾರದ ಬಳಿ 25,728 ಕೋಟಿ ರೂ. ಕೇಳಿದ್ದರೆ 1,1482 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅಂಕಿ ಅಂಶ ಬಿಡುಗಡೆ ಮಾಡಿ ಅಕ್ರೋಶ ಹೊರಹಾಕಿದರು.
    2004-05 ರಲ್ಲಿ ಬರಗಾಲ ಇದ್ದಾಗ ಕರ್ನಾಟಕ 1,147.70 ಕೋಟಿ ರೂ. ಕೇಳಿತ್ತು. ಆದರೆ ಯುಪಿಎ ಸರ್ಕಾರ ನೀಡಿದ್ದು ಕೇವಲ 131 ಕೋಟಿ ರೂ. 2005-06ರಲ್ಲಿ ಅತಿವೃಷ್ಟಿಗೆ 4,297 ಕೋಟಿ ರೂ. ಕೇಳಲಾಗಿತ್ತು. ಯುಪಿಎ ನೀಡಿದ್ದು 358 ಕೋಟಿ ರೂ.. 2006-07ರಲ್ಲಿ ಪ್ರವಾಹ/ಬರಗಾಲಕ್ಕೆ 2.858 ಕೋಟಿ ರೂ. ಕೇಳಲಾಗಿತ್ತು. ನೀಡಿದ್ದು 226 ಕೋಟಿ ರೂ. ಮಾತ್ರ. 2007-08ರಲ್ಲಿ ಜುಲೈನಲ್ಲಿ ಪ್ರವಾಹ ವೇಳೆ 406 ಕೋಟಿ ರೂ. ಕೇಳಿದ್ರೆ ಕೊಟ್ಟಿದ್ದು ಶೂನ್ಯ.

    2008-09 ರಲ್ಲಿ ಬರಕ್ಕೆ 516 ಕೋಟಿ ರೂ ಕೇಳಿದರೆ, ಕೊಟ್ಟಿದ್ದು ಕೇವಲ 1 ಕೋಟಿ. 2009-10 ರಲ್ಲಿ ಪ್ರವಾಹ, ಬರಕ್ಕೆ 7,759 ಕೋಟಿ ರೂ. ಹಣವನ್ನು ಬಿಜೆಪಿ ಸರ್ಕಾರ ಕೇಳಿತ್ತು. ಆದರೆ ಅವರು ನೀಡಿದ್ದು 957 ಕೋಟಿ ರೂ. ಮಾತ್ರ. 2010-11 ರಲ್ಲಿ ಪ್ರವಾಹಕ್ಕೆ ಸರ್ಕಾರ 1045 ಕೋಟಿ ರೂ. ಕೇಳಿತ್ತು. ಆದರೆ ಒಂದು ರೂ. ನೀಡಿಲ್ಲ.2011-12 ರಲ್ಲಿ 6,415 ಕೋಟಿ ರೂ. ಕೇಳಿದ್ದಕ್ಕೆ 429 ಕೋಟಿ ರೂ. ನೀಡಿತ್ತು. 2012-13 ರಲ್ಲಿ ಬರಕ್ಕೆ 11,489 ಕೋಟಿ ಕೇಳಿದರೆ, 397 ಕೋಟಿ ರೂ. ಸಿಕ್ಕಿತ್ತು. 2013-14 ರಲ್ಲಿ 2,258 ಕೋಟಿ ಕೇಳಿದ್ದರೆ ಕೊಟ್ಟಿದ್ದು 668 ಕೋಟಿ ಮಾತ್ರ ಎಂದು ಮಾಹಿತಿ ನೀಡಿದರು.
    ಈಗ ಆಡಳಿತ ನಡೆಸುತ್ತಿರುವ 2015-16 ರಲ್ಲಿ 3,831 ಕೋಟಿ ರೂ. ಕೇಳಿದ್ದಕ್ಕೆ 1,853 ಕೋಟಿ ರೂ. ನೀಡಿತ್ತು. 2016-17 ರಲ್ಲಿ ಬರ ಇದ್ದಾಗ 4,703 ಕೋಟಿ ರೂ. ಕೇಳಿದ್ದರೆ ಸರ್ಕಾರ 2,293 ಕೋಟಿ ರೂ. ವಿತರಿಸಿತ್ತು. 2017-18 ರಲ್ಲಿ 3,690 ಕೋಟಿ ರೂ. ಕೇಳಿದ್ದರೆ 1,141 ಕೋಟಿ ರೂ. ನೀಡಿತ್ತು.

    2018-19 ರಲ್ಲಿ ರಾಜ್ಯ 2,434 ಕೋಟಿ ರೂ. ಕೇಳಿದ್ದರೆ ಸರ್ಕಾರ 1,248 ಕೋಟಿ ರೂ. ನೀಡಿತ್ತು. 2019-20 ರಲ್ಲಿ 3,837 ಕೋಟಿ ರೂ. ಕೇಳಿದ್ದರೆ 3,412 ಕೋಟಿ ರೂ. ಸಿಕ್ಕಿತ್ತು. 2020-21 ರಲ್ಲಿ ಪ್ರವಾಹ ಬಂದಾಗ 2,242.48 ಕೋಟಿ ರೂ. ಕೇಳಿದ್ದಕ್ಕೆ 1,480 ಕೋಟಿ ರೂ. ನೀಡಿತ್ತು.
    2021-22 ರಲ್ಲಿ ಪ್ರವಾಹ, ಭೂಕುಸಿತ ವೇಳೆ 2122 ಕೋಟಿ ರೂ. ಕೇಳಿದ್ದರೆ ಸರ್ಕಾರ 2,255.8 ಕೋಟಿ ರೂ. ನೀಡಿತ್ತು. 2022-23 ರಲ್ಲಿ 1944 ಕೋಟಿ ರೂ. ಕೇಳಿದ್ದರೆ 1,603 ಕೋಟಿ ರೂ. ಸಿಕ್ಕಿತ್ತು. 2023-24 ರಲ್ಲಿ18171 ಕೋಟಿ ರೂ. ಕೇಳಿದ್ದರೆ 4,151.42 ಕೋಟಿ ರೂ.(ಎನ್‌ಡಿಆರ್‌ಎಫ್‌+ಎಸ್‌ಡಿಆರ್‌ಎಫ್‌ ಸೇರಿ) ಸಿಕ್ಕಿದೆ ಎಂದು ಅಶೋಕ್‌ ತಿಳಿಸಿದರು.

    BJP ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಉಪ್ಪು ತಿಂದವರು ನೀರು ಕುಡಿಯಲೇ ಬೇಕು | Prajwal Revanna
    Next Article ಲೈಂಗಿಕ ಕಿರುಕುಳ ಆರೋಪ: ತನಿಖೆ ಕೈಗೆತ್ತಿಕೊಂಡ ಎಸ್ಐಟಿ | Prajwal Revanna
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_zuot ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Это карточка гугл Бизнес ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • elektrokarniz kypit_rlsl ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe