Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿಗೆ ಲಗಾಮು ಹಾಕಿ! | Ramesh Jarkiholi
    ರಾಜಕೀಯ

    ರಮೇಶ್ ಜಾರಕಿಹೊಳಿಗೆ ಲಗಾಮು ಹಾಕಿ! | Ramesh Jarkiholi

    vartha chakraBy vartha chakraಆಗಷ್ಟ್ 12, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನಮಂಡಲದ ಪ್ರತಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ನೇಮಕದ ಬಿಕ್ಕಟ್ಟಿನಿಂದ ತತ್ತರಿಸಿರುವ ರಾಜ್ಯ ಬಿಜೆಪಿಯಲ್ಲಿ‌ ಭಿನ್ನಮತದ ಧಗೆ ಆವರಿಸಿದೆ. ಅದರಲ್ಲೂ ಬೆಳಗಾವಿ ಬಿಜೆಪಿಯ ಬಿಕ್ಕಟ್ಟು ವರಿಷ್ಠರಿಗೆ ಹೊಸ ತಲೆ ನೋವು ತಂದಿದೆ.
    ಬೆಳಗಾವಿ ಬಿಜೆಪಿಯ ಬಹುತೇಕ ನಾಯಕರು ಮಾಜಿ ಮಂತ್ರಿ ರಮೇಶ್‌ ಜಾರಕಿಹೊಳಿ ವಿರುದ್ಧ ಸಮರ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,ಗೃಹ ಮಂತ್ರಿ ಅಮಿತ್ ಶಾ,ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಪತ್ರ ಬರೆದಿರುವ ಜಿಲ್ಲೆಯ ಬಿಜೆಪಿ ನಾಯಕರು ರಮೇಶ್ ಜಾರಕಿಹೊಳಿ ಅವರಿಗೆ ನೀಡುತ್ತಿರುವ ಪ್ರಾತಿನಿಧ್ಯ ಕಡಿಮೆ‌ ಮಾಡಿ ಎಂದು ಮನವಿ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಬಿಜೆಪಿಯ ಅನಭಿಷಕ್ತ ದೊರೆಯಂತೆ ವರ್ತಿಸುತ್ತಿದ್ದಾರೆ.ಯಾವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ,ಕಾರ್ಯಕರ್ತರ ಅಭಿಪ್ರಾಯಗಳಿಗೆ ಮಾನ್ಯತೆ ನೀಡುವುದಿಲ್ಲ.ತಾವು ಹೇಳಿದ್ದೇ ಆಗಬೇಕು ಎಂಬಂತೆ ವರ್ತಿಸುತ್ತಿದ್ದಾರೆ. ತಮ್ಮ ಆಪ್ತ ವಲಯದಲ್ಲಿರುವರನ್ನು ಬಿಟ್ಟರೆ ಉಳಿದ ಯಾವ ನಾಯಕರನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಇದು ಪಕ್ಷ ಸಂಘಟನೆಯ ಮೇಲೆ ಗಂಭೀರ ಸ್ವರೂಪದ ಪರಿಣಾಮ ಬೀರುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಗೊತ್ತಾಗಿದೆ.

    ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಖುದ್ದಾಗಿ ಮುಂದೆ ಬಂದು ನಾಯಕತ್ವ ವಹಿಸಿಕೊಂಡರು. ಅವರ ಧೋರಣೆ ಜಿಲ್ಲೆಯ ಇತರ ನಾಯಕರು ಹಾಗೂ ಒಂದು ದೊಡ್ಡ ಸಮುದಾಯದ ಮುಖಂಡರಿಗೆ ಇಷ್ಟವಾಗಲಿಲ್ಲ. ಕಾರ್ಯಕರ್ತರಲ್ಲೂ ಗೊಂದಲಗಳು ಮೂಡಿದವು. ಹೀಗಾಗಿ, ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11ರಲ್ಲಿ ಬಿಜೆಪಿಗೆ ಸೋಲಾಗಿದೆ. 13ರಷ್ಟಿದ್ದ ಬಿಜೆಪಿ ಶಾಸಕರ ಸಂಖ್ಯೆ ಈಗ 7ಕ್ಕೆ ಇಳಿದಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ ಇವರ ಚಟುವಟಿಕೆಗಳಿಗೆ ಈಗಲೇ ಕಡಿವಾಣ ಹಾಕಬೇಕು, ಅವರನ್ನು ಗೋಕಾಕ್ ವಿಧಾನಸಭೆ ಕ್ಷೇತ್ರಕ್ಕೆ ಸೀಮಿತಗೊಳಿಸಬೇಕು.ಜಿಲ್ಲೆಯ ಇತರೆ ಕ್ಷೇತ್ರಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಲು ಬಿಡಬಾರದು ಎಂದು ಮನವಿ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರೇ ನಾಯಕತ್ವ ವಹಿಸಿಕೊಳ್ಳುವ ಇರಾದೆ ಇದೆ. ಇದಕ್ಕೆ ಅವಕಾಶ ನೀಡಬಾರದು ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಸಾಮೂಹಿಕ ನಾಯಕತ್ವದ ಮೇಲೆ ನಂಬಿಕೆ ಇಟ್ಟ ಬಿಜೆಪಿಯಲ್ಲಿ, ರಮೇಶ ಜಾರಕಿಹೊಳಿ ಏಕಮಾತ್ರ ನಾಯಕ ಎಂಬಂತೆ ಬಿಂಬಿಸಿಕೊಂಡರು. ಇದನ್ನು ಕಾರ್ಯಕರ್ತರು ಒಪ್ಪಿಕೊಳ್ಳಲಿಲ್ಲ. ಮುಂದೆಯೂ ಲೋಕಸಭೆ ಚುನಾವಣೆ ಕಾಲಕ್ಕೆ ಇದೇ ರೀತಿಯ ಭಾವನೆ ಮೂಡಬಾರದು’ ಎಂದು ಕೆಲವರು ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

    ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ, ಅಥಣಿ, ಕಾಗವಾಡ, ಯಮಕನಮರಡಿ, ರಾಮದುರ್ಗ ಕ್ಷೇತ್ರಗಳಲ್ಲಿ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರನ್ನೇ ಕಣಕ್ಕಿಳಿಸಿದರು. ಅವರು ಟಿಕೆಟ್‌ ಕೊಡಿಸಿದ ಯಾವ ಅಭ್ಯರ್ಥಿಯೂ ಗೆಲ್ಲಲಿಲ್ಲ. ಅಲ್ಲದೇ, ಉಳಿದ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳಿಗೇ ಅಡ್ಡಗಾಲು ಹಾಕಿದರು ಎಂದು ಪತ್ರದಲ್ಲಿ ವಿವರಿಸಿರುವುದಾಗಿ ತಿಳಿದು ಬಂದಿದೆ ಸೋಲಿನಿಂದ ಕಂಗೆಟ್ಟು ಪ್ರತಿಪಕ್ಷ ನಾಯಕನ ಆಯ್ಕೆಗೆ ಒಮ್ಮತ ಮೂಡಿಸಲು ಪ್ರಯತ್ನ ನಡೆಸಿರುವ ಪಕ್ಷದಲ್ಲಿ ಜಾರಕಿಹೊಳಿ ಅವರ ಕುರಿತು ಉಂಟಾಗಿರುವ ವಿದ್ಯಮಾನ ಹೊಸ ಸಮಸ್ಯೆ ಹುಟ್ಟು ಹಾಕಿದೆ.

    Congress Karnataka m News Politics Ramesh Jarkiholi ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕಮೀಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ | DK Shivakumar
    Next Article ಗುತ್ತಿಗೆದಾರರ ಕಮೀಷನ್ – ಬಿಜೆಪಿ ಕೃಪಾಪೋಷಿತ ನಾಟಕ | BJP
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ГЁ possibile ottenere cefixime economico senza ricetta ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • http://arecahotel.vn/betvisa-118/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Timothyfloor ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe