Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳ ವಿರುದ್ಧ ಕರ್ನಾಟಕದ ಸಮರ | Kerala
    Trending

    ಕೇರಳ ವಿರುದ್ಧ ಕರ್ನಾಟಕದ ಸಮರ | Kerala

    vartha chakraBy vartha chakraಮಾರ್ಚ್ 31, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.31: ಲೋಕಸಭೆ ಚುನಾವಣೆ ಅಖಾಡಕ್ಕೆ ಭರ್ಜರಿ ರಂಗು ಬಂದಿರುವ ಬೆನ್ನೆಲ್ಲೇ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಉಂಟಾಗಿರುವ ನೀರಿನ ಕೊರತೆ ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.
    ಬೆಂಗಳೂರಿನಲ್ಲಿ ನೀರಿನ ಕೊರತೆ ಹೆಚ್ಚಾಗಿದ್ದು ಅಲ್ಲಿ ತಮ್ಮ ಉದ್ಯಮ ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಹೀಗಾಗಿ ಕೇರಳಕ್ಕೆ ಬನ್ನಿ ಇಲ್ಲಿ ನೀರು ವಿದ್ಯುತ್ ಸೇರಿದಂತೆ ಎಲ್ಲ ರೀತಿಯ ಮೂಲ ಸೌಲಭ್ಯ ಯಥೇಚ್ಛವಾಗಿದೆ ಎಂದು ಕೇರಳ ಕೈಗಾರಿಕೆ ಸಚಿವ ನೀಡಿರುವ ಹೇಳಿಕೆ ರಾಜ್ಯ ಸರ್ಕಾರದ ಕೆಂಗಣ್ಣಿಗೆ ಕಾರಣವಾಗಿದೆ.

    ಕರ್ನಾಟಕದಲ್ಲಿ ನೆಲೆಯೂರಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸುತ್ತಿರುವ ಕೈಗಾರಿಕೋದ್ಯಮಿಗಳಿಗೆ ಕರ್ನಾಟಕ ತೊರೆದು ನಮ್ಮ ರಾಜ್ಯಕ್ಕೆ ಬನ್ನಿ ಎಂದು ಕೇರಳ (Kerala) ರಾಜ್ಯ ಆಹ್ವಾನ ನೀಡುತ್ತಿರುವುದು ಒಕ್ಕೂಟ ವ್ಯವಸ್ಥೆಗೆ ಮಾರಕ ಎಂದು ಬೃಹತ್ ಕೈಗಾರಿಕೆ ಸಚಿವ ಪಾಟೀಲ್ ಹೇಳಿದ್ದಾರೆ.
    ಟೀ ಕುಡಿತಂತೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು ಬರಗಾಲ ಮತ್ತು ಬೇಸಿಗೆ ಎರಡೂ ಸೇರಿಕೊಂಡು ನಮ್ಮ ದೇಶವೂ ಸೇರಿದಂತೆ ಜಗತ್ತಿನ ಎಲ್ಲೆಡೆಯೂ ನೀರಿನ ಕೊರತೆ ಉಂಟಾಗಿರುವುದು ನಿಸರ್ಗ ಸಹಜ ವಿದ್ಯಮಾನದ ಪರಿಣಾಮವಾಗಿದೆ. ಇದಕ್ಕೆ ಕೇರಳವೂ ಹೊರತಲ್ಲ. ಇಂತಹ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕಾ ಸಚಿವರು ಬೆಂಗಳೂರಿನಲ್ಲಿ ನೀರಿಲ್ಲವೆಂದು ತಮ್ಮ ರಾಜ್ಯಕ್ಕೆ ಬರುವಂತೆ ಇಲ್ಲಿನ ಐ.ಟಿ. ಕಂಪನಿಗಳಿಗೆ ಆಹ್ವಾನ ನೀಡುತ್ತಿರುವುದು ಒಕ್ಕೂಟ ವ್ಯವಸ್ಥೆಯ ತತ್ತ್ವಕ್ಕೆ ವಿರುದ್ಧವಾದುದು. ಅವರ ಈ ನಡವಳಿಕೆ ಆರೋಗ್ಯಕರವಲ್ಲ’ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
    `ಕೇರಳದ ಕೈಗಾರಿಕಾ ಸಚಿವ ಪಿ.ರಾಜೀವ್ ಅವರು ನೀರಿನ ಕೊರತೆಯ ಹಿನ್ನೆಲೆಯಲ್ಲಿ ಬೆಂಗಳೂರನ್ನು ಬಿಟ್ಟು ತಮ್ಮ ರಾಜ್ಯಕ್ಕೆ ಬಂದು ನೆಲೆಯೂರುವಂತೆ ಐಟಿ ಕಂಪನಿಗಳಿಗೆ ಆಹ್ವಾನಿಸಿರುವ ಸಂಗತಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದು ಒಂದು ರೀತಿ ಕುಚೋದ್ಯದ ನಡೆ ಎಂದು ಟೀಕಿಸಿದ್ದಾರೆ.

    ನಾವೆಲ್ಲರೂ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಅಂದಮೇಲೆ, ಪರಸ್ಪರ ಕೊಡು-ಕೊಳ್ಳುವಿಕೆ ಇರಬೇಕೇ ವಿನಾ ಪರಿಸ್ಥಿತಿಯ ದುರ್ಲಾಭ ಪಡೆಯಲು ನೋಡಬಾರದು. ಇದರಿಂದ ಕೊನೆಗೆ ಯಾರಿಗೂ ಒಳ್ಳೆಯದಾಗುವುದಿಲ್ಲ. ಈ ಪ್ರಾಥಮಿಕ ಸತ್ಯವನ್ನು ಕೇರಳದ ಸಚಿವರು ಅರ್ಥ ಮಾಡಿಕೊಳ್ಳಬೇಕು’ ಎಂದು ಅವರು ತಿಳಿಸಿದ್ದಾರೆ.
    ಈ ವರ್ಷ ಜಗತ್ತಿನ ಎಲ್ಲೆಡೆಗಳಲ್ಲೂ ನೀರಿನ ಕೊರತೆ ಕಾಣಿಸಿಕೊಂಡಿದೆ. ಇದಕ್ಕೆ ಕೇರಳವೂ ಹೊರತಲ್ಲ. ಬೆಂಗಳೂರಿನಲ್ಲಿ ಐ.ಟಿ. ಕಂಪನಿಗಳು ನೆಲೆಯೂರಿರುವ ಪ್ರದೇಶಗಳಲ್ಲಿ ಕೂಡ ಗಂಭೀರ ಸ್ವರೂಪದಲ್ಲೇನೂ ನೀರಿನ ಕೊರತೆ ಕಾಣಿಸಿಕೊಂಡಿಲ್ಲ. ಜತೆಗೆ ನಮ್ಮಲ್ಲಿ ಕೇರಳ ಮೂಲದ ಲಕ್ಷಾಂತರ ಯುವಕ- ಯುವತಿಯರು ನೆಮ್ಮದಿಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಅವರು ಮರೆಯಬಾರದು ಎಂದು ಅವರು ಸಲಹೆ ನೀಡಿದ್ದಾರೆ.
    ಕೇರಳ ಒಂದು ರಾಜ್ಯವಾಗಿ ಎಷ್ಟು ಬೇಕಾದರೂ ಬಂಡವಾಳ ಆಕರ್ಷಿಸಲಿ. ಆ ಸ್ವಾತಂತ್ರ್ಯ ಅವರಿಗಿದೆ. ಅದು ಬಿಟ್ಟು ಕ್ಷುಲ್ಲಕ ರಾಜಕಾರಣ ಸರಿಯಲ್ಲ ಎಂದು ಟೀಕಿಸಿದ್ದಾರೆ.

    ಐ.ಟಿ. ವರಮಾನ ಮತ್ತು ರಫ್ತು ವಹಿವಾಟಿನಲ್ಲಿ ಕರ್ನಾಟಕವು ದೇಶಕ್ಕೇ ಮೊದಲ ಸ್ಥಾನದಲ್ಲಿದ್ದು, ನಮ್ಮಲ್ಲಿ ಕೈಗಾರಿಕಾಸ್ನೇಹಿ ನೀತಿಗಳಿವೆ. ಇಲ್ಲಿರುವಷ್ಟು ಜಾಗತಿಕ ಮಟ್ಟದ ಕಂಪನಿಗಳು ಬೇರೆಲ್ಲೂ ಇಲ್ಲ. ಹೀಗಾಗಿ ಬೆಂಗಳೂರು ಕಳೆದ ಎರಡೂವರೆ ದಶಕಗಳಲ್ಲಿ ದೇಶದ ಹೊಸ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಆದರೆ ಕೇರಳಕ್ಕೆ ಇಂತಹ ಸಾಧನೆ ಸಾಧ್ಯವಾಗಿಲ್ಲ. ನೀರಿನ ಕೊರತೆಯನ್ನೇ ಮುಂದಿಟ್ಟುಕೊಂಡು ಇನ್ನೊಬ್ಬರ ಅವಕಾಶಗಳನ್ನು ಕಸಿದುಕೊಳ್ಳುತ್ತೇವೆ ಎನ್ನುವ ಚಿಂತನೆ ಅತ್ಯಂತ ಅಪಾಯಕಾರಿಯಾದುದು ಎಂದು ಸಚಿವರು ತೀಕ್ಷ್ಣವಾಗಿ ಉತ್ತರಿಸಿದ್ದಾರೆ.
    ಕೇರಳದಲ್ಲಿ 40 ನದಿಗಳಿವೆ ಎಂದು ಅಲ್ಲಿನ ಸಚಿವರು ಹೇಳಿದ್ದಾರೆ. ಆದರೆ ಅಲ್ಲಿ ಎಷ್ಟು ಅಣೆಕಟ್ಟುಗಳಿವೆ? ಎಷ್ಟರಲ್ಲಿ ಈಗ ನೀರಿದೆ? ಮುಂತಾದ ಪ್ರಶ್ನೆಗಳು ಇಲ್ಲಿ ಏಳುತ್ತವೆ. ಕೇವಲ ನದಿಗಳಿದ್ದ ಮಾತ್ರಕ್ಕೆ ಕಂಪನಿಗಳನ್ನು ಕಟ್ಟುವುದು ಸಾಧ್ಯವಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಮುಂಗಾರುಪೂರ್ವ ಮಳೆ ಬರಲಿದ್ದು, ಬೆಂಗಳೂರು ಸೇರಿದಂತೆ ಎಲ್ಲೆಡೆಯೂ ಪರಿಸ್ಥಿತಿ ಸುಧಾರಿಸಲಿದೆ ಎಂದು ಅವರು ವಿವರಿಸಿದ್ದಾರೆ.

    Verbattle
    Verbattle
    Verbattle
    Karnataka kerala News Politics ಆರೋಗ್ಯ ಚುನಾವಣೆ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸಿಕ್ತು ಬಿಗ್ ರಿಲೀಫ್ | Darshan
    Next Article ಮನ್ಸೂರ್ ಅಲಿ ಖಾನ್ ಅವರನ್ನು ಗೆಲ್ಲಿಸಲು ಜಮೀರ್ ಕರೆ | Mansoor Ali Khan
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Voklhw on ಫೆಬ್ರವರಿ 11, 2026 7:48 ಅಪರಾಹ್ನ

      betmgm free 200 online casino betmgm play mgm online betting

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Cxfbbh ರಲ್ಲಿ ದನದ ಕೊಟ್ಟಿಗೆಯಲ್ಲಿನ ಕಚೇರಿಗೆ 34 ಕೋಟಿ ವರ್ಗಾವಣೆ .
    • LarryCax ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.