Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನಾಭರಣ ವಶ..
    ಸುದ್ದಿ

    ಚಿನ್ನಾಭರಣ ವಶ..

    vartha chakraBy vartha chakraಮೇ 30, 2022Updated:ಮೇ 30, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.29– ವಿರೋಧಿಗಳು ನೀಡಿದ ಮಾಹಿತಿಯಿಂದಾಗಿ ಜಾರಿ‌ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ನನ್ನ ಮನೆ ಕಚೇರಿ ಹಾಗೂ ನಿಕಟವರ್ತಿಗಳ‌ ಮನೆಗಳ ಮೇಲೆ ದಾಳಿ‌ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ರಿಯಲ್ ಎ ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರು ತಿಳಿಸಿದ್ದಾರೆ.
    ನನ್ನ ಒಡೆತನದ ಬಂಗಲೆ, ಕಚೇರಿ ಸೇರಿ 7 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಿನ್ನೆ ನಡೆಸಿದ ದಾಳಿಯು ಪೂರ್ಣಗೊಂಡ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು 8 ಲಕ್ಷ 60 ಸಾವಿರ ರೂ 1 ಕೋಟಿ 70 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದರು.
    ಇಡಿ ಅಧಿಕಾರಿಗಳು ಶೋಧನಾ ವಾರಂಟ್ ಸಮೇತ ಬಂದಿದ್ದರು. ನನ್ನ ವ್ಯವಹಾರಗಳು ಎಲ್ಲವೂ ಸರಿಯಾಗಿದ್ದು ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
    ದಾಖಲೆ ಸಮೇತ ದೆಹಲಿಗೆ ಬರುವಂತೆ ಇಡಿಯವರು ಹೇಳಿದ್ದಾರೆ, ಶಾಸಕ ಜಮೀರ್ ಅಹ್ಮದ್ ಅವರಿಗೆ 3 ಕೋಟಿ ರೂ. ಸಾಲ ನೀಡಿದ್ದು ಅವರ ಮನೆ‌ ಮೇಲೆ ಇಡಿ ದಾಳಿ ನಡೆದಿತ್ತು.
    ಈ ವೇಳೆ ನನ್ನ ಇಡಿ ವಿಚಾರಣೆಗೆ ಕರೆದಾಗ ಸಾಲದ ಬಗ್ಗೆ ಹೇಳಿದ್ದೆ. 2013ರಲ್ಲಿ ಜಮೀರ್​ಗೆ ಸಾಲ ನೀಡಿದ ಬಗ್ಗೆ ಮಾಹಿತಿ ನೀಡಿದ್ದೆ. ಹಣ ವಾಪಸ್ ನೀಡಲು ಸಮಯ ಕೇಳಿದ್ದಾರೆ ಎಂದು ಹೇಳಿದ್ದೆ. ಈ ಬಗ್ಗೆ ನನಗೆ ಆಗ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಎಂಎಲ್​ಸಿ ಚುನಾವಣೆ ಸ್ಪರ್ಧೆಗೂ ಮುನ್ನ ನೋಟಿಸ್ ನೀಡಿದ್ದರು.ಈಗ ಇಡಿ ಅಧಿಕಾರಿಗಳು ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಿದರು.
    40ರಿಂದ50 ಆಸ್ತಿ:
    ನಾನು ಕಾನೂನು ಬದ್ಧವಾಗಿ ವ್ಯಾಪಾರ ಮಾಡುತ್ತಿದ್ದೇನೆ, ಕಾನೂನು ಬದ್ಧವಾಗಿಯೇ ಜಮೀನು ಖರೀದಿಸಿದ್ದೇನೆ. ಜಮೀನುಗಳ ಕುರಿತ ದಾಖಲಾತಿಗಳನ್ನು ಇಡಿ ಅವರಿಗೆ ನೀಡಿದ್ದೇನೆ. ತನ್ನ ಆಸ್ತಿಗೆ ಸಂಬಂಧಿಸಿದ ಎಲ್ಲಾ ತೆರಿಗೆ ಪಾವತಿಸಿದ್ದೇನೆ. ಇಡಿ ಅಧಿಕಾರಿಗಳ ಮನೆಯ ಎಲ್ಲಾ ಕಡೆ ಶೋಧ ನಡೆಸಿದ್ದಾರೆ. ಮನೆಯಲ್ಲಿ ಪತ್ತೆಯಾದ ನಗದು ಹಣ ವಾಪಸ್ ನೀಡಿದ್ದಾರೆ. ಮನೆಯಲ್ಲಿ ಪತ್ತೆಯಾದ ಚಿನ್ನಕ್ಕೆ ದಾಖಲೆ ನೀಡಲು ಹೇಳಿದ್ದಾರೆ. ನನ್ನ ಬಳಿ 40 ರಿಂದ 50 ಆಸ್ತಿಗಳಿವೆ.ಕಾನೂನುಬದ್ಧವಾಗಿಯೇ ಎಲ್ಲವನ್ನೂ ಖರೀದಿ ಮಾಡಿದ್ದೇನೆ ಎಂದು ಅಭಿಪ್ರಾಯಪಟ್ಟರು.
    ಸಿಆರ್‌ಪಿಎಫ್ ಭದ್ರತೆ:
    ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದಾರೆ. ಬೆಳಗ್ಗೆ 6.30ಕ್ಕೆ 20ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡವು ದಾಳಿ ನಡೆಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸಿಆರ್‌ಪಿಎಫ್ ಸಿಬ್ಬಂದಿಯಿಂದ ಭದ್ರತೆ ಪಡೆದಿದ್ದರು.
    23 ಬ್ಯಾಂಕ್ ಖಾತೆ:
    ಬಾಬು ಅವರ ಹಲವು ಕಡೆಗಳ ನೂರಾರು ಕೋಟಿ ರೂ. ಮೌಲ್ಯದ ಜಮೀನು, ನಿವೇಶನ, ಅಪಾರ್ಟ್‌ಮೆಂಟ್, ಕಟ್ಟಡಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಇಡಿ ಕೈ ಸೇರಿದೆ. ಮೊದಲ ಪತ್ನಿ ರುಕ್ಸಾನ, ಎರಡನೆ ಪತ್ನಿ ಶಾಜಿಯಾ, ಮಗಳು ಉಮ್ರಾ ಫರೀಫ್, ಮಗ ಅಫ್ನಾನ್ ಸೇರಿ ಕುಟುಂಬಸ್ಥರ ಹೆಸರಿನಲ್ಲಿ ಒಟ್ಟು 23 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಬಾಬು ತಮ್ಮ ಹೆಸರಿನಲ್ಲಿ 12 ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದಾರೆ. ಕುಟುಂಬಸ್ಥರ ಖಾತೆಯಲ್ಲಿ 70 ಕೋಟಿಗೂ ಅಧಿಕ ಹಣ ಇರುವುದು ಇಡಿ ತನಿಖೆಯಲ್ಲಿ ತಿಳಿದು ಬಂದಿದೆ.

    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹಾರ್ದಿಕ್ ಸರ್ವಾಂಗೀಣ ಆಟ: ಚೊಚ್ಚಲ ಪ್ರಯತ್ನದಲ್ಲೇ ಐಪಿಎಲ್ ಟ್ರೋಫಿ ಗೆದ್ದ ಗುಜರಾತ್‌ ಟೈಟಾನ್ಸ್
    Next Article ಪ್ರಶ್ನೆ ಪತ್ರಿಕೆ ಬಹಿರಂಗ
    vartha chakra
    • Website

    Related Posts

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    ಸುತ್ತಿಕೊಳ್ಳುತ್ತಿದೆ ಮುಡಾ ಹಗರಣದ ಉರುಳು.

    ಸೆಪ್ಟೆಂಬರ್ 17, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Seo Backlinks ರಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    • dizainerskie kashpo_kmEt ರಲ್ಲಿ ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • dizainerskie kashpo_haEt ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe