Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » MP ಆಗ್ತಾರಾ ಕಿಚ್ಚ ಸುದೀಪ್?
    ರಾಜ್ಯ

    MP ಆಗ್ತಾರಾ ಕಿಚ್ಚ ಸುದೀಪ್?

    vartha chakraBy vartha chakraಜನವರಿ 10, 2023Updated:ಜನವರಿ 10, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಸಿನಿಮಾ ರಂಗದಲ್ಲಿ ಕಿಚ್ಚ ಸುದೀಪ್ (Kichcha Sudeep) ಅತ್ಯಂತ ಬೇಡಿಕೆಯುಳ್ಳ ಹೆಸರು. ಕನ್ನಡದಲ್ಲಷ್ಟೇ ಅಲ್ಲ ತಮಿಳು,ತೆಲುಗು, ಹಿಂದಿ ಸೇರಿದಂತೆ ಭಾರತದ ಹಲವು ಭಾಷೆಗಳ ಸಿನಿ ಪ್ರೇಮಿಗಳಿಗೆ ಅತ್ಯಂತ ಪರಿಚಿತ ಹೆಸರು.
    ರಾಜಮೌಳಿ ಅವರ ಈಗ ಸಿನಿಮಾದ ಮೂಲಕ ತೆಲುಗು, ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಕಿಚ್ಚ ಕನ್ನಡದಲ್ಲಂತೂ ಬಹು ಬೇಡಿಕೆಯುಳ್ಳ ನಟ.ಇಲ್ಲಂತೂ ದೊಡ್ಡ ಅಭಿಮಾನಿ ಪಡೆಯನ್ನೆ ಹೊಂದಿದ್ದಾರೆ ಪಟ್ಟಣ ಪ್ರದೇಶದಲ್ಲಷ್ಟೇ ಅಲ್ಲ ಸಣ್ಣ-ಸಣ್ಣ ಹಳ್ಳಿಗಳಲ್ಲೂ ಅಭಿಮಾನಿಗಳ ಸಂಘಗಳಿವೆ.
    ಇಂತಹ ಕಿಚ್ಚ ಸುದೀಪ್ ನ ಮುಂದೆ ದೊಡ್ಡ ಬೇಡಿಕೆಯೊಂದು ಬಂದಿದೆ ಅದನ್ನು ‌ತಿಳಿಯೋ ಮೊದಲು ನಮ್ಮ ಚಾನೆಲ್ ಸಬ್ ಸ್ಕ್ರೈಬ್ ಮಾಡಿ ಷೇರ್ ಮಾಡಿ.
    ಚುನಾವಣೆಯ ಸಮಯದಲ್ಲಿ ತಮ್ಮ ಆಪ್ತರ ಪರವಾಗಿ ಸಿನಿಮಾ ನಟ-ನಟಿಯರು ಪ್ರಚಾರದ ಅಖಾಡಕ್ಕೆ ಧುಮುಕುವುದು ಸಹಜ.ತಮ್ಮ ನೆಚ್ಚಿನ ನಟ ಹೇಳಿದವರಿಗೆ ನಾವು ವೋಟ್ ಕೊಡೋದು ಅಂತಾ ಅಭಿಮಾನಿಗಳು ಹೇಳುತ್ತಾರೆ.ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ ಕೆಲವರು ಬಹು ಬೇಡಿಕೆಯುಳ್ಳ ನಟರನ್ನು ತಮ್ಮ ಪರ ಪ್ರಚಾರಕ್ಕೆ ಬಳಸಿಕೊಳ್ಳಲು ಪ್ರಯತ್ನ ಮಾಡುತ್ತಾರೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಬಾರಿ ಕಿಚ್ಚ ಸುದೀಪ್ ಮುಂದೆ ಹೊಸ ಬೇಡಿಕೆ ಇಡಲಾಗಿದೆ.
    ಸುದೀಪ್ ಅವರ ಸ್ನೇಹಿತೆ ಮಾಜಿ ಸಂಸದೆ ಕನ್ನಡದ ಮೋಹಕ ತಾರೆ ರಮ್ಯಾ ಇತ್ತೀಚೆಗಷ್ಟೇ ಸುದೀಪ್ ಮನೆಗೆ ಭೇಟಿ ನೀಡಿದ್ದರು.ಈ ವೇಳೆ ರಮ್ಯಾ ಕಿಚ್ಚ ಸುದೀಪ್ ಅವರನ್ನು ಸಕ್ರಿಯ ರಾಜಕಾರಣ ಪ್ರವೇಶಿಸುವಂತೆ ಸಲಹೆ ಮಾಡಿದ್ದಾರೆ.ಅಷ್ಟೇ ಅಲ್ಲ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಿದ್ದಾರೆ.
    ಹೇಳಿ-ಕೇಳಿ ಸುದೀಪ್ ಅವರದ್ದು ರಾಜಕೀಯ ಹಿನ್ನೆಲೆಯ ಕುಟುಂಬ. ಇವರ ಚಿಕ್ಕಪ್ಪ ಸರೋವರ ಶ್ರೀನಿವಾಸ್ ಜನತಾ ಪರಿವಾರಕ್ಕೆ ಸೇರಿದವರು. ವಿಧಾನಪರಿಷತ್ ಸದಸ್ಯರಾಗಿದ್ದ ಇವರು ಇದೀಗ ಕಾಂಗ್ರೆಸ್ ನಲ್ಲಿದ್ದಾರೆ.ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಆಪ್ತರು. ಈ ಎಲ್ಲಾ ಹಿನ್ನೆಲೆಯಲ್ಲಿ ರಮ್ಯಾ ಅವರು ಸುದೀಪ್ ಅವರಿಗೆ ಈ ಆಹ್ವಾನ ನೀಡಿದ್ದಲ್ಲದೆ ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜೊತೆ ಮಾತನಾಡುವಂತೆ ಸಲಹೆ ಮಾಡಿದ್ದಾರೆ ಸುದೀಪ್ ಗೆ ರಮ್ಯಾ ಜೊತೆಗೆ ರಾಹುಲ್ ಗಾಂಧಿ ಕೂಡಾ ಆಪ್ತರು.
    ವಾಲ್ಮೀಕಿ ಸಮುದಾಯಕ್ಕೆ ಸೇರಿದ ಕಿಚ್ಚ ಸುದೀಪ್ ಕಾಂಗ್ರೆಸ್ ಸೇರಿದರೆ ಆ ಸಮುದಾಯ ತಮ್ಮ ಪರ ನಿಲ್ಲಲಿದೆ ಎನ್ನುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ. ಒಂದು ಕಾಲದಲ್ಲಿ ಕಾಂಗ್ರೆಸ್ ನ ಕಟ್ಟಾ ಬೆಂಬಲಿಗರಾಗಿದ್ದ ವಾಲ್ಮೀಕಿ ಸಮುದಾಯದ ಮತದಾರರು ಬದಲಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿ ಎಸ್ ಜೊತೆ ಹಂಚಿ ಹೋಗಿದ್ದಾರೆ.
    ಹೀಗಾಗಿ ಇದೇ ಸಮುದಾಯಕ್ಕೆ ಸೇರಿದ ಕಿಚ್ಚ ಸುದೀಪ್ ಕಾಂಗ್ರೆಸ್ ಗೆ ಬಂದರೆ ಆ ಸಮುದಾಯದ ಮತದಾರರು ಮತ್ತೆ ಕಾಂಗ್ರೆಸ್ ನತ್ತ ವಾಲುತ್ತಾರೆ ಎನ್ನುವುದು ಲೆಕ್ಕಾಚಾರ ಹೀಗಾಗಿ ಅವರನ್ನು ಕಾಂಗ್ರೆಸ್ ಸೇರುವಂತೆ ಮನವೊಲಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಶಿವಮೊಗ್ಗ ಅಥವಾ ದಾವಣಗೆರೆ ಇಲ್ಲವೇ ಬಳ್ಳಾರಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಮನವೊಲಿಸಲಾಗುತ್ತಿದೆ.ಆದರೆ ಇಲ್ಲಿಯವರೆಗೆ ಸುದೀಪ್ ತಮ್ಮ ಅಭಿಪ್ರಾಯ ತಿಳಿಸಿಲ್ಲ ಹೀಗಾಗಿ ವಿದ್ಯಮಾನಗಳು ಕುತೂಹಲ ಮೂಡಿಸಿವೆ.

    m ಕಾಂಗ್ರೆಸ್ ಕಿಚ್ಚ ಸುದೀಪ್ ರಾಜಕೀಯ ಸಿದ್ದರಾಮಯ್ಯ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous ArticleAmericaದಲ್ಲಿ ಉದ್ಯೋಗ ಇನ್ನು ಕನಸು ಮಾತ್ರ?
    Next Article ಪ್ರಜಾಧ್ವನಿ ಬಸ್ ಯಾತ್ರೆ
    vartha chakra
    • Website

    Related Posts

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು

    ಜನವರಿ 4, 2026

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ncrlvnh ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • ayozppi ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • CliffPaf ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    ಜನವರಿ 6, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.