Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Kurnool ನವರಾತ್ರಿ ಕಾಳಗ ಸತ್ತವರೆಷ್ಟು ಗೊತ್ತಾ.?
    ಸುದ್ದಿ

    Kurnool ನವರಾತ್ರಿ ಕಾಳಗ ಸತ್ತವರೆಷ್ಟು ಗೊತ್ತಾ.?

    vartha chakraBy vartha chakraಅಕ್ಟೋಬರ್ 25, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕರ್ನೂಲ್​/Kurnool (ಆಂಧ್ರಪ್ರದೇಶ), ಅ.25 – ನವರಾತ್ರಿ ಹಬ್ಬದಂದು ನಡೆಯುವ ದೇವರಗಟ್ಟು ಬನ್ನಿ ಉತ್ಸವದ ದಂಡ ಕಾಳಗದಲ್ಲಿ ಮೂವರು ಮೃತಪಟ್ಟಿದ್ದು, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದಾರುಣ ಘಟನೆ​ ಜಿಲ್ಲೆಯಲ್ಲಿ ನಡೆದಿದೆ. ವಿಜಯದಶಮಿಯಂದು ಇಲ್ಲಿನ ದೇವರಗಟ್ಟು ಬೆಟ್ಟದಲ್ಲಿ ಪ್ರತಿವರ್ಷ ಬನ್ನಿ ಉತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಸಾವಿರಾರು ಜನರು ಈ ಬನ್ನಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಈ ಬಾರಿ ಲಕ್ಷಾಂತರ ಮಂದಿ ಬನ್ನಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.

    ಈ ಮೆರವಣಿಗೆಯಲ್ಲಿ ಉತ್ಸವ ಮೂರ್ತಿಯನ್ನು ಕೊಂಡೊಯ್ಯುವಾಗ ದಂಡ ಕಾಳಗ ನಡೆಸಿಕೊಂಡು ಬರಲಾಗುತ್ತಿದೆ.
    ಈ ವೇಳೆ, ಮೆರವಣಿಯಲ್ಲಿ ಪಾಲ್ಗೊಳ್ಳುವ ನೂರಾರು ಜನರು ದಂಡ ಕಾಳಗದಲ್ಲಿ ಪಾಲ್ಗೊಳ್ಳುತ್ತಾರೆ. ಈ ಸಂದರ್ಭದಲ್ಲಿ ಮೂವರು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
    ಇಲ್ಲಿನ ದೇವರಗಟ್ಟು ಬೆಟ್ಟದಲ್ಲಿ ನಿನ್ನೆ ಮಲ್ಲಮ್ಮ ಮತ್ತು ಮಲ್ಲೇಶ್ವರ ಸ್ವಾಮಿ ದೇವರ ಜಾತ್ರಾ ಮಹೋತ್ಸವ ನಡೆಯಿತು. ರಾತ್ರಿ 12 ಗಂಟೆಗೆ ಮಲ್ಲಮ್ಮ ಮತ್ತು ಮಲ್ಲೇಶ್ವರ ಸ್ವಾಮಿಯ ಮದುವೆ ಸಮಾರಂಭ ನಡೆಯಿತು. ಬಳಿಕ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಾದ ಗುಡ್ಡ, ಪಡಿಯಗಟ್ಟು, ರಕ್ಷಪದ, ಸಮೀವೃಕ್ಷಂ, ನಖಿಬಸವಣ್ಣಗುಡಿ ಸೇರಿ ವಿವಿದೆಡೆ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು. ಈ ವೇಳೆ, ಆರು ಗ್ರಾಮದ ಜನರು ಸೇರಿ ಒಂದು ಗುಂಪು ಮತ್ತು ಮೂರು ಗ್ರಾಮದ ಜನರು ಸೇರಿ ಮತ್ತೊಂದು ಗುಂಪು ಮಾಡಿ ಉತ್ಸವ ಮೂರ್ತಿ ಎದುರು ದಂಡ ಕಾಳಗ ನಡೆಸಿದರು. ಇದನ್ನು ಬನ್ನಿ ಉತ್ಸವ ಎಂದು ಕರೆಯಲಾಗುತ್ತದೆ.

    ಲಕ್ಷಾಂತರ ಮಂದಿ ಭಾಗಿ :
    ಮಲ್ಲಮ್ಮ ಮತ್ತು ಮಲ್ಲೇಶ್ವರ ಸ್ವಾಮಿ ಉತ್ಸವದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಮಲ್ಲಮ್ಮ ಮತ್ತು ಮಲ್ಲೇಶ್ವರ ಸ್ವಾಮಿ ಅಸುರರನ್ನು ಹತ್ಯೆ ಮಾಡಿದ ಬಳಿಕ ಈ ಉತ್ಸವನ್ನು ಆಚರಿಸಲಾಗುತ್ತದೆ. ದೇವರ ಮೆರವಣಿಗೆ ಸಂದರ್ಭ ನೆರಾನಿ, ನೆರಾನಿ ತಾಂಡಾ ಮತ್ತು ಕೊತ್ತಪೇಟ್​​ನ ಗ್ರಾಮಸ್ಥರು ಒಂದು ಗುಂಪು ಮಾಡಿ, ಆಲೂರು, ಸುಲುವಾಯಿ, ಇಲ್ಲಾರ್ತಿ, ಅರಿಕೇರಾ, ನಿದ್ರಾವಟ್ಟಿ, ಬಿಲೆಹಾಲ್​ ಗ್ರಾಮಸ್ಥರು ಮತ್ತೊಂದು ಗುಂಪು ಮಾಡಿ ಉತ್ಸವ ಮೂರ್ತಿ ಎದುರು ಮುಖಾಮುಖಿಯಾದರು. ಬಳಿಕ ಮೆರವಣಿಗೆ ಸಂದರ್ಭ ಎರಡು ಗುಂಪುಗಳು ದಂಡ ಕಾಳಗ ನಡೆಸಿದರು. ಈ ವೇಳೆ, ಎರಡು ಗುಂಪಿನಲ್ಲಿನ ನೂರಾರು ಜನರಿಗೆ ಗಂಭೀರ ಗಾಯಗಳಾಗಿದೆ. ಈ ಉತ್ಸವವನ್ನು ನೋಡಲು ಆಂಧ್ರಪ್ರದೇಶ , ತೆಲಂಗಾಣ ಮಾತ್ರವಲ್ಲದೇ, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸಿದ್ದರು.

    ಬಿಗಿ ಬಂದೋಬಸ್ತ್​:
    ಬನ್ನಿ ಉತ್ಸವದಲ್ಲಿ ದಂಡ ಕಾಳಗದ ವೇಳೆ ಉಂಟಾಗುವ ಹಿಂಸಾಚಾರವನ್ನು ತಡೆಯಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಗ್ರಾಮದ ವಿವಿದೆಡೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿತ್ತು. 1000ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ದಂಡ ಕಾಳಗವನ್ನು ನಡೆಸದಂತೆ ಇದಕ್ಕೂ ಮೊದಲು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗಿತ್ತು. ಆದರೂ ಗ್ರಾಮಸ್ಥರು ತನ್ನ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಮೂವರು ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Government Karnataka Kurnool News Politics Trending ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಕತ್ತಿ ಹಿಡಿದು ಝಳಪಿಸಿದ ಐಪಿಎಸ್ ರೂಪಾ ಮೌದ್ಗೀಲ್ | Roopa Moudgil
    Next Article ವಿದ್ಯುತ್ ಬೇಡಿಕೆ ಪೂರೈಸಲು ಮಂತ್ರಿ ಜಾರ್ಜ್ ಕಸರತ್ತು | KJ George
    vartha chakra
    • Website

    Related Posts

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_pbEt ರಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    • RichardMiz ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • http://groszek.katowice.pl/forum/profile.php?id=247328 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe