ಚಾಮರಾಜನಗರ : ಮೈಸೂರು-ಚಾಮರಾಜನಗರ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಚಾಲಾನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ ಸಂತೇಮರಳ್ಳಿ ಮುಖ್ಯ ರಸ್ತೆಯ ದೊಡ್ಡಪೇಟೆ ಕ್ರಾಸ್ ಬಳಿ ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಬಿದ್ದು ನರಳಾಡುತ್ತಿದ್ದರು.
ಅವರನ್ನು ನಿಂತು ಜನರು ನೋಡುತ್ತಿರುವುದನ್ನು ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಸಚಿವರು ಗಮನಿಸಿದರು.ತಕ್ಷಣವೇ ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಗೆ ಕರೆ ಮಾಡಿ ಅದರ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೆಲಸದ ಒತ್ತಡದ ಮಧ್ಯೆಯೂ ಸಚಿವರು ಗಾಯಾಳುಗಳನ್ನು ಸಾಗಿಸಲು ಎಲ್ಲ ವ್ಯವಸ್ಥೆ ಮಾಡಿದರು.
ಸಚಿವರ ಸ್ಪಂದನೆಗೆ ಸ್ಥಳದಲ್ಲಿದ್ದ ನಾಗರೀಕರು ಅತೀವ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಅರ್ಪಿಸಿದರು ಅಲ್ಲದೆ ದೊಡ್ಡಪೇಟೆ ಕ್ರಾಸ್ ನಲ್ಲಿ ಪದೆ ಪದೇ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಗಮನ ಹರಿಸುವಂತೆ ಪೊಲೀಸರಿಗೆ ಸೂಚಿಸಿದ ಸಚಿವರು ನಂತರ ಮಂಡ್ಯ ಕ್ಕೆ ಪ್ರಯಾಣ ಬೆಳೆಸಿದರು.


1 ಟಿಪ್ಪಣಿ
Big bonuses, bigger wins at Betano https://betanogame.org/. New players get up to €500 plus free spins on slots. Enjoy secure banking and 24/7 customer support. Betano – the smart choice for serious players.