Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭೆಗೆ ಶುರುವಾಯಿತು ಭಾರಿ ಪೈಪೋಟಿ
    ರಾಜಕೀಯ

    ರಾಜ್ಯಸಭೆಗೆ ಶುರುವಾಯಿತು ಭಾರಿ ಪೈಪೋಟಿ

    vartha chakraBy vartha chakraಜನವರಿ 29, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಮತ್ತೊಂದು ರಾಜಕೀಯ ಸಮರಕ್ಕೆ ವೇದಿಕೆ ಸಜ್ಜುಗೊಂಡಿದೆ.

    ಏಪ್ರಿಲ್ 2 ರಂದು ನಿವೃತ್ತಿಯಾಗಲಿರುವ ಕರ್ನಾಟಕದ ರಾಜ್ಯಸಭಾ ಸದಸ್ಯರಾದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (ಬಿಜೆಪಿ), ಕಾಂಗ್ರೆಸ್ ಸದಸ್ಯರಾದ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಸೈಯದ್ ನಸೀರ್ ಹುಸೇನ್ ಅವರ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ.

    ವಿಧಾನಸಭೆಯಲ್ಲಿ ಹೊಂದಿರುವ ಪಕ್ಷಗಳ ಬಲಾಬಲಗಳನ್ನು ಆಧರಿಸಿ ನೋಡುವುದಾದರೆ ಕಾಂಗ್ರೆಸ್ ಮೂರು ಸ್ಥಾನಗಳನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ. ಬಿಜೆಪಿಗೆ ಒಂದು ಸ್ಥಾನ ಲಭಿಸಲಿದೆ ಚುನಾವಣೆ ಸಂಬಂಧ ಮೂರು ಪಕ್ಷಗಳಲ್ಲಿ ಒಮ್ಮತ ಏರ್ಪಟ್ಟು ನಡೆದಿದ್ದೆ ಆದಲ್ಲಿ ಈ ಲೆಕ್ಕಾಚಾರ ಸಾಧ್ಯವಾಗಲಿದೆ.
    ಇದನ್ನು ಹೊರತುಪಡಿಸಿ ಹೆಚ್ಚುವರಿ ಆಗಿರುವ ಜೆಡಿಎಸ್ ಮತಗಳನ್ನು ಲೆಕ್ಕಕ್ಕೆ ಇಟ್ಟುಕೊಂಡು ಬಿಜೆಪಿ ಅಥವಾ ಜೆಡಿಎಸ್ 5 ನೇ ಅಭ್ಯರ್ಥಿಯನ್ನು ಕೇಳಿಸಿದಲ್ಲಿ ಚುನಾವಣಾ ಅಖಾಡಕ್ಕೆ ಭರ್ಜರಿ ರಂಗು ಬರಲಿದೆ.

    ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಬಿಜೆಪಿಯ ರಾಜ್ಯನಾಯಕರ ಜೊತೆ ಮಾತುಕತೆ ನಡೆಸಿರುವುದು ವಿದ್ಯಮಾನಗಳಿಗೆ ರಂಗು ಬರುವಂತೆ ಮಾಡಿದೆ.
    ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಫೆಬ್ರವರಿ 8 ರಂದು ಚುನಾವಣಾ ಅಧಿಸೂಚನೆಯನ್ನು ಪ್ರಕಟಿಸಲಿದ್ದು , ಅಂದಿನಿಂದ ಫೆ.15ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಫೆ. 16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಫೆ.20 ಕಡೆ ದಿನ. ಅಗತ್ಯ ಬಿದ್ದರೆ ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಮತದಾನ ನಡೆಯಲಿದ್ದು , ಅಂದು ಸಂಜೆ 5 ಗಂಟೆ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಿಸಲಾಗುತ್ತದೆ.

    ಆಡಳಿತ ರೂಢ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳಿಗಾಗಿ ಪೈಪೋಟಿ ನಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಾಸಿರ್ ಹುಸೇನ್ ಮರು ಆಯ್ಕೆ ಬಯಸಿದರೆ, ಗೃಹ ಮಂತ್ರಿ ಪರಮೇಶ್ವರ್ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಸಿ. ಚಂದ್ರಶೇಖರ್ ಕೂಡ ಎರಡನೇ ಬಾರಿಗೆ ಆಯ್ಕೆಯಾಗಲು ಪೈಪೋಟಿ ನಡೆಸಿದ್ದಾರೆ
    ಪರಿಶಿಷ್ಟ ಜಾತಿ ಎಡಗೈ ಕೋಟಾದಡಿ ಎರಡನೇ ಬಾರಿಗೆ ಅವಕಾಶ ಕೊಡುವ ನಿರೀಕ್ಷೆಯಲ್ಲಿದ್ದಾರೆ ಎಲ್ ಹನುಮಂತಯ್ಯ ಇದನ್ನು ಹೊರತುಪಡಿಸಿ ಪಕ್ಷದ ಹಿರಿಯ ನಾಯಕ ಮನ್ಸೂರ್ ಅಲಿ ಖಾನ್, ಬಿ ಎಲ್ ಶಂಕರ್, ಎಚ್. ಎಂ. ರೇವಣ್ಣ, ನಿವೇದಿತ ಆಳ್ವ, ಎಚ್ ಆಂಜನೇಯ ಸೇರಿದಂತೆ ಅನೇಕರು ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ.
    ಬಿಜೆಪಿಯಿಂದ ಉದ್ಯಮಿ ಪ್ರಕಾಶ್ ಶೆಟ್ಟಿ ವಾಮನಾಚಾರ್ಯ ವಿ ಸೋಮಣ್ಣ ಟಿಕೆಟ್ ನಿರೀಕ್ಷಿಸಿದ್ದು ಮಂತ್ರಿಯಾಗಿರುವ ರಾಜೀವ್ ಚಂದ್ರಶೇಖರ್ ಮರು ಆಯ್ಕೆಯ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಲೋಕಸಭಾ ಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಮಾತ್ರ ಕೊಡುವಂತೆ ಕೇಳಿರುವ ಜೆಡಿಎಸ್ ರಾಜ್ಯಸಭೆಯ ಸ್ಥಾನವನ್ನು ತನಗೆ ಬಿಟ್ಟು ಕೊಡುವಂತೆ ಮನವಿ ಮಾಡುವ ಸಾಧ್ಯತೆ ಇದೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅಸ್ತಿತ್ವಕ್ಕಾಗಿ ಬಿಜೆಪಿ ಹೋರಾಟ | BJP
    Next Article ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_jcsr ರಲ್ಲಿ Rohit – Virat ಬಗ್ಗೆ Chetan Sharma ಹೇಳಿದ್ದೇನು?
    • LinwoodGah ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Mlcumk ರಲ್ಲಿ ಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.