Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆಗೆ ಅಭ್ಯರ್ಥಿಗಳನ್ನು ಹುಡುಕಿ | Lok Sabha Elections 2024
    ಬೆಂಗಳೂರು

    ಲೋಕಸಭೆಗೆ ಅಭ್ಯರ್ಥಿಗಳನ್ನು ಹುಡುಕಿ | Lok Sabha Elections 2024

    vartha chakraBy vartha chakraಆಗಷ್ಟ್ 8, 2023Updated:ಆಗಷ್ಟ್ 8, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ. 08- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಈ ಬಾರಿ ಅತ್ಯಧಿಕ ಸಂಖ್ಯೆಯ ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಹೈಕಮಾಂಡ್ ತಾಕೀತು ಮಾಡಿದ್ದು ಅದಕ್ಕಾಗಿ ಈಗಿನಿಂದಲೇ ತಯಾರಿ ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಕ್ಷದ ಮಂತ್ರಿಗಳು ಮತ್ತು ಶಾಸಕರಿಗೆ ಸೂಚಿಸಿದ್ದಾರೆ.
    ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ತಮ್ಮ ಅಭಿಪ್ರಾಯಗಳಿಗೆ ಮಂತ್ರಿಗಳು ಮನ್ನಣೆ ನೀಡುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾವಾರು ಶಾಸಕ ಸಚಿವರ ಸಭೆ ನಡೆಸುತ್ತಿರುವ ಮುಖ್ಯಮಂತ್ರಿಗಳು ಚುನಾವಣಾ ತಯಾರಿಗೆ ಆದ್ಯತೆ ನೀಡಿದ್ದಾರೆ.

    ಬೆಳಗಾವಿ, ರಾಯಚೂರು, ಕೊಪ್ಪಳ ಕಲಬುರ್ಗಿ ಹಾವೇರಿ ಜಿಲ್ಲೆಗಳ ಶಾಸಕ ಸಚಿವರೊಂದಿಗೆ ಸಭೆ ನಡೆಸಿದ ಅವರು ಇನ್ನೊಂದು ವಾರದಲ್ಲಿ ಲೋಕಸಭೆಯ ಅಭ್ಯರ್ಥಿ ಆಯ್ಕೆ ಅಂತಿಮ ಗೊಳಿಸುವಂತೆ ಸೂಚಿಸಿದ್ದಾರೆ.
    ಈ ಹಿಂದೆ ಬೆಳಗಾವಿ ಚಿಕ್ಕೋಡಿ, ಕೊಪ್ಪಳ ಕಲಬುರ್ಗಿ ಮತ್ತು ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಸದರು ಆಯ್ಕೆಯಾಗಿದ್ದರು ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಸೇರಿದಂತೆ ಹಲವು ಗೊಂದಲಗಳಿಂದಾಗಿ ಈ ಕ್ಷೇತ್ರಗಳು ಬಿಜೆಪಿಯ ಪಾಲಾಗಿವೆ. ಇವು ಈ ಬಾರಿ ಮತ್ತೆ ಕಾಂಗ್ರೆಸ್ ನ ತೆಕ್ಕೆಗೆ ಬರಬೇಕು ಎಂದು ಹೇಳಿದ್ದಾರೆ.
    ಬೆಳಗಾವಿ ಚಿಕ್ಕೋಡಿ ಮತ್ತು ಧಾರವಾಡ ಕ್ಷೇತ್ರದಿಂದ ಮಂತ್ರಿಗಳೇ ಕಣಕ್ಕಿಳಿಯುವ ಪರಿಸ್ಥಿತಿ ಬರಬಹುದು ಅದಕ್ಕೂ ಕೆಲವರು ಸಿದ್ಧರಿರಬೇಕು ಎಂದು ಹೇಳಿದ ಮುಖ್ಯಮಂತ್ರಿಗಳು ಇದನ್ನು ಹೊರತುಪಡಿಸಿ ಗೆಲ್ಲುವ ಅವಕಾಶವಿರುವ ವ್ಯಕ್ತಿಯನ್ನು ಹುಡುಕಿ ಅಭ್ಯರ್ಥಿಯೆಂದು ಬಿಂಬಿಸುವ ಮೂಲಕ ಈಗಿನಿಂದಲೇ ಚುನಾವಣೆಗೆ ತಯಾರಿ ಆರಂಭಿಸಬೇಕು ಎಂದು ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

    ಬೆಳಗಾವಿ ಜಿಲ್ಲೆಯ ಶಾಸಕರು ಕ್ಷೇತ್ರದಲ್ಲಿನ ಹಲವು ಅಭಿವೃದ್ಧಿ ಯೋಜನೆಗಳು ಬಾಕಿ ಉಳಿದಿರುವ ನೀರಾವರಿ ಕಾಮಗಾರಿಗಳು ಮತ್ತು ರಸ್ತೆಯ ದುರಸ್ತಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲಿ ಮನವಿ ಮಾಡಿರುವುದಾಗಿ ಗೊತ್ತಾಗಿದೆ. ಗೃಹ ,ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆಯ ವರ್ಗಾವಣೆಯಲ್ಲಿ ತಮ್ಮ ಪತ್ರಗಳಿಗೆ ಮಂತ್ರಿಗಳು ಯಾವುದೇ ರೀತಿಯ ಮಾನ್ಯತೆ ನೀಡಿಲ್ಲ ನಾವು ಮಾಡಿದ ಶಿಫಾರಸುಗಳನ್ನು ಪರಿಗಣನೆ ಗೆ ತೆಗೆದುಕೊಂಡಿಲ್ಲ ಎಂದು ಶಾಸಕರು ಮುಖ್ಯಮಂತ್ರಿಗಳ ಗಮನ ಸೆಳೆದಿರುವುದಾಗಿ ಮೂಲಗಳು ತಿಳಿಸಿವೆ.
    ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಗಳು ಲಕ್ಷಾಂತರ ರೂಪಾಯಿ ರೈತರ ಕಬ್ಬಿನ ಬಾಕಿ ಉಳಿಸಿಕೊಂಡಿವೆ ಶಾಸಕರ ಸೂಚನೆಗಳಿಗೆ ಈ ಕಾರ್ಖಾನೆಗಳು ಯಾವುದೇ ಮಾನ್ಯತೆ ನೀಡುತ್ತಿಲ್ಲ ಕಬ್ಬು ಬೆಳೆಗಾರರು ಶಾಸಕರ ಕಛೇರಿ ಮತ್ತು ಮನೆಗಳಿಗೆ ಭೇಟಿ ನೀಡಿ ಬಾಕಿ ಕೊಡಿಸುವಂತೆ ಮನವಿ ಮಾಡುತ್ತಿದ್ದಾರೆ ಇದನ್ನು ಸಹಕಾರ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸೂಚನೆ ನೀಡಬೇಕು ಎಂದು ಮನವಿ ಮಾಡಿರುವುದಾಗಿ ಗೊತ್ತಾಗಿದೆ.
    ಖಾಸಗಿ ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಭಾರಿ ಪ್ರಮಾಣದ ಮೋಸ ಮಾಡುತ್ತಿವೆ ಈ ಹಿನ್ನೆಲೆಯಲ್ಲಿ ಸಹಕಾರ ಅಥವಾ ಸಕ್ಕರೆ ಇಲಾಖೆಯಿಂದಲೇ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದ ಯಂತ್ರಗಳನ್ನು ಅಳವಡಿಸಿ ಅವುಗಳನ್ನ ನಿರ್ವಹಣೆ ಮಾಡಬೇಕು ಎಂದು ಕೋರಿಕೆ ಸಲ್ಲಿಸಿದ್ದಾರೆ.

    ಲೋಕಸಭೆ ಚುನಾವಣೆ ಎದುರಿಸಲು ನಾವೆಲ್ಲರೂ ಸಿದ್ಧರಾಗಿದ್ದೇವೆ ಆದಕ್ಕೂ ಮುನ್ನ ಪಕ್ಷದ ಕಾರ್ಯಕರ್ತರನ್ನು ಇದಕ್ಕಾಗಿ ಸಜ್ಜುಗೊಳಿಸಬೇಕು ಈ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಅಧಿಕಾರ ನೀಡುವ ಮೂಲಕ ಅವರಿಗೆ ಇದು ಕಾಂಗ್ರೆಸ್ ಪಕ್ಷದ ಸರ್ಕಾರ ಎಂಬ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಇದಕ್ಕಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಒಟ್ಟಾಗಿ ಕುಳಿತು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
    ಈ ಹಿಂದಿನ ಸರ್ಕಾರದಲ್ಲಿ ಕೈಗೊಂಡಿರುವ ಹಲವು ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಸರ್ಕಾರ ಉನ್ನತಮಟ್ಟದ ತನಿಖೆಗೆ ಆದೇಶಿಸಬೇಕು ಜೊತೆಗೆ ಹೊಸದಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    belagavi Election Elections Karnataka lok sabha lok sabha elections Lok Sabha Elections 2024 ಕಾಂಗ್ರೆಸ್ ಚುನಾವಣೆ ಧಾರವಾಡ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗುತ್ತಿಗೆದಾರರ ಬಂಡಾಯ – ಜಗ್ಗೋಲ್ಲಾ ಎಂದ ಡಿಸಿಎಂ | DK Shivakumar
    Next Article ಫ್ಲೆಕ್ಸ್ ಹಾಕಿದರೆ ಜೋಕೆ…? | Flex Banners
    vartha chakra
    • Website

    Related Posts

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertQuida ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • AlbertQuida ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • AlbertQuida ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.