Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಡಾಳ್ ಗೆ BJPಯಿಂದ ಗೇಟ್ ಪಾಸ್
    ರಾಜ್ಯ

    ಮಾಡಾಳ್ ಗೆ BJPಯಿಂದ ಗೇಟ್ ಪಾಸ್

    vartha chakraBy vartha chakraಮಾರ್ಚ್ 3, 2023Updated:ಮಾರ್ಚ್ 3, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.3- ಗುತ್ತಿಗೆ ಪಡೆಯಲು ಲಂಚ ಪಡೆಯುತ್ತಿದ್ದ ವೇಳೆ ತಮ್ಮ ಪುತ್ರ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿರುವ ಬೆನ್ನಲ್ಲೇ ಚನ್ನಗಿರಿ ಕ್ಷೇತ್ರದ ‌ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಿಜೆಪಿಯಿಂದ ಅಮಾನತು ಮಾಡುವ ಸಾಧ್ಯತೆಯಿದೆ.
    ಲಂಚ ಪ್ರಕರಣದಿಂದ ಬಿಜೆಪಿ ತೀವ್ರ ಮುಜುಗರ ಅನುಭವಿಸುವಂತಾಗಿದೆ.ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿಯೇ‌ ಅವರಿಂದಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ(ಕೆಎಸ್‍ಡಿಎಲ್)ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪಡೆಯಲಾಗಿದೆ.
    ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರ ರಾಜ್ಯ ಭೇಟಿಯ ಸಮಯದಲ್ಲಿ ಈ ಘಟನೆ ನಡೆದಿರುವ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಮಾಡಾಳ್ ಅವರಿಗೆ ಕರೆ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ.
    ಪಕ್ಷದ ರಾಷ್ಟ್ರೀಯ ಸಮಿತಿ ಈ ಸಂಬಂಧ ವರದಿ ಕೇಳಿದ್ದು,ಈಗಾಗಲೇ ರಾಜ್ಯ ಘಟಕ ಅದನ್ನು ರವಾನಿಸಿದೆ.ಈ ಕುರಿತಂತೆ ವರಿಷ್ಠರ ಅಭಿಪ್ರಾಯ ನಿರೀಕ್ಷಿಸುತ್ತಿರುವ ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅದು ಬರುತ್ತಿದ್ದ ಹಾಗೆ ಇವರನ್ನು ಪಕ್ಷದಿಂದ ಅಮಾನತು ಪಡಿಸುವ ನಿರ್ಧಾರ ಪ್ರಕಟಿಸಲಿದ್ದಾರೆಂದು ಮೂಲಗಳು ತಿಳಿಸಿವೆ.
    ದೊಡ್ಡ ಸಾಕ್ಷಿ:
    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ,ಡಬಲ್ ಎಂಜಿನ್ ರಾಜ್ಯ ಬಿಜೆಪಿ ಸರ್ಕಾರ ಭರ್ತಿ ಶೇ. 40 ರಷ್ಟು ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ ಎಂದು ವಾಗ್ದಾಳಿ ನಡೆಸಿದ್ದಾರೆ.
    ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹಾಗೂ ಸರ್ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ಸ್ವಚ್ಚ ಭಾರತ್ ಪರಿಕಲ್ಪನೆಯೇ ಅದ್ಭುತ. ಅಮಿತ್ ಶಾ ಅವರೇ ಎಂದು ಟೀಕಿಸಿದ್ದಾರೆ.
    ಅಮಿತ್ ಶಾ ಅವರೇ ಈಗ ಹೇಳಿ, ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು, ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
    ರಾಜೀನಾಮೆ ಕೊಡಿ.
    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ ಬಿಜೆಪಿ ಭ್ರಷ್ಟಾಚಾರ ಮಾಡಿದ್ದೇ ಆದರೆ ಸಾಕ್ಷ್ಯ ಕೊಡಿ ಎಂದು ಮುಖ್ಯಮಂತ್ರಿಗಳು ಕೇಳುತ್ತಿದ್ದರು. ಚನ್ನಗಿರಿ ಶಾಸಕರ ಪುತ್ರನ ಕಚೇರಿಯಲ್ಲಿ ನಡೆದಿರುವ ಲೋಕಾಯುಕ್ತ ದಾಳಿಗಿಂತ ಸಾಕ್ಷಿ ಬೇಕೇ? ಈಗಲಾದರೂ ಮುಖ್ಯಮಂತ್ರಿ ತಮ್ಮ ತಪ್ಪೊಪ್ಪಿಕೊಂಡು ರಾಜೀನಾಮೆ ನೀಡಬೇಕು. ಬಿಜೆಪಿಯ ಭ್ರಷ್ಟಾಚಾರ ಬಯಲಿಗೆಳೆದ ಲೋಕಾಯುಕ್ತ ಅಧಿಕಾರಿಗಳಿಗೆ ಅಭಿನಂದನೆಗಳು’ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ,ಸಾರ್ವಜನಿಕ ವಲಯದಲ್ಲಿ ಇದು ಭ್ರಷ್ಟ ಸರ್ಕಾರ ಎಂಬ ಮಾತು ಕೇಳಿ ಬರುತ್ತಿದೆ. ಭ್ರಷ್ಟಾಚಾರ ಮುಕ್ತ ಸರ್ಕಾರ ಎಂದು ಹೇಳಿಕೊಳ್ಳುವ ಬಿಜೆಪಿಯವರು ಈಗ ಏನು ಹೇಳುತ್ತಾರೆ. ಈಗ ಆಗಿರುವ ಬೆಳವಣಿಗೆ ನೋಡಿದರೆ ಅಮಿತ್ ಶಾ, ಭ್ರಷ್ಟಾಚಾರರಹಿತ ಸರ್ಕಾರ ಕೊಡುತ್ತೇವೆ ಎಂದು ಏಕೆ ಹೇಳಿದರು ಎಂಬುದು ಈಗ ಅರ್ಥವಾಗುತ್ತಿದೆ ಎಂದರು.
    ಗೃಹ ಸಚಿವರು ನಾನು ದುರ್ಬಲ ಎನ್ನುತ್ತಾರೆ. ಹಾಗಾದರೆ ಶಾಸಕರನ್ನು ಬಂಧಿಸಲಿ ಎಂದು ಸವಾಲು ಹಾಕಿದ ಅವರು, ಮುಖ್ಯಮಂತ್ರಿ ಬೊಮ್ಮಾಯಿರವರು ಪ್ರಾಮಾಣಿಕರೆನ್ನುತ್ತಾರೆ. ಈಗ ಅವರು ರಾಜೀನಾಮೆ ಕೊಡುವ ಕಾಲ ಬಂದಿದೆ. ಧೈರ್ಯವಿದ್ದರೆ ಮುಖ್ಯಮಂತ್ರಿಗಳು, ಮಂತ್ರಿಗಳು ರಾಜೀನಾಮೆ ಕೊಟ್ಟು ಚುನಾವಣೆಗೆ ಬರಲಿ ಜನ ತೀರ್ಮಾನ ಮಾಡುತ್ತಾರೆ ಎಂದರು.

    BJP ಚುನಾವಣೆ ಬೊಮ್ಮಾಯಿ ಲಂಚ
    Share. Facebook Twitter Pinterest LinkedIn Tumblr Email WhatsApp
    Previous ArticleCinema ಹಾಲ್ ನಲ್ಲಿ ಕಿರಿಕ್- ಪೊಲೀಸರಿಗೆ ದೂರು
    Next Article ಸಂಚಾರ ಉಲ್ಲಂಘನೆ ದಂಡ ಪಾವತಿಗೆ ನಾಳೆಯಿಂದ 11ದಿನ 50ರಷ್ಟು ರಿಯಾಯಿತಿ #traffic
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. 2zcfc on ಜೂನ್ 5, 2025 1:11 ಫೂರ್ವಾಹ್ನ

      generic clomiphene how can i get generic clomid pill how can i get cheap clomid no prescription cheap clomid prices can you buy clomid online clomiphene sale can i order clomiphene without insurance

      Reply
    2. buy cialis cheap generic on ಜೂನ್ 9, 2025 4:25 ಅಪರಾಹ್ನ

      This is the description of glad I have reading.

      Reply
    3. does flagyl treat food poisoning on ಜೂನ್ 11, 2025 10:38 ಫೂರ್ವಾಹ್ನ

      I couldn’t resist commenting. Profoundly written!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC ರಲ್ಲಿ ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • Chriswot ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • KennethSOYNC ರಲ್ಲಿ ಜನವರಿಯಿಂದ ಯುವನಿಧಿ ಆರಂಭ | Yuvanidhi
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe