Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದರಸಾ ದಲ್ಲಿ ನಡೆಯುತ್ತಿತ್ತಾ ಹೆಣ್ಣು ಮಕ್ಕಳ ಕಳ್ಳಸಾಗಣೆ..? | Madrasa
    Trending

    ಮದರಸಾ ದಲ್ಲಿ ನಡೆಯುತ್ತಿತ್ತಾ ಹೆಣ್ಣು ಮಕ್ಕಳ ಕಳ್ಳಸಾಗಣೆ..? | Madrasa

    vartha chakraBy vartha chakraಮಾರ್ಚ್ 16, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.16- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಮಾನವ ಕಳ್ಳಸಾಗಣೆಯ ಜಾಲ ಕಾರ್ಯ ನಿರ್ವಹಿಸುತ್ತಿರುವ ಆರೋಪ ಕೇಳಿಬಂದಿದೆ.
    ಅನಧಿಕೃತ ಮದರಸಾವೊಂದರ ಮೂಲಕ ಮಾನವ ಕಳ್ಳ ಸಾಗಣೆ ಮಾಡಲಾಗುತ್ತಿದೆ ಎಂಬ ಅನಾಮಧೇಯ ‌ಕರೆಯ ಬೆನ್ನುಹತ್ತಿದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧಿಕಾರಿಗಳು ಸಂಪಿಗೆಹಳ್ಳಿ ಸಮೀಪದ‌ ಮದರಸಾ ಮೇಲೆ ಮೇಲೆ ದಾಳಿ‌ ನಡೆಸಿದರು.ಈ ವೇಳೆ ಅಲ್ಲಿ  20 ಮಂದಿ‌ ಹೆಣ್ಣು ಮಕ್ಕಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
    ಎನ್ಸಿಪಿಸಿಆರ್ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.ಎಲ್ಲಾ 20 ಬಾಲಕಿಯರನ್ನ ರಕ್ಷಿಸಲಾಗಿದೆ ಇವರನ್ನು ಗಲ್ಫ್ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

    ದಕ್ಷಿಣ ಭಾರತದಲ್ಲಿ ಇಂತಹ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಎನ್ ಸಿ ಪಿಸಿ ಆರ್ ತಿಳಿಸಿದ್ದು,ಈ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಆ ಬಾಲಕಿಯರು ಯಾರು, ಏಕೆ ಇಲ್ಲಿದ್ದಾರೆ ಎನ್ನುವುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
    ಮಕ್ಕಳು ಪತ್ತೆಯಾಗಿರುವ ಮದರಸಾ ಅನಧಿಕೃತ . ಯಾವುದೇ ಲೈಸೆನ್ಸ್ ಇಲ್ಲದೆ ಮದರಸಾ ನಡೆಸಲಾಗುತ್ತಿದೆ. ಅಲ್ಲಿರುವ ಬಾಲಕಿಯರಿಗೆ ಶಿಕ್ಷಣವನ್ನು ಕೊಡುತ್ತಿಲ್ಲ. ಕೇವಲ ಧಾರ್ಮಿಕ ಶಿಕ್ಷಣವನ್ನು ಕೊಡುತ್ತಿದ್ದಾರೆ. ಲೈಸೆನ್ಸ್ ಇಲ್ಲದೆ ಮದರಸಾ ನಡೆಸುತ್ತಿದ್ದಾರೆ ಎಂದು ಸಂಪಿಗೆ ಹಳ್ಳಿ ಪೊಲೀಸರಿಗೆ ದೂರು ನೀಡಲಾಗಿದೆ.
    ಎನ್ಸಿಪಿಸಿಆರ್ ನೀಡಿರುವ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಅನಾಥ ಮಕ್ಕಳು:
    ಘಟನೆ ಬಗ್ಗೆ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ ಬರೆದುಕೊಂಡಿರುವ ಪ್ರಿಯಾಂಕ ಕಂಗೂನ್, ಕರ್ನಾಟಕದ ಬೆಂಗಳೂರಿನಲ್ಲಿ ಅಕ್ರಮ ಅನಾಥಾಶ್ರಮದ ತಪಾಸಣೆ ವೇಳೆ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಇಲ್ಲಿ 20 ಹುಡುಗಿಯರಿದ್ದರು, ಅವರೆಲ್ಲಾ ಅನಾಥರು. ಈ ಹುಡುಗಿಯರನ್ನು ಶಾಲೆಗೆ ಕಳುಹಿಸುತ್ತಿರಲಿಲ್ಲ, ಎಲ್ಲಾ ಮಕ್ಕಳನ್ನು ಕಿಟಕಿ ಅಥವಾ ಬೆಳಕಿಲ್ಲದ ಕೋಣೆಯಲ್ಲಿ ಜೈಲಿನಂತಹ ವಾತಾವರಣದಲ್ಲಿ ಇರಿಸಲಾಗಿತ್ತು. ಕೆಲವು ಹುಡುಗಿಯರು ಇಲ್ಲಿಗೆ ಬರುವ ಮೊದಲು ಶಾಲೆಗೆ ಹೋಗುತ್ತಿದ್ದರು, ಆದರೆ ಇಲ್ಲಿಗ ಬಂದ ನಂತರ ಅವರ ಅಧ್ಯಯನವನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

    ಕಳ್ಳಸಾಗಣೆ ಕೆಲಸ:
    ಮಕ್ಕಳ ಮನೆಯನ್ನು ನೋಡಿಕೊಳ್ಳುವ ಸಲ್ಮಾ ಎಂಬ ಮಹಿಳೆ ತಮ್ಮನ್ನು ಕುವೈತ್‌ಗೆ ಕಳುಹಿಸುತ್ತಾರೆ ಎಂದು ಬಾಲಕಿಯರು ತಿಳಿಸಿದ್ದಾರೆ. ಪ್ರಾಥಮಿಕ ಚರ್ಚೆಗಳಿಂದ, ಗಲ್ಫ್ ದೇಶಗಳಲ್ಲಿ, ಮದುವೆಯ ಹೆಸರಿನಲ್ಲಿ ಹುಡುಗಿಯರನ್ನು ಕಳ್ಳಸಾಗಣೆ ಮಾಡುವ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ.
    ತನಿಖೆಯ ವೇಳೆ ಬಾಲಕಿಯರನ್ನು ಸಿಡಬ್ಲ್ಯುಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬ ಮಹಿಳೆ ಮತ್ತು ಆಕೆಯ ಬಾಸ್ ಶಮೀರ್ ಗೂಂಡಾಗಳನ್ನು ಕರೆಸಿ ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯಸ್ಥಿಕೆಯಲ್ಲಿ ಗೂಂಡಾಗಳನ್ನು ನಿಯಂತ್ರಿಸಲಾಗಿದೆ. ಪೊಲೀಸರ ಸಲಹೆ ಮೇರೆಗೆ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬಂದೆವು. ಎಂದು ಬರೆದುಕೊಂಡಿದ್ದಾರೆ.

    ಪೊಲೀಸರ ಮಾಹಿತಿ:
    ತನಿಖೆಯ ವೇಳೆ ಹೆಣ್ಣು ಮಕ್ಕಳ ವಸತಿ ಮದರಸಕ್ಕೆ ಅನುಮತಿ ಪಡೆದಿರೋದು ಬೆಳಕಿಗೆ ಬಂದಿದೆ. ಸದ್ಯ ಅಲ್ಲಿ ಯಾವುದೇ ಬೇರೆ ರೀತಿಯ ಚಟುವಟಿಕೆಗಳು ನಡೆದಿರೋ ಬಗ್ಗೆ ಮಾಹಿತಿ ಇಲ್ಲ. ಬಹುತೇಕ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ನಾಳೆ ಮಕ್ಕಳ ಆಯೋಗಕ್ಕೆ ಮಾಹಿತಿ ನೀಡ್ತೀವಿ. ಅವರು ಮದರಸ ಪರಿಶೀಲನೆ ಬಳಿಕ ದೂರು ಕೊಟ್ಟರೇ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    Karnataka m madrasa News ಧಾರ್ಮಿಕ ಮದುವೆ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರಿ ನೌಕರರ ಸಂಬಳ ದಿಡೀರ್ ‌ಹೆಚ್ಚಳ
    Next Article KSRTC ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ
    vartha chakra
    • Website

    Related Posts

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. Jocxmz on ಫೆಬ್ರವರಿ 11, 2026 10:22 ಅಪರಾಹ್ನ

      mgm free bet online casino betmgm play bet mgm $200

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • рутор дарк ರಲ್ಲಿ ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.
    • LinwoodGah ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Tracymix ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.