Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP
    ಬೆಂಗಳೂರು

    ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP

    vartha chakraBy vartha chakraಮಾರ್ಚ್ 10, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.10- ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕು ಎಂದು ರಣತಂತ್ರ ರೂಪಿಸುತ್ತಿರುವ ಬಿಜೆಪಿ ನಾಯಕತ್ವಕ್ಕೆ ಅಭ್ಯರ್ಥಿಗಳ ಆಯ್ಕೆ ದೊಡ್ಡ ಸವಾಲಾಗಿದೆ.
    ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡುವ ಮುನ್ನವೇ ಅಭ್ಯರ್ಥಿಗಳ ಹೆಸರು ಪ್ರಕಟಿಸಲು ಮುಂದಾಗಿದ್ದ ಹೈಕಮಾಂಡ್ ಗೆ ರಾಜ್ಯದಲ್ಲಿ ತೀವ್ರಗೊಂಡಿರುವ ಬಣ ರಾಜಕಾರಣ ದೊಡ್ಡ ಸವಾಲಾಗಿದೆ.ನಾಲ್ಕೈದು ಬಣಗಳು ರಾಜ್ಯದಲ್ಲಿ ಸಕ್ರಿಯವಾಗಿದ್ದು ತಮ್ಮ ಅತ್ಯಾಪ್ತರಿಗೆ ಟಿಕೆಟ್ ಕೊಡಿಸಲು ಮುಂದಾಗಿವೆ.ಈ ಬಣ ರಾಜಕಾರಣದ ವಿರುದ್ಧ ಇದೀಗ ಕಾರ್ಯಕರ್ತರೇ ತಿರುಗಿ ಬಿದ್ದಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲೂ‌ ಇದೇ ರೀತಿಯ ಬಣ ರಾಜಕಾರಣ ವಿಜೃಂಭಿಸಿದ್ದರಿಂದ ಪಕ್ಷಕ್ಕೆ ಸೋಲಾಯಿತು.ಈ ಅನುಭವದಿಂದಲೂ ನಾಯಕರು ಪಾಠ‌ ಕಲಿತಿಲ್ಲ ಎಂದು ಹೇಳಿರುವ ಕಾರ್ಯಕರ್ತರ ಪಡೆ ಹೈಕಮಾಂಡ್ ಗೆ ವರದಿ ನೀಡಿದೆ.ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಗೆ ನಿಗದಿಪಡಿಸಿದ ಸಭೆ ಮುಂದೂಡಿತು ಎಂದು ಹೇಳಲಾಗುತ್ತಿದೆ.
    ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿ ಸೇರಿದ್ದಾರೆ ಅಷ್ಟೇ ಅಲ್ಲ ಲೋಕಸಭಾ ಚುನಾವಣೆ ಸ್ಪರ್ಧಿಸಲು ಉತ್ಸುಕರಾಗಿದ್ದು ಬೆಳಗಾವಿ ಅಥವಾ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದಿದ್ದಾರೆ.

    ಹೈಕಮಾಂಡ್ ಹಾವೇರಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು‌ ಲೆಕ್ಕಾಚಾರ ಮಾಡಿದೆ.ಹೀಗಾಗಿ ಅವರು ಬೆಳಗಾವಿಯತ್ತ ಗಮನ ಕೇಂದ್ರೀಕರಿಸಿದ್ದಾರೆ.
    ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‍ ಅವರಿಗೆ ಟಿಕೆಟ್ ನೀಡಲು ಜಿಲ್ಲಾ ಘಟಕ ವಿರೋಧ ವ್ಯಕ್ತಪಡಿಸಿದೆ. ಸ್ಥಳೀಯರಿಗೆ ಯಾರಿಗಾದರೂ ಟಿಕೆಟ್ ನೀಡಬೇಕೆಂದು ಹೈಕಮಾಂಡ್ ಗೆ ಮನವಿ ಮಾಡಿದೆ.
    ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾ ಸಾಹೆಬ್ ಜೊಲ್ಲೆಗೆ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದೆ. ಈ ಕ್ಷೇತ್ರದಿಂದ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿಗೆ ಟಿಕೆಟ್‍ನೀಡಬೇಕೆಂಬ ಬೇಡಿಕೆ ಇದೆ.ಅಣ್ಣಾ ಸಾಹೇಬ್ ಜೊಲ್ಲೆ ಪರವಾಗಿ ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಲಾಬಿ ನಡೆಸಿದರೆ ರಮೇಶ್ ಕತ್ತಿ ಪರವಾಗಿ ಯಡಿಯೂರಪ್ಪ ಲಾಬಿ ಮಾಡಿದ್ದಾರೆ.

    ಬೀದರ್ ನಲ್ಲೂ ಸಚಿವ ಭಗವಂತ ಕೂಬಾಗೆ ಟಿಕೆಟ್ ನೀಡಲು ಸ್ವಪಕ್ಷಿಯವರಿಂದಲೇ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಕಾರ್ಯಕರ್ತರ ವಿರೋಧ ಕಟ್ಟಿಕೊಂಡು ಅವರಿಗೆ ಟಿಕೆಟ್ ಕೊಟ್ಟರೆ ನೋಟಾಕ್ಕೆ ಮತ ಹಾಕುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಇಲ್ಲಿಯೂ ಕೂಬಾ ಪರವಾಗಿ ಯಡಿಯೂರಪ್ಪ ಲಾಬಿ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈ ಬೆಳವಣಿಗೆಯಿಂದ ಶಾಸಕರಾದ ಪ್ರಭು ಚವ್ಹಾಣ್, ಬಸವ ಕಲ್ಯಾಣ ಶಾಸಕ ಶರಣು ಸಲಗಾರ ಮತ್ತಿತರರು ಚುನಾವಣಾ ಚಟುವಟಿಕೆಗಳಿಂದ ದೂರ ಉಳಿಯುವ ಬೆದರಿಕೆ ಹಾಕಿದ್ದಾರೆ.
    ಈ ಬಾರಿ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲು ಕ್ಷೇತ್ರದಲ್ಲಿ ಕಾರ್ಯಕರ್ತರ ಆಕ್ರೋಶ ಹೆಚ್ಚಾಗಿದೆ.

    Verbattle
    Verbattle
    Verbattle
    BJP News Politics ಉಡುಪಿ ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಗೋಬಿ ಮಂಚೂರಿ, ಚಿಕನ್ ಕಬಾಬ್ ಸಿಗುವುದಿಲ್ಲ | Gobi Manchurain
    Next Article ಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    2 ಪ್ರತಿಕ್ರಿಯೆಗಳು

    1. Uorhxk on ಫೆಬ್ರವರಿ 14, 2026 9:00 ಅಪರಾಹ್ನ

      mcluck DC online casino McLuck mcluck free bet

      Reply
    2. Jgovxs on ಫೆಬ್ರವರಿ 17, 2026 6:19 ಫೂರ್ವಾಹ್ನ

      Featuring Paris Hilton as a brand ambassador in the close by and conditions room distributor tables, wow vegas casino online remains a covering sweepstakes casino choice. It offers freed coins pro fun womanize added the sensational opportunity to deliver prizes from Sweepstakes Coins.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Rfsnbv ರಲ್ಲಿ ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    • Huzoya ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.