Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಮಾಡಿದ ಪಾಪ ನೋಡಲಾರದೆ Congress ಬಿಟ್ಟೆ.
    ರಾಜಕೀಯ

    ಸಿದ್ದರಾಮಯ್ಯ ಮಾಡಿದ ಪಾಪ ನೋಡಲಾರದೆ Congress ಬಿಟ್ಟೆ.

    vartha chakraBy vartha chakraಜನವರಿ 24, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಬಳ್ಳಾಪುರ, ಜ. 24-
    ‘ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಮಾಡಿದ ಪಾಪದ ಕೆಲಸದಿಂದಾಗಿಯೇ ನಾನು ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಬಂದೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‌’ಸಿದ್ದರಾಮಯ್ಯನವರು ಹುಟ್ಟಿದಾಗಲೇ ಕಾಂಗ್ರೆಸ್‌ನಲ್ಲಿರಲಿಲ್ಲ. ಜನತಾದಳದಲ್ಲಿದ್ದು, ಎಲ್ಲಾ ಬಗೆಯ ಅಧಿಕಾರ ಅನುಭವಿಸಿದ ಅವರು, ಅಧಿಕಾರದ ಆಸೆಗಾಗಿಯೇ ಕಾಂಗ್ರೆಸ್‌ಗೆ ಬಂದರು. ಏಕೆ ಬಂದರು? ಆಶಯಕ್ಕಾ? ಬದ್ಧತೆಗಾ? ಇವರು ಮಾತ್ರ ಬಹಳ ಪವಿತ್ರರು, ನಾವೆಲ್ಲರೂ ಅಪವಿತ್ರರಾ? ಇಷ್ಟು ವಯಸ್ಸಾಗಿರುವವರೇ ಹೀಗೆ ಮಾಡುವಾಗ, ಯುವಕರಾದವರು ನಾವೇನು ಮಾಡಬೇಕು?’ ಎಂದು ಪ್ರಶ್ನಿಸಿದರು.

    ‘ಪ್ರಜಾಧ್ವನಿ ಯಾತ್ರೆಯ ಹೆಸರಿನಲ್ಲಿ ನನ್ನ ವಿರುದ್ಧ ಪ್ರಚಾರ ಸಭೆ ಮಾಡಿದ್ದಾರೆ. ವೈಯಕ್ತಿಕ ಆರೋಪವನ್ನು ಮಾಡಿದ್ದಾರೆ. ಮುಖ್ಯಮಂತ್ರಿಗಳಾಗಿದ್ದವರು, ಸಚಿವರಾಗಿದ್ದವರು, ಜನಪ್ರತಿನಿಧಿಗಳು ಪ್ರಜಾಪ್ರಭುತ್ವದಲ್ಲಿ ಹೇಗೆ ಮಾತಾಡಬೇಕೆಂದು ಮೊದಲು ಕಲಿಯಬೇಕು. ಬಾರ್‌ನಲ್ಲಿ ಕುಡಿದು ಬಂದಂತೆ ಸಭೆಯಲ್ಲಿ ಮಾತನಾಡಬಾರದು’ ಎಂದರು. ‘ಸಿದ್ದರಾಮಯ್ಯನವರು ಒಂದೊಂದೇ ಕ್ಷೇತ್ರ ಹುಡುಕಾಡುತ್ತಿದ್ದಾರೆ. ವರುಣಾ, ಚಾಮುಂಡೇಶ್ವರಿ, ಬಳಿಕ ಕೋಲಾರಕ್ಕೆ ಹೋಗಿದ್ದಾರೆ. ಪ್ರತಿ ಬಾರಿ ಅನ್ನಭಾಗ್ಯ ಕೊಟ್ಟೆ, ಅಕ್ಕಿ ಕೊಟ್ಟೆ ಎಂದು ಹೇಳುತ್ತಾರೆ. ವಾಸ್ತವ ಏನೆಂದರೆ, ಈ ಯೋಜನೆಯಲ್ಲಿ ಒಂದು ಕೆಜಿ ಅಕ್ಕಿಗೆ 32 ರೂ.ನಲ್ಲಿ 29 ರೂ. ಅನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೀಡುತ್ತಿದೆ.ಆದರೆ ಪ್ರಧಾನಿ ಮೋದಿ ಅದನ್ನು ಹೇಳಿಕೊಳ್ಳಲೇ ಇಲ್ಲ. ಸಿದ್ದರಾಮಯ್ಯನವರು ಅಕ್ಕಿ ನೀಡಲಿಲ್ಲ, ಕೇವಲ ಚೀಲ ನೀಡಿದರು’ ಎಂದು ವಾಗ್ದಾಳಿ ನಡೆಸಿದರು.

    ‘ಕಾಂಗ್ರೆಸ್‌ನಲ್ಲಿ ನನಗೆ ಟಿಕೆಟ್‌ ದೊರೆಯುವಲ್ಲಿ ಸಿದ್ದರಾಮಯ್ಯನವರ ಪಾತ್ರವೇ ಇಲ್ಲ. ನನಗೆ 2013ರಲ್ಲಿ ಟಿಕೆಟ್ ಕೊಡಿಸಿದ್ದು ನನ್ನ ರಾಜಕೀಯ ಗುರುಗಳಾದ ಎಸ್‌.ಎಂ.ಕೃಷ್ಣ ಹಾಗೂ ಡಾ.ಜಿ.ಪರಮೇಶ್ವರ್‌. ನಾನು ಸಿದ್ದರಾಮಯ್ಯನವರ ಬಳಿ ಟಿಕೆಟ್ ಗಾಗಿ ಯಾವ ಸಹಾಯವನ್ನೂ ಕೇಳಿಯೇ ಇಲ್ಲ. ಶಾಸಕನಾದ ಬಳಿಕ ನನ್ನನ್ನು ವಿಶ್ವಾಸದಿಂದ ನೋಡಿದ್ದಾರೆ. ಆಗ ನಾನೂ ಅವರನ್ನು ಸಮರ್ಥನೆ ಮಾಡಿದ್ದೆ. ಆದರೆ ತಪ್ಪು ಮಾಡಿದಾಗ ಅದನ್ನು ನೇರವಾಗಿ ಖಂಡಿಸಿದ್ದೇನೆ’ ಎಂದರು.
    ‘ಸಿಎಜಿ ವರದಿಯಲ್ಲಿ ಉಲ್ಲೇಖಿಸಿದ್ದನ್ನು ನಾನು ಕೇಳಿದ್ದೇನೆ. ಬಿಬಿಎಂಪಿಯಲ್ಲಿ ಕಸ ವಿಲೇವಾರಿಗೆ ಟೆಂಡರ್‌ ಮೊತ್ತ ಹೆಚ್ಚಳ ಮಾಡಿದ್ದು ಏಕೆ ಎಂದು ಕೇಳಿದ್ದೆ. ಆದರೆ ಅದಕ್ಕೆ ಯಾರೂ ಉತ್ತರ ನೀಡಲಿಲ್ಲ.. ಆದರೆ ನನ್ನ ಬಗ್ಗೆ ವೈಯಕ್ತಿಕವಾಗಿ ಮಾತನಾಡುತ್ತಾರೆ. ಕೇವಲ ರಾಜಕೀಯ ಕೆಸರೆರಚಾಟ ಮಾಡುತ್ತಾರೆ. ಅವರು ಮುಖ್ಯಮಂತ್ರಿಯಾಗಲು ನನ್ನ ಸಹಕಾರವೂ ಕಾರಣ’ ಎಂದರು.

    Congress Government Health Minister Sudhakar Politics ಆರೋಗ್ಯ ಕಾಂಗ್ರೆಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleK R Market Flyover ಮೇಲಿಂದ ಹಣದ ಸುರಿಮಳೆ.
    Next Article Air India ವಿಮಾನದಲ್ಲಿ ಮದ್ಯ ಪೂರೈಕೆಗೆ ಹೊಸ ನಿಯಮ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • atql6 ರಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಗೆಲ್ಲೋದು ಯಾರು ಗೊತ್ತಾ? | Bengaluru Rural
    • jyg4w ರಲ್ಲಿ ಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
    • RandallcEf ರಲ್ಲಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಹರಿಪ್ರಸಾದ್ | BK Hariprasad
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe