Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೂವು ಎಂದು ಮಾಂಸ ಕೊಟ್ಟ ಕಿಡಿಗೇಡಿಗಳು
    ರಾಜ್ಯ

    ಹೂವು ಎಂದು ಮಾಂಸ ಕೊಟ್ಟ ಕಿಡಿಗೇಡಿಗಳು

    vartha chakraBy vartha chakraಫೆಬ್ರವರಿ 22, 2023Updated:ಫೆಬ್ರವರಿ 22, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.22-

    ದೇವರು, ದೇವಾಲಯ ಎಂದರೆ,ಆಸ್ತಿಕರ ಪಾಲಿಗೆ ಪುಣ್ಯದ ಸ್ಥಳ. ಹೀಗಾಗಿ ದೇವರ ದರ್ಶನ, ಪೂಜೆ ಸಲ್ಲಿಸುವವರು ಶ್ರದ್ಧಾ ಭಕ್ತಿಯಿಂದ ಬಂದು ಪೂಜೆ ಸಲ್ಲಿಸಿ, ಮನದಾಳದ ಮಾತುಗಳನ್ನು ಭಕ್ತಿಯಿಂದ ದೇವರಿಗೆ ಅರ್ಪಿಸಿ ಪುನೀತರಾಗುತ್ತಾರೆ. ದೇವರ ಪೂಜೆಗೆಂದು‌ ದೇವಾಲಯಕ್ಕೆ ಬರುವವರು ಹೂವು, ಹಣ್ಣು, ತೆಂಗಿನಕಾಯಿ ಸೇರಿದಂತೆ ಹಲವು ವಸ್ತುಗಳನ್ನು ಅರ್ಪಿಸಿ ಪ್ರಾರ್ಥನೆ ಸಲ್ಲಿಸುವುದು ವಾಡಿಕೆ.

    ಈ ರೀತಿ ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಕವರ್ ನಲ್ಲಿ ಮಾಂಸದ ತುಂಡುಗಳನ್ನಿಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ನಡೆದಿದೆ. ಅದೂ‌ ಕೂಡ ‌ದೇವರುಗಳಲ್ಲೇ ಅತ್ಯಂತ ಕೋಪದ ದೇವರೆಂದರೆ ಶನಿ ಮಹಾತ್ಮ. ಈ ದೇವರ ಅವಕೃಪೆಗೆ ಯಾವುದೇ ಕಾರಣಕ್ಕೂ ಒಳಗಾಗಬಾರದು. ತಮ್ಮ ಬದುಕಿನಲ್ಲಿ ಕಾಣಿಸಿಕೊಂಡ ಅನಿಷ್ಟಗಳಿಂದ ಪಾರು ಮಾಡುವಂತೆ ಶನಿ ದೇವರನ್ನು ‌ಪ್ರಾರ್ಥಿಸುತ್ತಾರೆ.

    ಇಂತಹ ಸಮಯದಲ್ಲಿ ತಮ್ಮಿಂದ ಯಾವುದೇ ಅಪಚಾರವಾಗಬಾರದು ಎಂದು ಭಕ್ತರು ವಿಶೇಷವಾದ ಕಾಳಜಿವಹಿಸುತ್ತಾರೆ. ಹೀಗಿರುವಲ್ಲಿ ಈ ಕಿರಾತಕರು ಶನಿ ದೇವರಿಗೆ ಅರ್ಪಿಸಲು ತಂದ ಹೂವಿನ ಜೊತೆಗೆ ಮಾಂಸದ ತುಂಡುಗಳನ್ನು ಇಟ್ಟು ಕೊಟ್ಟಿದ್ದಾರೆ.

    ಚಿಕ್ಕ ಮಧುರೆ ಎಂದೇ ಕರೆಯಲ್ಪಡುವ ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನ (Sri Shani Mahatma Temple, Kanasawadi Doddaballapur) ದಲ್ಲಿ ಈ ಘಟನೆ ನಡೆದಿದೆ. ದೇವಾಲಯಕ್ಕೆ‌‌ ಬಂದ ಇಬ್ಬರು ಅಪರಿಚಿತ ಯುವಕರಿಂದ ಕೃತ್ಯ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ದೇವಾಲಯದ ಅರ್ಚಕರು ಮತ್ತು ಆಡಳಿತ ವರ್ಗ ದೊಡ್ಡಬೆಳವಂಗಲ‌ ಪೊಲೀಸರಿಗೆ ದೇವಾಲಯದ ಸಿಬ್ಬಂದಿ ದೂರು ನೀಡಿದ್ದಾರೆ.

    ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಇಬ್ಬರು ಯುವಕರು ಬಂದಿದ್ದಾರೆ. ದೇವರಿಗೆ ಹಾಕಿ ಎಂದು ಹೂವಿನ ಹಾರದ ಮಧ್ಯೆ ಬರುವ ಪ್ಲಾಸ್ಟಿಕ್ ಪೇಪರ್ ಒಳಗಡೆ ಮಾಂಸವಿಟ್ಟು ದೇವಸ್ಥಾನದ ಸಿಬ್ಬಂದಿಗೆ ನೀಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

    ಕವರ್ ತೆಗೆದುಕೊಂಡ ಸಿಬ್ಬಂದಿ, ದೇವರಿಗೆ ಹಾರ ಹಾಕಲೆಂದು ಗರ್ಭಗುಡಿಯೊಳಗೆ ಹೋಗುವಾಗ, ಮಾಂಸದ ತುಂಡು ಹಾರದಿಂದ​ ಕೆಳಗೆ ಬಿದ್ದಿದೆ. ಕೂಡಲೇ ದೇವಸ್ಥಾನದ ಸಿಬ್ಬಂದಿ ಕವರ್​ ಹೊರಗೆ ಎಸೆದಿದ್ದಾರೆ.ಅಷ್ಟೇ ಅಲ್ಲ ಇಂತಹ ಘಟನೆಯಿಂದ ಬೆಚ್ಚಿದ್ದಾರೆ. ತಕ್ಷಣವೇ ಅಲ್ಲಿದ್ದವರಿಗೆ ತಿಳಿಸಿ ಕವರ್ ಕೊಟ್ಟ ಕಿಡಿಗೇಡಿಗಳಿಗಾಗಿ ಹುಡುಕಾಡಿದ್ದಾರೆ. ಆದರೆ ಕವರ್ ನೀಡಿದವರೇ ಅಲ್ಲಿಂದ ಆ ಕಿರಾತಕರು ಪರಾರಿಯಾಗಿದ್ದಾರೆ.

    ಕಿಡಿಗೇಡಿಗಳು ದೇವಸ್ಥಾನಕ್ಕೆ ಬಂದು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೇವಾಲಯದ ಸಿಬ್ಬಂದಿ ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಸದ್ಯ ಆಡಳಿತ ಮಂಡಳಿ ದೇವಸ್ಥಾನದಲ್ಲಿ ಪೇಪರ್ ಒಳಗೊಂಡ ಹಾರಗಳನ್ನು ನಿಷೇಧಿಸಿದೆ.

    Verbattle
    Verbattle
    Verbattle
    #temple ATM Bangalore Kanasawadi Doddaballapur Karnataka m NASA Sri Shani Mahatma Temple temples ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೋಮು ಗಲಭೆಗೆ Siddaramaiah ಪ್ರಚೋದನೆ?
    Next Article Rohini – Roopa ರಾದ್ಧಾಂತ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    1 ಟಿಪ್ಪಣಿ

    1. Wztwgc on ಫೆಬ್ರವರಿ 11, 2026 2:49 ಅಪರಾಹ್ನ

      betmgm РћРљ betmgm-play betmgm New Hampshire

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_vbSi ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Gygzpv ರಲ್ಲಿ ಬೆಂಗಳೂರಲ್ಲಿ ಮತ್ತೆ ವಾಹನ ಟೋಯಿಂಗ್.
    • Glennhof ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.