Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊನೆಗೂ ದೊರೆಯಿತು ವಿಧಾನಸೌಧದಲ್ಲಿ ಸಿಕ್ಕ ಹಣದ ಮೂಲ
    ಬೆಂಗಳೂರು

    ಕೊನೆಗೂ ದೊರೆಯಿತು ವಿಧಾನಸೌಧದಲ್ಲಿ ಸಿಕ್ಕ ಹಣದ ಮೂಲ

    vartha chakraBy vartha chakraಫೆಬ್ರವರಿ 19, 202328 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.19-

    ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ(Vidhana Soudha)ದ ಬಳಿ ಕೆಲ ದಿನಗಳ ಹಿಂದೆ ಪತ್ತೆಯಾಗಿದ್ದ ಹತ್ತು ಲಕ್ಷ ರೂ. ಹಣದ ಮೂಲವನ್ನು ವಿಧಾನಸೌಧ ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ.

    ಇಂಜಿನಿಯರ್​ ಜಗದೀಶ್​ ಮೂವರು ವ್ಯಕ್ತಿಗಳಿಂದ ಸಾಲದ ರೂಪದಲ್ಲಿ ಹಣ ಪಡೆದಿದ್ದ. ಗುತ್ತಿಗೆದಾರರೊಬ್ಬರಿಂದ ಐದು ಲಕ್ಷ ಹಾಗೂ ತನ್ನಿಬ್ಬರು ಸಹೋದ್ಯೋಗಿಗಳ ಬಳಿ ತಲಾ 3.5 ಮತ್ತು 1.5 ಲಕ್ಷ ರೂ. ಹಣ ಸಾಲ ಪಡೆದಿದ್ದ. ಜಗದೀಶ್​ಗೆ ಹಣ ಕೊಟ್ಟ ಮೂವರು ವ್ಯಕ್ತಿಗಳನ್ನು ವಿಚಾರಣೆ ನಡೆಸಿರುವ ವಿಧಾನಸೌಧ ಪೊಲೀಸರು ಹೇಳಿಕೆಗಳನ್ನು ದಾಖಲಿಸಿದ್ದಾರೆ. ಪೊಲೀಸರ ತನಿಖೆ ವೇಳೆ ಜಗದೀಶ್ ಮೇಲೆ ಚೆಕ್ ಬೌನ್ಸ್ ಪ್ರಕರಣ ಇರುವುದು ಬೆಳಕಿಗೆ ಬಂದಿದೆ.

    ಚೆಕ್​​ಬೌನ್ಸ್ ಪ್ರಕರಣ ಸಂಬಂಧ ಹಣ ಮರುಪಾವತಿಗೆ ಜಗದೀಶ್​ ಹಣ ಹೊಂದಿಸಿದ್ದ ಎಂದು ತಿಳಿದುಬಂದಿದೆ. ಸದ್ಯ ಹಣ ಕೊಟ್ಟವರ ಹೇಳಿಕೆ ದಾಖಲಿಸಿ, ಅಂತಿಮ ಹಂತದ ತನಿಖೆಯನ್ನು ನಡೆಸಲಾಗುತ್ತಿದೆ. ಚೆಕ್​​​ಬೌನ್ಸ್ ಸಂಬಂಧ ಬ್ಯಾಂಕ್ ವ್ಯವಹಾರ ಮಾಹಿತಿ, ಪ್ರಕರಣ ವಿವರಗಳ ಸಂಗ್ರಹ ಮಾಡಿರುವ ವಿಧಾನಸೌಧ ಪೊಲೀಸರು ಅಂತಿಮ ಹಂತದ ತನಿಖೆ ನಡೆಸಿ, ಪ್ರಕರಣಕ್ಕೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ.

    ಕಳೆದ ಜ. 5ರಂದು ವಿಧಾನಸೌಧದ ಪೂರ್ವ ಗೇಟ್​ನಲ್ಲಿ 10 ಲಕ್ಷ ರೂಪಾಯಿ ಹಣವನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಕೇಂದ್ರ DCP ಶ್ರೀನಿವಾಸ ಗೌಡ ಹೇಳಿಕೆ ನೀಡಿ, ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜಗದೀಶ್​ ಹಣದ ಸಹಿತ ಬಂದಿದ್ದರು. ಈ ವೇಳೆ ವಿಧಾನಸೌಧ ಮತ್ತು ವಿಕಾಸಸೌಧದ ಭದ್ರತಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಹಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆದರೆ, ಅವರ ಬಳಿ ಸರಿಯಾದ ಉತ್ತರ ಇಲ್ಲ. ಸದ್ಯ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿಸಿದ್ದರು.

    Bangalore Government Karnataka vidhana soudha ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಂತ್ರಸ್ತ ಯುವತಿಗೆ ಮಂತ್ರಿ ಸಾಂತ್ವನ
    Next Article ಉತ್ತರ ಕೊಡಿ Rohini Sindhuri – IPS Roopa
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WayneseinA ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • FobertCaR ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • 1win suretli qeydiyyat ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe