Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುದರಂಗಡಿ ಗ್ರಾಪಂ ವ್ಯಾಪ್ತಿಯ ಸಾಗುಮನೆ ಬಳಿ ಕಿರು ಸೇತುವೆ ಇಲ್ಲದೆ ತೋಡು ದಾಟಲು ಶಾಲಾ ಮಕ್ಕಳ ಪರದಾಟ
    ಸುದ್ದಿ

    ಮುದರಂಗಡಿ ಗ್ರಾಪಂ ವ್ಯಾಪ್ತಿಯ ಸಾಗುಮನೆ ಬಳಿ ಕಿರು ಸೇತುವೆ ಇಲ್ಲದೆ ತೋಡು ದಾಟಲು ಶಾಲಾ ಮಕ್ಕಳ ಪರದಾಟ

    vartha chakraBy vartha chakraಜೂನ್ 6, 2022Updated:ಜೂನ್ 6, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೃಹತ್ ಮೊತ್ತದ ಕಾಮಗಾರಿಗಳು ಯಾವುದೇ ಅಭ್ಯಂತರವಿಲ್ಲದೆ ಸ್ಥಳೀಯಾಡಳಿತಗಳಲ್ಲಿ ಅನುಷ್ಠಾನಗೊಳ್ಳುತ್ತದೆ. ಆದರೆ ಕನಿಷ್ಟ ಮೊತ್ತದ ಕಾಮಗಾರಿಗಳು ಸೂಕ್ತ ಸಮಯದಲ್ಲಿ ನಡೆಯದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಲೇ ಇರುತ್ತಾರೆ.
    ಇದಕ್ಕೆ ಪೂರಕವಾಗಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಗ್ರಾಪಂ ವ್ಯಾಪ್ತಿಯ ಸಾಂತೂರು ಸಾಗುಮನೆ ಬಳಿ ಯಾವತ್ತೋ ನಿರ್ಮಿಸಬೇಕಾಗಿದ್ದ ಕಾಲು ಸಂಕ ಕಾಮಗಾರಿಯ ವಿಳಂಬವೇ ಸಾಕ್ಷಿ.

    ಸಾಂತೂರು ಸಾಗುಮನೆಯ ಕೊಳಕೆ ಮಾರು ಬಳಿ ಮಳೆ ನೀರು ಹರಿದು ಹೋಗುವ ತೋಡಿಗೆ ಕಾಲು ಸಂಕ ನಿರ್ಮಿಸದ ಕಾರಣ ಈ ಭಾಗದ ಶಾಲಾ ಮಕ್ಕಳು ಮತ್ತು ಸ್ಥಳೀಯ ಕೃಷಿಕರು ಕಷ್ಟಕರ ರೀತಿಯಲ್ಲಿ ಎದ್ದು ಬಿದ್ದು ತೋಡು ದಾಟುತ್ತಿದ್ದಾರೆ.

    ಕೃಷಿ ಚಟುವಟಿಕೆಯೇ ಪ್ರಧಾನವಾಗಿರುವ ಈ ಭಾಗದ ಜನರಿಗೆ ರಸ್ತೆ ಸಂಪರ್ಕವಿದೆ. ಆದರೆ ಸುತ್ತುಬಳಸಿ ತೆರಳಬೇಕಾದ ಕಾರಣ ಅವರು ಹತ್ತಿರದ ದಾರಿಯಾದ ಈ ತೋಡು ಬಳಸಿಯೇ ಸಂಚರಿಸುತ್ತಿದ್ದಾರೆ. ಮೇ ತಿಂಗಳಿಂದ ಜನವರಿವರೆಗೆ ಈ ತೋಡಿನಲ್ಲಿ ನೀರು ತುಂಬಿರುವುದರಿಂದ ಅವರ ಕಷ್ಟ ಹೇಳತೀರದು.

    ನೆರೆ ಬಂದರೆ ಮಕ್ಕಳಿಗೆ ಇಲ್ಲಿ ನಡೆದಾಡಲೂ ಕಷ್ಟಕರವಾಗಿದೆ. ಇಂತಹ ಸಂದರ್ಭಗಳಲ್ಲಿ ಹೆತ್ತವರೇ ಇಲ್ಲಿಗೆ ಬಂದು ಮಕ್ಕಳನ್ನು ದಾಟಿಸಬೇಕಾಗಿದೆ. ಕೃಷಿಕರೇ ತುಂಬಿರುವ ಈ ಭಾಗದ ಜನರು ಹಾಲು ಕೊಂಡೊಯ್ಯಲೂ ಇದೇ ಮಾರ್ಗವನ್ನು ಬಳಸುತ್ತಾರೆ. ಈ ತೋಡನ್ನು ಕನಿಷ್ಟ 25ಮನೆಗಳವರು ಬಳಸುತ್ತಿದ್ದಾರೆ.

    ಸ್ಥಳೀಯಾಡಳಿತ ಇಲ್ಲಿ ಕಾಲು ಸಂಕ ನಿರ್ಮಿಸಲು ಹಲವು ಬಾರಿ ಕ್ರಿಯಾ ಯೋಜನೆ ರೂಪಿಸಿತ್ತು. ಕಡಿಮೆ ಮೊತ್ತದ ಕಾಮಗಾರಿಯಾಗಿದ್ದ ಕಾರಣ ಉದಾಸೀನ ಎದ್ದು ಕಾಣುತ್ತದೆ. ಈ ಬಾರಿಯೂ ಇಲ್ಲೆ ಕಾಲು ಸಂಕ ನಿರ್ಮಾಣಕ್ಕೆ ಅನುದಾನ ಜೋಡಿಸಲಾಗಿದೆ. ಆದರೆ ಕಾಮಗಾರಿ ನಡೆದಿಲ್ಲ. ಮತ್ತೆ ಮಳೆಗಾಲ ಮುಗಿಯುವವರೆಗೆ ಕಾಯಬೇಕಿದೆ.

    ಬೆಳ್ಮಣ್ಣು ಸಂತ ಜೋಸೆಫ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ೯ನೇ ತರಗತಿvಯ ಚಿಂತನಾ ಮಾತನಾಢಿ, ದೂರದ ಬೆಳ್ಮಣ್ಣು ಶಾಲೆಗೆ ಹೋಗಬೇಕಾಗಿರುವುದರಿಂದ ರಸ್ತೆ ಮೂಲಕ ಸುತ್ತು ಬಳಸಿ ಹೋಗಲು ಹೆಚ್ಚು ಸಮಯ ವ್ಯರ್ಥವಾಗುತ್ತದೆ. ಹಾಗಾಗಿ ಹತ್ತಿರದ ತೋಡಿನ ಮೂಲಕ ನಿತ್ಯ ಸಂಚರಿಸುತ್ತಿದ್ದು, ಹೆದರಿಕೊಂಡೇ ನಿತ್ಯ ಸಂಚರಿಸುತ್ತಿದ್ದೇವೆ. ಈಗಾಗಲೇ ಹಲವರು ಇಲ್ಲಿ ಬಿದ್ದ ಘಟನೆಯೂ ನಡೆದಿದೆ ಎಂದು ಹೇಳಿದ್ದಾಳೆ.

    ಸ್ಥಳೀಯರಾದ ಸುಬ್ರಾಯ ನಾಯಕ್ ಮಾತನಾಡಿ, ಕೃಷಿಕರೇ ಹೆಚ್ಚು ವಾಸಿಸುವ ಇಲ್ಲಿನ ಜನರು ಹೆಚ್ಚಾಗಿ ಇದೇ ದಾರಿಯನ್ನು ಬಳಸುತ್ತಿದ್ದಾರೆ. ಹಲವು ಬಾರಿ ನೀರಿಗೆ ಬಿದ್ದ ಘಟನೆ ನಡೆದಿದೆ. ಸ್ಥಳೀಯಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದರು.

    mudarangadi udupi
    Share. Facebook Twitter Pinterest LinkedIn Tumblr Email WhatsApp
    Previous Articleಸ್ನಾನಕ್ಕೆ ಹೋದವರು ಜಲಸಮಾಧಿ
    Next Article ಆರ್.ಎಸ್.ಎಸ್ ದೇಶ ಭಕ್ತಿ ಕೆಲಸ ಮಾಡುತ್ತಿದೆ- CM ಬೊಮ್ಮಾಯಿ
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 05h1a ರಲ್ಲಿ ಯೋಗೇಶ್ವರ್ ನಡೆ‌ ಏನು..?
    • kjuc1 ರಲ್ಲಿ ಬೆಚ್ಚಿ ಬೀಳಿಸಿದ ಚಿರತೆ
    • lft0a ರಲ್ಲಿ ರಾಹುಲ್ ಗಾಂಧಿಗೆ ಸಮನ್ಸ್ ನೀಡಲು ಜೆಡಿಎಸ್ ಆಗ್ರಹ
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe