ಹಾವೇರಿ,ಜೂ.2-ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿಗ್ಗಾಂವಿ ಪಟ್ಟಣದ ಎಪಿಎಂಸಿ ವೇಬ್ರಿಡ್ಜ್ ಬಳಿ ನಡೆದಿದೆ. ಕಾರವಾರ ಜಿಲ್ಲೆ ಮುಂಡಗೋಡ ಮೂಲದ ಉಮೇಶ್ ಶಿವಜೋಗಿಮಠ(40) ಕೊಲೆಯಾದವರು. ಕಳೆದ ಕೆಲವು ವರ್ಷಗಳಿಂದ ಹಾವೇರಿಯ ಎಪಿಎಂಸಿ ಬಳಿ ಗ್ಯಾರೇಜ್ ಇಟ್ಟುಕೊಂಡಿದ್ದ
ಉಮೇಶ್ ಶಿವಜೋಗಿಮಠ ಇದರ ಜೊತೆಗೆ ಟಿಪ್ಪರ್ ಕೂಡ ಓಡಿಸುತ್ತಿದ್ದರು. ಗ್ಯಾರೇಜ್ ಸಮೀಪದ ವೇಬ್ರಿಡ್ಜ್ ಬಳಿ ಟಿಪ್ಪರ್ ನಿಂತಿರುತ್ತಿತ್ತು.
ನಡೆದಿದ್ದೇನು?
ಟಿಪ್ಪರ್ ನಿಂತಿದ್ದ ಜಾಗದ ಬಳಿ ನಿನ್ನೆ ಸಂಜೆ ಕೆಲವೊಂದಿಷ್ಟು ಹುಡುಗರು ಚಿನ್ನಿದಾಂಡು ಆಡುತ್ತಿದ್ದರು. ಆಟದ ವೇಳೆ ಚಿನ್ನಿ ಬಂದು ಟಿಪ್ಪರ್ಗೆ ಬಡಿದಿತ್ತು. ನಂತರ ಉಮೇಶ್ ಮತ್ತು ಚಿನ್ನಿದಾಂಡು ಆಡುತ್ತಿದ್ದವರ ನಡುವೆ ಜಗಳ ಶುರುವಾಗಿದೆ.
ಈ ವೇಳೆ ಐದಾರು ಜನರು ಬಂದು ಉಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಉಮೇಶ್ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
ಉಮೇಶ್ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಶಿಗ್ಗಾಂವಿ ಠಾಣೆ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಉಮೇಶ್ ಸಂಬಂಧಿಕರು ಸ್ಥಳಕ್ಕೆ ಧಾವಿಸಿದ್ದು, ಮೃತ ಸುದ್ದಿ ತಿಳಿದು ಕಣ್ಣೀರು ಹಾಕುತ್ತಿದ್ದಾರೆ. ಪೊಲೀಸ್ ಠಾಣೆ ಮುಂದೆಯೇ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತನ ಸಹೋದರ ಈ ಕುರಿತು ಮಾತನಾಡಿದ್ದು, ಉಮೇಶ್ ಒಳ್ಳೆಯ ವ್ಯಕ್ತಿಯಾಗಿದ್ದ. ಯಾರೊಂದಿಗೂ ದ್ವೇಷ ಭಾವನೆ ಹೊಂದಿರಲಿಲ್ಲ. ಆದರೆ ಅವರನ್ನು ಕೊಲೆ ಮಾಡಿರುವುದು ನಿಜಕ್ಕೂ ಆಘಾತ ಮೂಡಿಸಿದೆ. ಪ್ರಕರಣದ ಕುರಿತು ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
