Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋವಿಡ್ ಭೀತಿ- ನೂತನ ಮಾರ್ಗಸೂಚಿ ಪ್ರಕಟ | COVID-19
    Trending

    ಕೋವಿಡ್ ಭೀತಿ- ನೂತನ ಮಾರ್ಗಸೂಚಿ ಪ್ರಕಟ | COVID-19

    vartha chakraBy vartha chakraಡಿಸೆಂಬರ್ 19, 202325 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.19: ನೆರೆಯ‌ ಕೇರಳದಲ್ಲಿ ಕೋವಿಡ್ (COVID-19) ಸಾಂಕ್ರಾಮಿಕ ತೀವ್ರ ರೀತಿಯಲ್ಲಿ ಹರಡುವ ಮೂಲಕ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್‌ನಿಂದ ಒರ್ವ ವ್ಯಕ್ತಿ ಮೃತ ಪಟ್ಟಿರುವುದಾಗಿ ವರದಿಯಾಗಿದೆ.
    ಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು ಮತ್ತು ತೀವ್ರ ಸ್ವರೂಪದ ಅನಾರೋಗ್ಯದಿಂದ ಬಳಸುತ್ತಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
    ಕೇರಳ ರಾಜ್ಯದಲ್ಲಿ ಕೋವಿಡ್‌ 19ರ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಂತ್ರಿಕ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸೋಂಕು ‌ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಸಚಿವರು ಸೂಚನೆ ನೀಡಿದರು ಇದಾದ ನಂತರ ಇಲಾಖೆ ಕೇಂದ್ರ ಸರ್ಕಾರದ ಮಾರ್ಗ ಸೂಚಿ ಆಧರಿಸಿ ಸಾರ್ವಜನಿಕರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ‌ಅವುಗಳ ಸುತ್ತೋಲೆ ಹೊರಡಿಸಿದೆ.

    ಸುತ್ತೋಲೆ ವಿವರ:
    ಅನಗತ್ಯ ಗಾಬರಿಯಿಂದ ಈಗಲೇ ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ತಪಾಸಣೆಯನ್ನು ಹೆಚ್ಚಿಸುವ ಅಥವಾ ನಿರ್ಬಂಧಗಳನ್ನು ಹೇರುವ ಅವಶ್ಯಕತೆಯಿಲ್ಲ.
    ಕೇರಳ ಮತ್ತು ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆಯಿಂದಿರಲು ಅಗತ್ಯ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಹಾಗೂ ವರದಿ ಸಲ್ಲಿಸುವುದು ಅವಶ್ಯಕ.
    ಸರ್ಕಾರ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ SARI ಪ್ರಕರಣಗಳು ಹಾಗೂ 20 ILI ಪ್ರಕರಣಗಳ ಪೈಕಿ ಒಂದು ILI ಪ್ರಕರಣವನ್ನು ಕೋವಿಡ್‌–19 ಪರೀಕ್ಷೆಗೆ ಒಳಪಡಿಸಬೇಕು.

    ಅಲ್ಲದೆ, ಈ ಕೆಳಕಂಡ ಪ್ರಕರಣಗಳ ಮಾದರಿಗಳನ್ನು ಡಬ್ಲ್ಯುಜಿಎಸ್‌ (Whole Genome Sequencing) ಪರೀಕ್ಷೆಗೆ ರವಾನಿಸಬೇಕು ಎಂದು ಇಲಾಖೆ ಸೂಚಿಸಿದೆ.
    ಅಂತರರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯಿದ್ದು, ಕೋವಿಡ್‌–19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು
    ಗುಂಪು – ಗುಂಪಾಗಿ ವರದಿಯಾಗುವ ಪ್ರಕರಣಗಳು ಹಾಗೂ ಮರಣಗಳು ವರದಿಯಾಗುವ ಫೋಕಲ್‌ ಔಟ್‌ ಬ್ರೇಕ್‌ಗಳ ಸಂದರ್ಭದಲ್ಲಿ ಅಗತ್ಯ ಸಂಖ್ಯೆಯ ಮಾದರಿಗಳನ್ನು ಡಬ್ಲ್ಯುಜಿಎಸ್‌ ಪರೀಕ್ಷೆಗೆ ಕಳುಹಿಸಬೇಕು.
    ತೀವ್ರ ಸ್ವರೂಪದ ರೋಗ ಲಕ್ಷಣಗಳನ್ನು ಹೊಂದಿದವರು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, SARI ಪ್ರಕರಣಗಳು ಹಾಗೂ ಸುದೀರ್ಘ ಅವಧಿಯವರೆಗೆ ಆಸ್ಪತ್ರೆಯಲ್ಲಿ ದಾಖಲಾದ ಪ್ರಕರಣಗಳು ಕೋವಿಡ್‌–19ರ ಮರು ಸೋಂಕಿಗೆ ಒಳಗಾದವರು
    ಕೋವಿಡ್‌–19 ಲಸಿಕೆಯ ಎರಡು ಡೋಸ್‌ ವ್ಯಾಕ್ಸಿನ್‌ ಪಡೆದ ನಂತರವೂ ಕೋವಿಡ್‌–19 ಸೋಂಕು ಧೃಢಪಟ್ಟವರು ಕೋವಿಡ್‌ 19ರ ಮರಣ ಪ್ರಕರಣಗಳು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಮೇಲಿನ ಎಲ್ಲಾ ಅಂಶಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.

    COVID-19 Karnataka m News Politics SAR Trending Varthachakra WHO ಆರೋಗ್ಯ ಕಾಲೇಜು
    Share. Facebook Twitter Pinterest LinkedIn Tumblr Email WhatsApp
    Previous Articleಲಿಂಗನಮಕ್ಕಿ‌ ಸಂತ್ರಸ್ತರಿಗೆ ಸಿಹಿ ಸುದ್ದಿ | Linganamakki Dam
    Next Article ಬಿಬಿಎಂಪಿ ಚುನಾವಣೆ ಗ್ರಹಣ ಬಿಡುಗಡೆ ಸನ್ನಿಹಿತ | BBMP Elections
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • more helpful hints ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Lucky Pari ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • narkologiyavladimirvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe