Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಹೊಸ Traffic Rules..
    ಸುದ್ದಿ

    ಬೆಂಗಳೂರಲ್ಲಿ ಹೊಸ Traffic Rules..

    vartha chakraBy vartha chakraಜೂನ್ 29, 2022Updated:ಜೂನ್ 29, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.29-ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಗರದ ಸಂಚಾರ ನಿಯಂತ್ರಣಕ್ಕೆ ಡೆಡ್ ಲೈನ್ ನೀಡಿದ ಹಿನ್ನೆಲೆಯಲ್ಲಿ ನಗರದ ಸಂಚಾರ ದಟ್ಟಣೆಯನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಲು ಸಂಚಾರ ಪೊಲೀಸರು ಮುಂದಾಗಿದ್ದಾರೆ.
    ಹೈದರಾಬಾದ್​ನಲ್ಲಿ ಅಳವಡಿಸಿರುವ ಅಡಪ್ಟೀವ್ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಮ್​ (ಎಟಿಎಸ್ ಸಿ) ಮಾದರಿಯಲ್ಲಿ ನಗರದಲ್ಲೂ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಪೊಲೀಸರು ತಯಾರಿ ಮಾಡಿದ್ದಾರೆ.
    ಖುದ್ದು ಟ್ರಾಫಿಕ್ ನಿಯಂತ್ರಣಕ್ಕೆ ಪ್ರಧಾನಮಂತ್ರಿಗಳಿಂದ ಸೂಚನೆ ನೀಡಲಾಗಿದೆ. ಆರು ತಿಂಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೊಸ ತಂತ್ರಜ್ಞಾನ ಜೊತೆಗೆ ಹಲವು ಸಾಧ್ಯತೆಗಳ ಪರಿಶೀಲನೆ ಮಾಡಲಾಗುತ್ತಿದೆ.
    ರಸ್ತೆ ಮೇಲೆ ನಿಂತಿರುವ ವಾಹನಗಳ ದಟ್ಟಣೆ ಮೇಲೆ ಟ್ರಾಫಿಕ್ ಸಿಗ್ನಲ್​ಗಳ ನಿರ್ವಹಣೆ ಮಾಡಲಾಗುತ್ತದೆ. ಟ್ರಾಫಿಕ್ ಸಿಗ್ನಲ್​ಗಳಲ್ಲಿ ಮ್ಯಾಗ್ನೆಟಿಕ್ ಸೆನ್ಸಾರ್​ಗಳನ್ನು ಅಳವಡಿಸಿ ವಾಹನ ದಟ್ಟಣೆ ಅನುಗುಣವಾಗಿ ಸಿಗ್ನಲ್ ನಿರ್ವಹಣೆ ಮಾಡಲಾಗುತ್ತದೆ.
    ನಗರದ 214 ಸಿಗ್ನಲ್​ಗಳಲ್ಲೂ ಅಡಪ್ಟೀವ್ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಮ್ ಅಳವಡಿಕೆಗೆ ಯೋಜನೆ ಮಾಡಲಾಗುತ್ತಿದೆ. ಈಗಾಗಲೇ ಕೆಲ ಸಿಗ್ನಲ್​ಗಳಲ್ಲಿ ಎಟಿಎಸ್ ಸಿ ಅಳವಡಿಕೆ ಕಾರ್ಯರಾಂಭವಾಗಿದ್ದು, ನಗರದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಪೊಲೀಸರ ಶತಪ್ರಯತ್ನ ಮಾಡುತ್ತಿದ್ದಾರೆ. ಒಂದು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದರೆ ಸ್ವಯಂ ಚಾಲಿತವಾಗಿ ಸಿಗ್ನಲ್ ತನ್ನ ಸಮಯ ಹೆಚ್ಚಿಸಿಕೊಳ್ಳುತ್ತದೆ. ವಾಹನ ದಟ್ಟಣೆ ಕಡಿಮೆ ಇದ್ದರೆ ಸ್ವಯಂ‌ ಚಾಲಿತವಾಗಿ ಸಮಯ ಕಡಿಮೆ‌ ಮಾಡಿಕೊಳ್ಳಲಿದೆ
    ವಾಹನಗಳ ಸಂಖ್ಯೆ ಏರಿಕೆ:
    ನಗರದಲ್ಲಿ ಟ್ರಾಫಿಕ್‌ ದಟ್ಟಣೆ ನಿಯಂತ್ರಣಕ್ಕೆ ಹರಸಾಹಸ ಮಾಡುತ್ತಿದ್ದು, ಬಿಬಿಎಂಪಿ, ಸಂಚಾರ ಪೊಲೀಸ್, ಬೆಸ್ಕಾಂ ಸೇರಿದಂತೆ ಎಲ್ಲಾ ಇಲಾಖೆಯ‌ ಅಧಿಕಾರಿಗಳಿಂದ ನೈಟ್ ರೌಂಡ್ಸ್ ಹಾಕಲಾಗಿದೆ. ಆದರೆ ಇತ್ತ ಕಳೆದ ಒಂದು ವರ್ಷದಲ್ಲಿ 40 ಲಕ್ಷ ವಾಹನಗಳ ಸಂಖ್ಯೆ ಏರಿಕೆಯಾಗಿದ್ದು, ನಗರದಲ್ಲಿ ಬರೋಬ್ಬರಿ 1 ಕೋಟಿ 4ಲಕ್ಷದ 9 ಸಾವಿರದ 289 ವಾಹನಗಳಿವೆ(1,04,09,289). ಕಳೆದ ಒಂದು ವರ್ಷದಲ್ಲಿ 3,98,701 ಹೊಸ ವಾಹನಗಳು ನಗರದಲ್ಲಿ ನೋಂದಣಿಯಾಗಿವೆ.
    ನಿತ್ಯ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸುಮಾರು 3 ಲಕ್ಷ ವಾಹನಗಳ ಆಗಮಿಸುವುದರೊಂದಿಗೆ ನಿರ್ಗಮಿಸುತ್ತಿವೆ. ಒಂದು ಕೋಟಿ ವಾಹನಗಳಿಗೆ ಬೇಕಾದ ರೋಡ್ ಇನ್ಫ್ರಾಸ್ಟಕ್ಚರ್ ಬೆಂಗಳೂರಿನಲ್ಲಿ ಇಲ್ಲ.ಬಿಬಿಎಂಪಿಯಿಂದ 50 ಜಂಕ್ಷನ್​ಗಳ ಅಭಿವೃದ್ಧಿಗೆ ತೀರ್ಮಾನ ಮಾಡಲಾಗುತ್ತಿದೆ. ನಗರದಲ್ಲಿ ಒಟ್ಟು 69,31,839 ಬೈಕ್​ಗಳಿದ್ದು, 21,97,158 ಕಾರ್​ಗಳಿವೆ. ನಗರದಲ್ಲಿ ಪ್ರತಿ ವರ್ಷ ಶೇ. 3.80-4% ವಾಹನಗಳ ಸಂಖ್ಯೆ ಏರಿಕೆಯಾಗುತ್ತಿದೆ.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ ಗೆ ಹೊಸ ಗೈಡ್ ಲೈನ್ಸ್..
    Next Article ವಿದ್ಯಾರ್ಥಿ ತಾಯಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಶಿಕ್ಷಕ ಅಮಾನತು..
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hwnshm ರಲ್ಲಿ Bing ಮತ್ತು Edge ನಲ್ಲಿ ChatGPT!
    • Hfufez ರಲ್ಲಿ ಅಪ್ಪ,ಮಗನಿಗೆ ಹೆದರುವ ಮಗ ನಾನಲ್ಲ ಎಂದ ಯತ್ನಾಳ್ | Yatnal
    • LinwoodGah ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.