Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Criminal ಗಳ ಮೇಲೆ ಕಣ್ಣು- ದೇಶದ ಹಲವೆಡೆ NIA ದಾಳಿ
    ರಾಷ್ಟ್ರೀಯ

    Criminal ಗಳ ಮೇಲೆ ಕಣ್ಣು- ದೇಶದ ಹಲವೆಡೆ NIA ದಾಳಿ

    vartha chakraBy vartha chakraಫೆಬ್ರವರಿ 21, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಫೆ.21-

    ಭಯೋತ್ಪಾದನೆ ಚಟುವಟಿಕೆ ಹಾಗೂ ಗೂಂಡಾಗಿರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಉತ್ತರ ಭಾರತದ 8 ರಾಜ್ಯಗಳ 70ಕ್ಕೂ ಹೆಚ್ಚು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.

    ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿ, ಛಂಡೀಗಢ ಮತ್ತು ಮಧ್ಯಪ್ರದೇಶಗಳಲ್ಲಿ ಗೂಂಡಾಗಿರಿ, ದರೋಡೆಕೋರರ ಉಪಟಳ ಹೆಚ್ಚಾದ ಬಗ್ಗೆ ದೂರುಗಳು ದಾಖಲಾಗಿದ್ದು,ಇದರ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಪಿಲಿಭಿತ್, ಪ್ರತಾಪ್‌ಗಢ ಮತ್ತು ಮತ್ತಿತರ ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಪಂಜಾಬ್​ ಗಾಯಕ ಸಿಧು ಮೂಸೆವಾಲಾ (Sidhu Moose Wala) ಹತ್ಯೆ ಆರೋಪಿಗಳಾದ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಮುಂದುವರಿದಿದೆ.

    ಕಳೆದ ವರ್ಷದ ನವೆಂಬರ್‌ನಲ್ಲಿ ಪಂಜಾಬ್‌ನ ರೂಪನಗರ (Rupnagar, Punjab) ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಈ ಗ್ಯಾಂಗ್‌ನ ನಾಲ್ವರು ಸದಸ್ಯರನ್ನು ಬಂಧಿಸಲಾಗಿತ್ತು. ಗ್ಯಾಂಗ್​ಸ್ಟರ್​ಗಳ ವಿರುದ್ಧ ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

    ವಾರದ ಹಿಂದಷ್ಟೇ ಸಿರ್ಸಾ (Sirsa) ಮೂಲದ ಲಾಜಿಸ್ಟಿಕ್ಸ್ ಪೂರೈಕೆದಾರ ಮತ್ತು ಕುಖ್ಯಾತ ರೌಡಿಯೊಬ್ಬನನ್ನು ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ವೇಳೆ ಬಂಧಿಸಲಾಗಿತ್ತು. ದೇಶ ಸೇರಿದಂತೆ ವಿದೇಶಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಸಂಚು ರೂಪಿಸುತ್ತಿರುವ ಕ್ರಿಮಿನಲ್ ಗ್ಯಾಂಗ್‌ಸ್ಟರ್‌ಗಳನ್ನು NIA ಗುರುತಿಸಿದೆ. ಶಸ್ತ್ರಾಸ್ತ್ರ ಪೂರೈಕೆದಾರನ ಬಂಧನ ಬಳಿಕ ಹರಿಯಾಣ (Haryana) ಮತ್ತು ಪಂಜಾಬ್‌ (Punjab) ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ, ಕ್ರಿಮಿನಲ್ ಗ್ಯಾಂಗ್​ಸ್ಟರ್​ಗಳನ್ನು ಬೇರುಸಹಿತ ಕಿತ್ತುಹಾಕುವ ಕ್ರಮ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

    ಕಳೆದ ವರ್ಷ ನವೆಂಬರ್‌ನಲ್ಲಿ NIA ಪಂಜಾಬ್‌ನ ತರನ್​ತರನ್​, ಫಜಿಲ್ಕಾ, ಲೂಧಿಯಾನ, ಮೊಹಾಲಿ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ವ್ಯಾಪಕ ದಾಳಿ ನಡೆಸಿತ್ತು. ಆ ಸಮಯದಲ್ಲಿ ರಾಜಸ್ಥಾನ (Rajasthan) ಮತ್ತು ದೆಹಲಿ (Delhi) ಯ ಭಾಗಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಕ್ರಿಮಿನಲ್ ಚಟುವಟಿಕೆ, ಭಯೋತ್ಪಾದಕ ಜಾಲವನ್ನು ಮಟ್ಟಹಾಕಲು ಮತ್ತು ಶಸ್ತ್ರಾಸ್ತ್ರ ಪೂರೈಕೆದಾರರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ.

    ದಕ್ಷಿಣ ಭಾರತದಲ್ಲಿ ನಡೆದಿದ್ದ ದಾಳಿ:

    ಕೆಲ ದಿನಗಳ ಹಿಂದೆ ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ, ಕೇರಳ, ತೆಲಂಗಾಣ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ NIA ದಾಳಿ ಮಾಡಿತ್ತು. ಕೇರಳಧ ಕೊಯಮತ್ತೂರು ಕಾರ್​ ಬಾಂಬ್ (Coimbatore car blast) ​, ಕರ್ನಾಟಕದ ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಸ್ಫೋಟ (Mangalore cooker bomb blast) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಿಂಚಿನ ದಾಳಿ ನಡೆಸಿತ್ತು.

    2022 ರ ಅಕ್ಟೋಬರ್​ 23 ರಂದು ತಮಿಳುನಾಡಿನ ಕೊಯಮತ್ತೂರು, ನವೆಂಬರ್​ 19 ರಂದು ಕರ್ನಾಟಕದ ಮಂಗಳೂರಿನಲ್ಲಿ ಬಾಂಬ್​ ಸ್ಫೋಟ ಸಂಭವಿಸಿದ್ದವು. ಇವೆರಡೂ ಪ್ರಕರಣಗಳ ಹಿಂದೆ ಉಗ್ರರ ಕೈವಾಡ ಶಂಕೆಯ ಮೇಲೆ NIA ಈ ದಾಳಿ ನಡೆಸಿತ್ತು.

    ತಮಿಳುನಾಡಿನ ಕೊಡುಂಗಯ್ಯೂರು ಮತ್ತು ಕೇರಳದ ಮನ್ನಾಡಿ ಸೇರಿದಂತೆ ಮೂರು ರಾಜ್ಯಗಳ ಸುಮಾರು 45 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. ಕಳೆದ ವರ್ಷ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕೊಟ್ಟೈ ಈಶ್ವರನ್ ದೇವಾಲಯದ ಮುಂಭಾಗದಲ್ಲಿ ಸ್ಫೋಟಕಗಳನ್ನು ತುಂಬಿದ ಕಾರಿನಲ್ಲಿ ಬಾಂಬ್ ಸ್ಫೋಟವಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ 11 ಆರೋಪಿಗಳನ್ನು ಬಂಧಿಸಲಾಗಿದೆ.

    Verbattle
    Verbattle
    Verbattle
    #delhi #punjab Coimbatore car blast cooker bomb blast haryana Lawrence Bishnoi m mangalore mangalore cooker blast mi NIA Sidhu Moose Wala ಉಗ್ರ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮನೆಗೆ ಬರಲು ನಿರಾಕರಿಸಿದ ಪತ್ನಿ- ಮಕ್ಕಳ ಮೇಲೆ acid ಹಾಕಿದ
    Next Article ಸೋಷಿಯಲ್ ಮೀಡಿಯಾದಲ್ಲಿ Roopa – Sindhuri ಗೆ ಪ್ರಶ್ನೆ
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    1 ಟಿಪ್ಪಣಿ

    1. Axeodp on ಫೆಬ್ರವರಿ 12, 2026 9:13 ಅಪರಾಹ್ನ

      betmgm Virginia pa bet mgm betmgm promo $10 for $200

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Nvpgsb ರಲ್ಲಿ ಕರ್ನಾಟಕ ಇತಿಹಾಸದ ಮತ್ತೊಂದು ದಾಖಲೆ
    • Pehngt ರಲ್ಲಿ ಎಲ್‌.ಕೆ. ಅತೀಕ್‌ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ | LK Atheeq
    • Yordvu ರಲ್ಲಿ ಬೆಂಗಳೂರಲ್ಲಿ ಬರೀ ವಾಹನಗಳು..
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.