Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಸ್ತಕ್ಷೇಪಕ್ಕೆ ಬಲಿಯಾದ ನಿಗಮ-ಮಂಡಳಿ, ಕಾರ್ಯಕರ್ತರು ವಿಲವಿಲ | Nigama Mandali
    ಪ್ರಚಲಿತ

    ಹಸ್ತಕ್ಷೇಪಕ್ಕೆ ಬಲಿಯಾದ ನಿಗಮ-ಮಂಡಳಿ, ಕಾರ್ಯಕರ್ತರು ವಿಲವಿಲ | Nigama Mandali

    vartha chakraBy vartha chakraಜನವರಿ 22, 202451 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಜ, 22: ಲೋಕಸಭೆ ಚುನಾವಣೆಗೆ ಮುನ್ನ ನಿಗಮ ಮಂಡಳಿಗಳ (Nigama Mandali) ನೇಮಕಾತಿ ಆದೇಶ ಹೊರಡಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಬಹುದಿನದ ಕನಸು ನನಸಾಗಲಿದೆ ಎಂದು ಭಾವಿಸಿದವರಿಗೆ ಇದೀಗ ಕಾಣದ ಕೈಗಳ ಹಸ್ತಕ್ಷೇಪ ನಿರಾಸೆ ತಂದೊಡ್ಡಿದೆ.
    ವಿಧಾನಸಭೆಗೆ ಸತತವಾಗಿ ಆಯ್ಕೆಯಾಗುತ್ತಿರುವ ಕೆಲವು ಪ್ರಭಾವಿ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರನ್ನು ಪ್ರಭಾವಿ ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಸಮಾಧಾನ ಪಡಿಸಲು ತೀರ್ಮಾನಿಸಲಾಗಿತ್ತು.

    ಇದರ ಜೊತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನಿವಾರ್ಯ ಕಾರಣಗಳಿಂದ ಸ್ಪರ್ಧಿಸಲಾಗದೆ ಹೈಕಮಾಂಡ್ ಆದೇಶವನ್ನು ಪಾಲಿಸಿದ್ದ ಕೆಲವು ನಾಯಕರು ಮತ್ತು ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ನೀಡುವ ಮೂಲಕ ಅವರನ್ನು ಗುರುತಿಸುವ ಕೆಲಸ ಮಾಡಲು ತೀರ್ಮಾನಿಸಲಾಗಿತ್ತು.
    ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಹಲವು ನಾಯಕರ ಜೊತೆ ಸತತ ಸಮಾಲೋಚನೆ ನಡೆಸಿ ಪಟ್ಟಿ ಒಂದನ್ನು ಸಿದ್ಧಪಡಿಸಿದ್ದರು.
    ನಿಗಮ– ಮಂಡಳಿಗಳಿಗೆ 37 ಶಾಸಕರು, 39 ಕಾರ್ಯಕರ್ತರ ಪಟ್ಟಿ ಸಿದ್ಧಪಡಿಸಿ,ಹೈಕಮಾಂಡ್‌ ಅನುಮೋದನೆ ನೀಡಲಾಗಿತ್ತು.ಈ ಪಟ್ಟಿಯ ಬಗ್ಗೆ ಹಲವು ಸುತ್ತಿನ ಸಮಾಲೋಚನೆ ನಡೆಸಿದ ಹೈಕಮಾಂಡ್ ಅನುಮೋದನೆ ನೀಡಿತ್ತು.‌‌ಇದಾದ ನಂತರ ಇನ್ನೇನು ಅಧಿಕೃತವಾಗಿ ಆದೇಶದ ಮೂಲಕ ನೇಮಕಾತಿ ನಿರ್ಧಾರ ಹೊರಬೀಳಲಿದೆ ಎಂದು ಹೇಳಲಾಗಿತ್ತು.

    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಂತೂ‌ ಕೆಲವೇ ಸೆಕೆಂಡ್ ಗಳಲ್ಲಿ ನೇಮಕಾತಿ ಆದೇಶ ಹೊರಬೀಳಲಿದೆ ಎಂದು ಹೇಳಿದರು. ಈ ಹೇಳಿಕೆ ಹೊರಬಿದ್ದು ನಾಲ್ಕು ದಿನಗಳಾದರೂ ನೇಮಕಾತಿ ಆದೇಶ ಹೊರಬೀಳಲಿಲ್ಲ.ಈಗ-ಆಗ ನೇಮಕ ಆದೇಶ ಬರಲಿದೆ ಎಂದು ಕಾದು ಕುಳಿತಿದ್ದ ಆಕಾಂಕ್ಷಿಗಳು ಕಾದು ಕುಳಿತದ್ದಷ್ಟೇ ಬಂತು ಆದೇಶ ಹೊರಬೀಳಲಿಲ್ಲ.
    ರಾಜ್ಯ ನಾಯಕರು ಹೈಕಮಾಂಡ್ ಗೆ ಮಾಡಿದ್ದ ಶಿಫಾರಸಸ್ಸಿನ ಪಟ್ಟಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರ ಸಹಿ ಹಾಕಿ ರವಾನಿಸಿದ್ದರು.ಅವರ ಸಹಿ ಹೊಂದಿದ್ದ ಪಟ್ಟಿ ಬಿಡುಗಡೆ ಆಗುವ ಮೊದಲೇ ಪಕ್ಷದ ವಲಯದಲ್ಲಿ ಬಹಿರಂಗವಾಗಿತ್ತು.

    ಆದರೆ, ಇನ್ನೇನು ಪಟ್ಟಿ ಪ್ರಕಟ ಸರ್ಕಾರದ ಆದೇಶದೊಂದಿಗೆ ಹೊರ ಬರಲಿದೆ ಎನ್ನುತ್ತಿರುವಾಗ ಅದು ಹೊರಬರಲಿಲ್ಲ.ಇದಕ್ಕೆ ಪ್ರಮುಖ ಕಾರಣ ಕಾಣದ ಕೈಗಳ ಹಸ್ತಕ್ಷೇಪ ಎನ್ನಲಾಗಿದೆ. ಎಐಸಿಸಿ ಅನುಮೋದಿಸಿ ವೇಣುಗೋಪಾಲ್ ಅವರು ರವಾನಿಸಿದ್ದ ಪಟ್ಟಿಯಲ್ಲಿ ಕೆಲವು ‌ಹೆಸರುಗಳು ನುಸುಳಿದ್ದವು.
    ಕಲಬುರಗಿ ಭಾಗದ ಲಲಿತ್ ರಾಘವ್, ಸಿ. ನರೇಂದ್ರ, ಮಝರ್ ಖಾನ್, ಜಗದೇವ ಗುತ್ತೆದಾರ ಅವರು ಹೆಸರು ನಿಗಮ ಮಂಡಳಿ ಪಟ್ಟಿಯಲ್ಲಿತ್ತು. ತಾವು‌ ಪಟ್ಟಿ ರಚನೆ ಸಮಯದಲ್ಲಿ ಹೈಕಮಾಂಡ್ ಜೊತೆ ನಡೆದ ಚರ್ಚೆಯಲ್ಲಿ ಈ ಹೆಸರುಗಳ ಪ್ರಸ್ತಾಪವಾಗಲಿಲ್ಲ. ರಾಜ್ಯದ ನಾಯಕರ ಚರ್ಚೆ ಸಮಯದಲ್ಲೂ ಇವುಗಳು ಇರಲಿಲ್ಲ ಈಗ ಏಕಾಏಕಿ ಯಾವುದೇ ಮಾಹಿತಿಯನ್ನೇ ನೀಡದೆ ಕೆಲವು ಕಾರ್ಯಕರ್ತರ ಹೆಸರನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಅಸಮಾಧಾನಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಲು ನಿರಾಕರಿಸಿದ್ದಾರೆ.ಇದಕ್ಕೆ ಡಿ.ಕೆ.ಶಿವಕುಮಾರ್ ಕೂಡ ಸಹಮತ ವ್ಯಕ್ತಪಡಿಸಿದರು ಎನ್ನಲಾಗಿದ್ದು, ಇದೀಗ ಪಟ್ಟಿ ಗೊಂದಲವಾಗಿ ಶೈತ್ಯಾಗಾರ ಸೇರಿದೆ.

    Government Karnataka m NDA News Nigama Mandali ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ? | Karnataka Police
    Next Article ರಾಮಭಕ್ತರಿಗೆ ಅರಣ್ಯ ಮಂತ್ರಿ ಖಂಡ್ರೆ ಕಿವಿಮಾತು | Eshwar Khandre
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TimothySmose ರಲ್ಲಿ ಅಗಲಿದ “ಕಲಾ ತಪಸ್ವಿ”
    • Richardspimi ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • HunterMooda ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe