Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರಿಗೆ ಮಾತ್ರ ನಿಗಮ-ಮಂಡಳಿಗೆ ನೇಮಕ | Karnataka
    ರಾಜಕೀಯ

    ಇವರಿಗೆ ಮಾತ್ರ ನಿಗಮ-ಮಂಡಳಿಗೆ ನೇಮಕ | Karnataka

    vartha chakraBy vartha chakraಆಗಷ್ಟ್ 9, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.9- ರಾಜ್ಯದ ವಿವಿಧ ನಿಗಮ-ಮಂಡಳಿಗಳ ನೇಮಕಾತಿ ಸಮಯದಲ್ಲಿ ಯಾರು ಎಷ್ಟೇ ದೊಡ್ಡ ನಾಯಕರಾಗಿದ್ದರೂ, ಅವರು ಬೂತ್ ಮಟ್ಟದಲ್ಲಿ ಪಕ್ಷವನ್ನು ಗೆಲ್ಲಿಸಿರಬೇಕು. ಅಂತಹ ವಿಜಯ ಸಾಧಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
    ಕೆಪಿಸಿಸಿ ಕಚೇರಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿಗಮ ಮಂಡಳಿ ಸೇರಿದಂತೆ ಹಲವು ನೇಮಕಾತಿಗಳಿಗೆ ಮುಖಂಡರು, ಕಾರ್ಯಕರ್ತರನ್ನು ಪರಿಗಣಿಸುವಾಗ ಅವರ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಡೆದಿರುವ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿಸಿದರು.

    ಈ ಕುರಿತು ವರದಿ ನೀಡುವಂತೆ ತಾವು ಜಿಲ್ಲಾ ಕಾಂಗ್ರೆಸ್‍ಗಳಿಗೆ ಸೂಚನೆ ನೀಡಿದ್ದೇವೆ.ಕಾರ್ಯಕರ್ತರ ಮನವಿಯ ಪಕ್ಕದಲ್ಲೇ ಬೂತ್ ಮಟ್ಟದ ಸಾಧನೆಗಳನ್ನು ಉಲ್ಲೇಖಿಸಲಾಗುವುದು ಶಾಸಕರಿಗೂ ಸೂಚನೆ ನೀಡಲಾಗಿದ್ದು, ಹಿಂಬಾಲಕರನ್ನು ಪರಿಗಣಸದೆ ಪಕ್ಷಕ್ಕೆ ಕೆಲಸ ಮಾಡಿದವರಿಗೆ ಅವಕಾಶ ನೀಡುವಂತೆ ತಾಕೀತು ಮಾಡಲಾಗಿದೆ‌ ಎಂದು ಹೇಳಿದರು.
    ಕೆಲವರು ನಾನು ಮಾಟ, ಮಂತ್ರ, ಮಾಯ ಮಾಡಿ ಸರ್ಕಾರವನ್ನು ತಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಇದರ ಹಿಂದೆ ನಮ್ಮ ಹೋರಾಟ ಇದೆ.ನಾವು ತ್ಯಾಗ ಮಾಡಿದ್ದೇವೆ. ಜೀವ ಪಣಕ್ಕಿಟ್ಟು ಕೋವಿಡ್ ಸಮಯದಲ್ಲಿ ಕೆಲಸ ಮಾಡಿದ್ದೇವೆ. ಅದರ ಫಲ ಸರ್ಕಾರ ರಚನೆಯಾಗಿದೆ ಎಂದರು ಕಳೆದ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡಿ ಸ್ಪಷ್ಟ ಬಹುಮತದಿಂದ ಪಕ್ಷವನ್ನು ಗೆಲ್ಲಿಸುವ ಮೂಲಕ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ. 224 ಸ್ಥಾನಗಳಲ್ಲಿ 115 ಕ್ಷೇತ್ರಗಳಿಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಎಚ್.ಎಂ.ರೇವಣ್ಣ, ಉಗ್ರಪ್ಪ, ಪದ್ಮಾವತಿಯಂತಹ ಹಿರಿಯ ನಾಯಕರು ಕೇಳಿದ ಕ್ಷೇತ್ರಗಳಿಗೆ ಟಿಕೆಟ್ ನೀಡಬೇಕಾಗಿತ್ತು. ಆದರೆ ಅದು ಆಗಲಿಲ್ಲ. ಶೇ.20 ರಷ್ಟು ಸ್ಥಾನಗಳಲ್ಲಿ ಹೆಚ್ಚು ಕಮ್ಮಿಯಾಗಿದೆ. 25 ರಷ್ಟು ನಾಯಕರಿಗೆ ಅನ್ಯಾಯವಾಗಿದೆ. ಅವರೆಲ್ಲಾ ತಮ್ಮ ವೈಯಕ್ತಿಕ ಹಿತಾಸಕ್ತಿ ಮರೆತು ತ್ಯಾಗ ಮಾಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬರಲಿ ಎಂದು ದುಡಿದಿದ್ದಾರೆ ಎಂದು ಪ್ರಶಂಸಿದರು.

    ಬಿಜೆಪಿ ಮುಕ್ತ:
    ಬಿಜೆಪಿಯವರು ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡುತ್ತಿದ್ದರು. ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಪಕ್ಷದಲ್ಲಿ ಹುಮ್ಮಸ್ಸು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಭಾರತ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
    ಈ ಹಿಂದೆ ಬ್ರಿಟಿಷರನ್ನು ತೊಲಗಿಸಲು ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಕಾಂಗ್ರೆಸಿಗರು ಭಾರತ ಬಿಟ್ಟು ತೊಲಗಿ ಎಂಬ ಚಳುವಳಿ ನಡೆಸಿದರು. 81 ವರ್ಷಗಳ ಬಳಿಕ ಈಗಿನ ಕಾಂಗ್ರೆಸಿಗರು ಕೋಮುವಾದಿ, ಸರ್ವಾಧಿಕಾರಿಗಳ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಕರೆ ನೀಡಿದರು.
    ದೇಶದ ಎಲ್ಲಾ ವಿಪಕ್ಷಗಳ ನಾಯಕರು ಬೆಂಗಳೂರಿಗೆ ಬಂದು ಇಂಡಿಯಾ ರಾಜಕೀಯ ಕೂಟದ ಮೂಲಕ ಹೊಸ ಅಧ್ಯಯನಕ್ಕೆ ಮುನ್ನುಡಿ ಬರೆದಿದ್ದು, ಬೆಂಗಳೂರು ಅದಕ್ಕೆ ಸಾಕ್ಷಿಯಾಗಿದೆ. ನಮ್ಮ ಮುಂದಿನ ಗುರಿ 2024 ರ ಲೋಕಸಭೆ ಚುನಾವಣೆಯಷ್ಟೇ ಅಲ್ಲ, 2028 ರ ವಿಧಾನಸಭೆ ಚುನಾವಣೆ ಕೂಡಾ ಆಗಿದೆ. ಅದಕ್ಕೆ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಕಳೆದ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

    Verbattle
    Verbattle
    Verbattle
    Congress Karnataka karnataka govt ಉಗ್ರ ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ ಒನ್ | Elephant Population
    Next Article Stunt ಮಾಡಲು ಹೋಗಿ ತಗಲಾಕ್ಕೊಂಡ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dkuwpf ರಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ
    • Gyvwxj ರಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಬಹುಮತ ಖಚಿತ! | Telangana Elections
    • Ziqtbh ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಟ್ಯಾಗ್
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.