Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಲೆಗಳಲ್ಲಿ ಸಾತ್ವಿಕ ಆಹಾರ ಇಲ್ಲ
    ಶಿಕ್ಷಣ

    ಶಾಲೆಗಳಲ್ಲಿ ಸಾತ್ವಿಕ ಆಹಾರ ಇಲ್ಲ

    vartha chakraBy vartha chakraಫೆಬ್ರವರಿ 13, 2023Updated:ಮಾರ್ಚ್ 20, 202380 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.13-
    ‘ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೈತಿಕ ಶಿಕ್ಷಣವನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಆದರೆ ಸಾತ್ವಿಕ ಆಹಾರದ ಬಗ್ಗೆ ಯಾವುದೇ ಪ್ರಸ್ತಾವನೆಗಳಿಲ್ಲ’ ಎಂದು ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ (B.C. Nagesh) ಸ್ಪಷ್ಟಪಡಿಸಿದರು. ‘ರಾಜ್ಯದಲ್ಲಿ 6 ರಿಂದ 15 ನೇ ವಯೋಮಾನದ 1 ರಿಂದ 8 ನೇ ತರಗತಿಯ ಮಕ್ಕಳಲ್ಲಿ ಅಪೌಷ್ಠಿಕತೆ, ರಕ್ತಹೀನತೆ ಹಾಗೂ ಬಹುಪೋಷಕಾಂಶಗಳ ನ್ಯೂನ್ಯತೆ ಸರಿಪಡಿಸಲು ಮಕ್ಕಳಿಗೆ ಮೊಟ್ಟೆ ಅಥವಾ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಇಲ್ಲವೆ ಚಿಕ್ಕಿ ನೀಡುವುದನ್ನು ಮುಂದುವರೆಸಲಾಗುವುದು’ ಎಂದು ಹೇಳಿದರು.

    ವಿಧಾನಪರಿಷತ್ನಲ್ಲಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ (K.A Thippeswamy) ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಒಂದರಿಂದ ಎಂಟನೇ ತರಗತಿಯವರೆಗೂ ಮೊಟ್ಟೆ ನೀಡಬೇಕು ಎಂದು 2007ರಿಂದಲೂ ಚರ್ಚೆ ನಡೆಯುತ್ತಿದೆ. ಆದರೆ ಕೊಟ್ಟಿರಲಿಲ್ಲ. ನಮ್ಮ ಸರ್ಕಾರ ಯಾವುದೇ ವಿರೋಧ ಬಂದರೂ ಲೆಕ್ಕಿಸದೆ ಮೊದಲು ಅಪೌಷ್ಠಿಕತೆ ಹೆಚ್ಚಿರುವ ಜಿಲ್ಲೆಗಳಲ್ಲಿ ಮೊಟ್ಟೆ ನೀಡುವುದನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿತ್ತು’ ಎಂದರು.
    ‘ಶಿಕ್ಷಣ ತಜ್ಞರು, ಕೆಲವು ಮಠಾಧೀಶರು, ಸಂಘ ಸಂಸ್ಥೆಗಳು ಮೊಟ್ಟೆಯ ಬದಲಾಗಿ ಸಸ್ಯಹಾರಿ, ಸಾತ್ವಿಕ ಆಹಾರ ನೀಡುವಂತೆ ಸಲಹೆ ನೀಡಿದ್ದರು. ಆದರೆ, ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ವರದಿ ಪ್ರಕಾರ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ರೂಪದಲ್ಲಿ ಮೊಟ್ಟೆ ಹಾಗೂ ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಚಿಕ್ಕಿ ನೀಡಲಾಗುವುದು’ ಎಂದು ಹೇಳಿದರು.

    ‘ಶಾಲಾ ಶಿಕ್ಷಣದ ಕುರಿತು ಚರ್ಚಿಸಲು ಇತ್ತೀಚೆಗೆ ಸರ್ವ ಧರ್ಮಗಳ ಚಿಂತಕರ ದುಂಡು ಮೇಜಿನ ಸಭೆ ನಡೆಸಲಾಗಿತ್ತು. ಅಲ್ಲಿ ಕೆಲವರು ಸಾತ್ವಿಕ ಆಹಾರದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಭಿಪ್ರಾಯ ವ್ಯಕ್ತ ಪಡಿಸುವುದು ಅವರ ಸ್ವಾತಂತ್ರ್ಯ, ಅಭಿಪ್ರಾಯವನ್ನು ಇದೇ ರೀತಿ ವ್ಯಕ್ತಪಡಿಸಿ ಎಂದು ಹೇಳಲು ಸರ್ಕಾರಕ್ಕೆ ಸಾಧ್ಯವಿಲ್ಲ. ಆದರೆ ಸಾತ್ವಿಕ ಆಹಾರ ನೀಡುವ ಬಗ್ಗೆ ಚಿಂತನೆ ನಡೆಸಿಲ್ಲ’ ಎಂದರು. ‘ಶಾಲಾ ಹಂತದಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಎಲ್ಲರೂ ಸಲಹೆ ನೀಡಿದ್ದಾರೆ. ಅದನ್ನು ಮುಂದಿನ ವರ್ಷದಿಂದ ಜಾರಿಗೆ ತರಲು ಪಯತ್ನಗಳು ನಡೆದಿವೆ. ಇಲ್ಲಿ ನೈತಿಕ ಶಿಕ್ಷಣ ಮತ್ತು ಸಾತ್ವಿಕ ಆಹಾರವನ್ನು ಒಂದೇ ದೃಷ್ಟಿಯಿಂದ ನೋಡುವುದು ಸರಿಯಲ್ಲ’ ಎಂದರು.

    Bangalore education education minister bc nagesh Government K.A Thippeswamy Karnataka m mid-day meals nagesh ಆರೋಗ್ಯ ಧರ್ಮ ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸಂಬಳದಲ್ಲಿ Al-Qaeda ಗೆ ಸಿಗುತ್ತಿತ್ತು ಪಾಲು
    Next Article ಆಹಾ! ಬೆಂಡೆಕಾಯಿ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://sknewstroy.ru ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://sofiaposada.com.co/review-completa-de-balloon-juego-de-smartsoft-para-13/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • fishezdpa ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe