ಬೆಂಗಳೂರು, ಆ.14- ಬಿಜೆಪಿ ನಾಯಕ ಅಶ್ವಥ್ ನಾರಾಯಣ (Ashwath Narayan) ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಡಾಕ್ಟರೇಟ್ ಮಾಡಿದ್ದಾರೆ. ಇವರು ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ್ ಅವರಿಗೆ ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆ ಬಗ್ಗೆ ಚಿಂತೆ ಇಲ್ಲ. ಇದ್ದಿದ್ದರೆ ಅವರ ಕಾಲದಲ್ಲೇ ಬಿಲ್ ಪಾವತಿ ಮಾಡುತ್ತಿದ್ದರು. ಈಗ ತಮ್ಮದೇ ಆದ ಕೆಲವು ಬಿಜೆಪಿ ಗುತ್ತಿಗೆದಾರರನ್ನು ಎತ್ತಿ ಕಟ್ಟಿ ನಕಲಿ ಗುತ್ತಿಗೆದಾರರು, ಬೇನಾಮಿ ಕಳ್ಳರ ರಕ್ಷಣೆಗೆ ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ಅಶ್ವಥ್ ನಾರಾಯಣ ಕೃಪಾಪೋಷಿತ ನಾಟಕ ಮಂಡಳಿ ಆಟ ಜಾಸ್ತಿ ದಿನ ನಡೆಯಲ್ಲ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಏನು ಬೇಕಾದರೂ ಮಾಡಲಿ ಇವರ ನಾಟಕದ ಎಲ್ಲಾ ಕತೆಗಳನ್ನು ಸದ್ಯದಲ್ಲೇ ದಾಖಲೆ ಸಮೇತ ಬಣ್ಣ ಬಯಲು ಮಾಡುತ್ತೇನೆ ಎಂದು ಹೇಳಿದರು.
ಗುತ್ತಿಗೆದಾರರಲ್ಲಿ ಯಾರು ಎಷ್ಟು ಕೆಲಸ ಮಾಡಿದ್ದಾರೆ? ಹೇಗೆ ಮಾಡಿದ್ದಾರೆ? ಯಾರು ಯಾರನ್ನು ಹೇಗೆ ಎತ್ತಿಕಟ್ಟುತ್ತಿದ್ದಾರೆ? ಎಂಬುದು ಬಯಲಾಗಲಿದೆ. ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆಗೆಂದೇ ಪ್ರಾಥಮಿಕ ತನಿಖೆ ಮಾಡಲೇಬೇಕು. ಅದನ್ನು ಸರ್ಕಾರ ಮಾಡುತ್ತಿದೆ. ಇದನ್ನು ತಪ್ಪಿಸಲು ಅವರು ಇಷ್ಟೆಲ್ಲಾ ಆಟವಾಡುತ್ತಿದ್ದಾರೆ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಏನು ಬೇಕಾದರೂ ಮಾಡಲಿ. ರಾಜ್ಯಪಾಲರಿಗೆ ಮಾತ್ರವಲ್ಲ ರಾಷ್ಟ್ರಪತಿ ಬಳಿಗೂ ಹೋಗಲಿ. ಯಾವುದೇ ಅಭಿಯಾನ ಮಾಡಲಿ ನಾವು ಹೆದರುವುದಿಲ್ಲ ಎಂದರು.
ನಾನು ಈ ವಿಚಾರವಾಗಿ ಮೊನ್ನೆಯೇ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿತು. ಇಂದು ಪಕ್ಷದ ಸಭೆ ಇದೆ. ನಾಳೆ ಸ್ವಾತಂತ್ರ ದಿನಾಚರಣೆ ಇದೆ. ಹೀಗಾಗಿ ಈಗ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಎಂದು ಹೇಳಿದರು
ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದು ಇಡೀ ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು.ಇದರಿಂದ ಮಾನಸಿಕ ಖಿನ್ನತೆಗೊಳಗಾಗಿದ್ದಾರೆ.ಹಿಂದೆ ಮಂತ್ರಿಯಾಗಿದ್ದ ಇವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ ವಿಚಾರವನ್ನು ಬಿಚ್ಚಿಟ್ಟಿಲ್ಲ. ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ಅವರ ಎಲ್ಲಾ ಅಕ್ರಮಗಳನ್ನು ಬಿಚ್ಚಿಡುತ್ತೇವೆ ಎಂದರು.
4 ಪ್ರತಿಕ್ರಿಯೆಗಳು
The thoroughness in this piece is noteworthy.
I am in fact thrilled to glitter at this blog posts which consists of tons of profitable facts, thanks for providing such data.
buy zithromax 500mg generic – buy flagyl 400mg sale flagyl for sale
inderal sale – buy clopidogrel pill cost methotrexate 10mg