ಬೆಂಗಳೂರು, ಅ.26- ಕನಕಪುರ ಬೆಂಗಳೂರಿನ ಭಾಗವಾಗಬೇಕು ಎಂಬ ತಮ್ಮ ಹೇಳಿಕೆಯ ಕುರಿತಂತೆ ಉಂಟಾಗಿರುವ ವಿವಾದ ಮತ್ತು ಗೊಂದಲಕ್ಕೆ ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ
ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು ಎಂದಿದ್ದಾರೆ.
ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು ಎಂದು ತಿಳಿಸಿದ್ದಾರೆ.
ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು ಎಂದಿದ್ದಾರೆ.
ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು.
ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ ಎಂದು ವಿವರಿಸಿದ್ದಾರೆ.
ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ


2 ಪ್ರತಿಕ್ರಿಯೆಗಳು
Betano Casino kalder på alle vindere. Få op til 200 gratis spins https://betanogame.org/da/ og en €500 bonus på din første indbetaling. Fra klassisk roulette til spændende live blackjack – actionen stopper aldrig. Tilmeld dig nu og mærk suset fra ægte casino-spænding.
Mostbet: onde a diversГЈo encontra as melhores oportunidades de ganhar todos os dias – https://mostbetpt.pro/ , Descubra o cassino que estГЎ conquistando o Brasil: Mostbet .