ಬೆಂಗಳೂರು,ಏ.30- ಬೇಲಿಯೇ ಎದ್ದು ಹೊಲ ಮೇಯ್ದ ಕತೆಯಿದು. ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಜನಸಾಮಾನ್ಯರಿಗೆ ರಕ್ಷಣೆ ನೀಡುವ ಜವಾಬ್ದಾರಿ ಹೊತ್ತ ಪೊಲೀಸ್ ಅಧಿಕಾರಿ (Police Officer) ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರ ಮೇಲೆ ದೌರ್ಜನ್ಯ ವೆಸಗಿದ ಆರೋಪದಲ್ಲಿ ಸಿಲುಕಿದ್ದಾರೆ.
ರಾತ್ರಿ ವೇಳೆ ಗಸ್ತು ತಿರುಗುವ ಮೂಲಕ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಅಧಿಕಾರಿ (Police Officer) ಮಧ್ಯರಾತ್ರಿ ಮಹಿಳೆ ಮತ್ತು ಮಕ್ಕಳಿದ್ದ ಮನೆಗೆ ನುಗ್ಗಿದ್ದಾರೆ.
ಈ ಕುರಿತಂತೆ ಬೆಂಗಳೂರಿನ ಸುಬ್ರಮಣ್ಯನಗರ ಠಾಣೆ ಇನ್ಸ್ಪೆಕ್ಟರ್ ವಿರುದ್ದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಇನ್ಸ್ಪೆಕ್ಟರ್ ಶರಣಗೌಡ ವಿರುದ್ದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಲಾಗಿದೆ. ರಾಜಕುಮಾರ್ ಎಂಬುವರ ಬಂಧನಕ್ಕೆ ಇನ್ಸ್ಪೆಕ್ಟರ್ ಶರಣಗೌಡ ಪೊಲೀಸರ (Police Officer) ಜೊತೆ ತೆರಳಿದ್ದರು. ಈ ವೇಳೆ ಮನೆಯಲ್ಲಿದ್ದ ಪತ್ನಿ ಹಾಗೂ ಮಗಳ ಜೊತೆ ಪೊಲೀಸರು ಅಸಭ್ಯ ವರ್ತಿಸಿರುವ ಆರೋಪವಿದೆ. ಇದನ್ನು ಪ್ರಶ್ನೆ ಮಾಡಲು ರಾಜಕುಮಾರ್ ಇನ್ಸ್ಪೆಕ್ಟರ್ ಗೆ ಕರೆ ಮಾಡಿದ್ದ. ಈ ವೇಳೆ ರಾಜಕುಮಾರ್ ಗೆ ಯಾವುದರ ಬಗ್ಗೆ ದೂರು ಬಂದಿದೆ ಇನ್ಸ್ಪೆಕ್ಟರ್ ಮಾಹಿತಿ ನೀಡಿಲ್ಲ.
ಮಾತ್ರವಲ್ಲ ಯಾರಿಗೆ ಬೇಕಾದರೂ ದೂರು ಕೊಡು ಎಂದು ಅವಾಜ್ ಹಾಕಿದ್ದ. ಇದೀಗ ಇನ್ಸ್ಪೆಕ್ಟರ್ ಶರಣಗೌಡ ಹಾಗೂ ರಾಜಕುಮಾರ್ ನಡುವಿನ ಸಂಭಾಷಣೆ ವೈರಲ್ ಆಗಿ. (Police Officer)
Also read.