Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕಿಸ್ತಾನ್ ಜಿಂದಾಬಾದ್, ಬೆನ್ನು ಹತ್ತಿದ ಪೊಲೀಸರು | Pakistan Zindabad
    Viral

    ಪಾಕಿಸ್ತಾನ್ ಜಿಂದಾಬಾದ್, ಬೆನ್ನು ಹತ್ತಿದ ಪೊಲೀಸರು | Pakistan Zindabad

    vartha chakraBy vartha chakraಮಾರ್ಚ್ 1, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.1- ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ (Pakistan Zindabad) ಕೂಗಿದ ಪ್ರಕರಣ ಸಂಬಂಧ ಈಗಾಗಲೇ ಒಂದು ವಿಡಿಯೋದ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್​ಎಸ್​ಎಲ್) ವರದಿ ಪೊಲೀಸರ ಕೈಸೇರಿದ ಬೆನ್ನಲ್ಲೇ ಮತ್ತಷ್ಟು ವಿಡಿಯೋಗಳನ್ನು ಎಫ್​ಎಸ್​ಎಲ್​ಗೆ ಸಲ್ಲಿಸಲಾಗಿದೆ.
    ಘಟನೆಯ ಸಂಬಂಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ಇನ್ನಷ್ಟು ವಿಡಿಯೋಗಳನ್ನು ಪರೀಕ್ಷೆಗಾಗಿ ಎಫ್‌ಎಸ್ ಎಲ್​ಗೆ ಕಳುಹಿಸಿದ್ದಾರೆ. ಸದ್ಯ ಆಡಿಯೋ ಉಚ್ಚಾರಣೆ ಬಗ್ಗೆ ಪೊಲೀಸರು ಎಫ್​ಎಸ್​ಎಲ್​ನಿಂದ ಮೌಖಿಕ ಮಾಹಿತಿ ಪಡೆದಿದ್ದು, ಇದನ್ನು ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ.

    ಸಂಪೂರ್ಣ ಎಫ್​ಎಸ್​ಎಲ್ ವರದಿ ಬರಲು ಮತ್ತಷ್ಟು ಸಮಯ ಅಗತ್ಯ ಇದೆ. ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿರುವ ಬಗ್ಗೆ ಧೃಡಪಡಬೇಕು. ಧೃಡ ಆದ ಕೂಡಲೇ ಕೂಗಿದವರು ಯಾರು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಇದಕ್ಕೆ ಅಲ್ಲಿದ್ದವರ ಎಲ್ಲರ ವಾಯ್ಸ್ ಸ್ಯಾಂಪಲ್ ಅನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದಾರೆ. ನಂತರ ವಿಧಾನಸೌಧದ ಆಡಿಯೋ ಜೊತೆ ಪೊಲೀಸರು ಸಂಗ್ರಹಿಸಿದ ವಾಯ್ಸ್ ಸ್ಯಾಂಪಲ್ ಅನಾಲಿಸಿಸ್ ನಡೆಸಲಾಗುತ್ತದೆ.

    8ಮಂದಿ ವಿಚಾರಣೆ:
    ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸರು ಇಲ್ಲಿಯವರೆಗೆ 8 ಮಂದಿಯ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ವಿಚಾರಣೆ ವೇಳೆ ಏಳು ಮಂದಿಯು ತಾವು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದಿದ್ದಾರೆ.
    ಈ 8 ಮಂದಿ ಐಕಿ ಪೈಕಿ ಮೂವರ ಧ್ವನಿ ಮಾದರಿಯನ್ನು ​ಪೊಲೀಸರು ಪಡೆದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್​ಎಸ್​ಎಲ್) ಗೆ ರವಾನೆ ಮಾಡಲಾಗಿದೆ.
    ಇನ್ನು ಧ್ವನಿ ಮಾದರಿ ಜೊತೆಗೆ ವಿಡಿಯೋ ತುಣಕನ್ನು ಕಳುಹಿಸಿದ್ದಾರೆ. ಪೊಲೀಸರು ಎಲ್ಲ ಮಾಧ್ಯಮಗಳಿಂದ ವಿಡಿಯೋ ತುಣಕುಗಳನ್ನು ಪಡೆದಿದ್ದಾರೆ. ಈ ಎಲ್ಲ ವಿಡಿಯೋಗಳಲ್ಲಿ ಕೇವಲ ಒಂದು ವಿಡಿಯೋ ತುಣುಕನ್ನು ಮಾತ್ರ ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗಿದೆ.

    26 ಮಂದಿಯ ಪಟ್ಟಿ:
    ಇನ್ನು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆ ಮೇಲೆ ವಿಧಾನಸೌಧ ಪೊಲೀಸರು 26 ಮಂದಿಯ ಪಟ್ಟಿ ತಯಾರಿಸಿದ್ದು, ಇನ್ನೂ 19 ಜನರ ವಿಚಾರಣೆ ಬಾಕಿ ಇದೆ.
    ರಾಜ್ಯಸಭಾ ಸದಸ್ಯ ನಾಸಿ‌ರ್ ಹುಸೇನ್ ವಿಜಯೋತ್ಸವದ ವೇಳೆ ಪಕ್ಕದಲ್ಲಿ ಇದ್ದ ಬೆಂಬಲಿಗ ಬ್ಯಾಡಗಿ ಮೂಲದ ಮೊಹಮ್ಮದ್ ಶಫಿ ನಾಶಿಪುಡಿ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
    ಬ್ಯಾಡಗಿಗೆ ತೆರಳಿದ್ದ ಪೊಲೀಸರ ತಂಡ, ಮೊಹಮ್ಮೆದ್ ಶಫಿಯನ್ನು ವಶಕ್ಕೆ ಪಡೆದು ನಗರಕ್ಕೆ ಕರೆತಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಈತನ ಧ್ವನಿ ಮಾದರಿ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

    Verbattle
    Verbattle
    Verbattle
    NDA Pakistan Zindabad ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದರಾಮಯ್ಯ | Caste Census
    Next Article Traffic ನಿಯಮ ಉಲ್ಲಂಘನೆ ಕ್ಯೂಆರ್ ಕೋಡ್ ನಲ್ಲಿ ದಂಡ ಪಾವತಿ | QR Code
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    1 ಟಿಪ್ಪಣಿ

    1. Vjyugx on ಫೆಬ್ರವರಿ 13, 2026 4:51 ಅಪರಾಹ್ನ

      betmgm CA betmgm-play betmgm CA

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Aawlmy ರಲ್ಲಿ ಯೋಗಿ ಯಡವಟ್ಟು? 30 ಬಲಿ
    • Zwjvbf ರಲ್ಲಿ ಕೇಂದ್ರ ಮಂತ್ರಿ ಬ್ಯಾಟಿಂಗ್ ನಿಂದ ಗಾಯಗೊಂಡ ಕಾರ್ಯಕರ್ತ
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.