Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡಿಟ್ಟು ಹಂತಕರ ಸೆರೆ
    ಅಪರಾಧ

    ಗುಂಡಿಟ್ಟು ಹಂತಕರ ಸೆರೆ

    vartha chakraBy vartha chakraಫೆಬ್ರವರಿ 19, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.19-

    ಇಬ್ಬರು ಯುವಕರ ಜೋಡಿ ಕೊಲೆ‌ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ದೊಡ್ಡಬಳ್ಳಾಪುರ (Doddaballapura) ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಪೊಲೀಸರ ಗುಂಡು ಕಾಲಿಗೆ ತಗುಲಿ ಗಾಯಗೊಂಡ ವಿನಯ್ ಹಾಗೂ ತ್ರಿಮೂರ್ತಿ(ಅಪ್ಪಾಜಿ) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಫೆ‌17 ರಂದು ಮಧ್ಯಾಹ್ನ ಚಾಕುವಿನಿಂದ ಹೊಟ್ಟೆ, ಮರ್ಮಾಂಗಕ್ಕೆ ಇರಿದು  ಭರತ್ ಕುಮಾರ್ (23), ಪ್ರತೀಕ್ (17) ಎಂಬ ಯುವಕರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.

    ಜೋಡಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳು ದೊಡ್ಡಬಳ್ಳಾಪುರದ ಡಿ.ಕ್ರಾಸ್ ಸಮೀಪದ ಪ್ಲೈ ಓವರ್‌ ನ ರೈಲ್ವೆ ಗೇಟ್ ಬಳಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಬಂಧಿಸುವ ಸಲುವಾಗಿ ಸಿಬ್ಬಂದಿಗಳೊಂದಿಗೆ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ ಸ್ಪೆಕ್ಟರ್ ಹರೀಶ್ ಕುಮಾರ್ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಹರೀಶ್ ತೆರಳಿದ್ದರು. ಆರೋಪಿಗಳು ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸ್ ಸಿಬ್ಬಂದಿ ಕರಾ‌ರ್ ಹುಸೇನ್, ಸುನೀಲ್ ಬಾಸಗಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದು, ಆತ್ಮ ರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ.

    ಈ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಸಚಿವ ಎಂಟಿಬಿ ನಾಗರಾಜ್ (M. T. B. Nagaraj) ಆರೋಪಿಗಳನ್ನು 24 ಗಂಟೆಗಳ ಒಳಗೆ ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದರು. ಅದರಂತೆಯೇ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಹಳೇ ಪೆಟ್ರೋಲ್ ಬಂಕ್ ಹತ್ರ ಆರೋಪಿಗಳು ಇರುವ ಸುಳಿವು ಪೊಲೀಸರಿಗೆ ಸಿಕ್ಕಿತು.

    ರಾತ್ರಿ ವೇಳೆ ಗಸ್ತಿನಲ್ಲಿದ್ದ ಪೋಲೀಸರಿಗೆ ಮಾಹಿತಿ ಸಿಕ್ಕ ನಂತರ ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಅಷ್ಟರಲ್ಲಿ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಐವರು ಆರೋಪಿಗಳ ಪೈಕಿ ಅನಿಲ್ , ಕೋರಿ, ದೀಪು ಸೇರಿದಂತೆ ಇತರರು ಇನ್ನೂ ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.

    ಶಿವರಾತ್ರಿ ಹಬ್ಬದ ಪ್ರಯುಕ್ತ BJP ಮುಖಂಡ ಧೀರಜ್​ ಅವರು ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದ್ದು, ಈ ವೇಳೆ ಮೈದಾನದಲ್ಲಿ ಕಾರು ನಿಲ್ಲಿಸಿದ್ದನ್ನು ಭರತ್ ಹಾಗೂ ಪ್ರತೀಕ್ ಪ್ರಶ್ನಿಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಮಾರಾಮಾರಿಯಾಗಿದೆ.  ಗ್ರಾಮಸ್ಥರು, ಇತರೆ ಆಟಗಾರರು ಜಗಳ ಬಿಡಿಸಿ ಕಳುಹಿಸಿದ್ದರು. ಇನ್ನೇನು ಎಲ್ಲಾ ಮುಗಿತು ಎನ್ನುವಷ್ಟರಲ್ಲೇ ಭರತ್, ಪ್ರತೀಕ್ ಬಸ್​ ನಿಲ್ದಾಣಕ್ಕೆ ಬಂದಾಗ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ಸ್ಥಳಕ್ಕೆ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ (Mallikarjun Baladandi) ಭೇಟಿ, ಪರಿಶೀಲನೆ ನಡೆಸಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಟೂರ್ನಿಗಳಿಗೆ ನಿರ್ಬಂಧ:

    ಕ್ರಿಕೇಟ್‌ ಟೂರ್ನಿಮೆಂಟ್ ವೇಳೆ ಇಬ್ಬರ ಕೊಲೆ ಹಿನ್ನೆಲೆ, ಚುನಾವಣೆ ಮುಗಿಯುವವರೆಗೂ ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಟೂರ್ನಿಗಳನ್ನು ನಿರ್ಬಂಧಿಸಲಾಗಿದೆ. ಯಾವುದೇ ಪಂದ್ಯಾವಳಿಗಳಿಗೆ ಅವಕಾಶ ನೀಡಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಅಕ್ರಮವಾಗಿ ಪಂದ್ಯಾವಳಿ ಆಯೋಜನೆ ಮಾಡಿದ್ರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ.

    ಕಳೆದ ರಾತ್ರಿ ಸ್ನೇಹಿತರಿಂದ ಹಣ ಪಡೆದುಕೊಳ್ಳಲು ವಿನಯ್ ಮತ್ತು ತ್ರೀಮೂರ್ತಿ ಬರುತ್ತಿರುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ನಮ್ಮ‌ತಂಡ ಅವರನ್ನ ಸುತ್ತುವರೆದು ಬಂಧಿಸಲು ಮುಂದಾಗಿ ಎಚ್ಚರಿಕೆ ನೀಡಿದರೂ, ಅವರು ಕೇಳದೆ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ರು. ಹೀಗಾಗಿ ಆರೋಪಿಗಳ ಮೇಲೆ ನಮ್ಮ ತಂಡ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಮಾಹಿತಿ ನೀಡಿದ್ದಾರೆ.

    Bangalore BJP cricket tournament crime Doddaballapura m Mallikarjun Baladandi Police ಕಾನೂನು ಕಾರು ಕೊಲೆ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleCongress ಸೇರಿದ CT Ravi ಆಪ್ತ
    Next Article Rohini Sindhuri ಖಾಸಗಿ ಪೋಟೋ ಬಹಿರಂಗ
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. buy generic cialis online canada on ಜೂನ್ 9, 2025 10:46 ಅಪರಾಹ್ನ

      This is a question which is in to my fundamentals… Diverse thanks! Exactly where can I find the connection details for questions?

      Reply
    2. crushed flagyl for wound care on ಜೂನ್ 11, 2025 5:03 ಅಪರಾಹ್ನ

      This is a topic which is in to my heart… Many thanks! Exactly where can I lay one’s hands on the acquaintance details due to the fact that questions?

      Reply
    3. n2dox on ಜೂನ್ 19, 2025 3:57 ಫೂರ್ವಾಹ್ನ

      inderal pills – buy propranolol medication methotrexate where to buy

      Reply
    4. x12ht on ಜೂನ್ 22, 2025 12:52 ಫೂರ್ವಾಹ್ನ

      amoxil without prescription – cheap valsartan 80mg ipratropium 100mcg canada

      Reply
    5. qey2b on ಜೂನ್ 24, 2025 3:51 ಫೂರ್ವಾಹ್ನ

      cost azithromycin – order bystolic 5mg pill brand bystolic 20mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vg1e0 ರಲ್ಲಿ ಅಕ್ರಮ ಆಸ್ತಿ ಗಳಿಕೆ‌‌ ಪ್ರಕರಣ: ಸಂಕಷ್ಟಕ್ಕೆ ಸಿಲುಕಿದ ಡಿ.ಕೆ.ಶಿವಕುಮಾರ್ | DK Shivakumar
    • Bobbyglupe ರಲ್ಲಿ ಬೆಂಗಳೂರಲ್ಲಿ ಬೀದಿ ನಾಯಿಗಳು ಎಷ್ಟಿವೆ ಗೊತ್ತಾ | Stray Dogs
    • u7k9h ರಲ್ಲಿ ರಾಜ್ಯದ ಗ್ಯಾರಂಟಿ ದೇಶಕ್ಕೆ ಮಾದರಿ ಎಂದ ರಾಜ್ಯಪಾಲರು | TC Gehlot
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe