Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆನೆ ಮತ್ತು ಕಮಲದ ಮಧ್ಯೆ ಜಗಳವಾಗಿ ಕೈ ಕಟ್
    ರಾಜಕೀಯ

    ತೆನೆ ಮತ್ತು ಕಮಲದ ಮಧ್ಯೆ ಜಗಳವಾಗಿ ಕೈ ಕಟ್

    vartha chakraBy vartha chakraಜನವರಿ 23, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಾಸನ,ಜ.23- ರಾಜಕೀಯ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ಶುರುವಾದ ಜಗಳ ಮಚ್ಚಿನಿಂದ ಸ್ನೇಹಿತನ ಕೈ ಕಡಿಯುವ ಮೂಲಕ ಅಂತ್ಯವಾಗಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸ್ಕವಳ್ಳಿ ಗ್ರಾಮದಲ್ಲಿ ನಡೆದಿದೆ.

    ಗುರುಮೂರ್ತಿ ಮಚ್ಚಿನಿಂದ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಇವರ ಮೇಲೆ ಹೊಸ್ಕವಳ್ಳಿಕೊಪ್ಪಲು ಗ್ರಾಮದ ರಮೇಶ್ ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ.
    ರಮೇಶ್ ಹಾಗೂ ಗುರುಮೂರ್ತಿ ಇಬ್ಬರೂ ಸ್ನೇಹಿತರಾಗಿದ್ದು, ಬಾಳ್ಳುಪೇಟೆಯ ಜೆಪಿ ನಗರದಲ್ಲಿ ಹಣಕಾಸು ವಿಚಾರ ಮಾತನಾಡುತ್ತಿದ್ದರು. ಗುರುಮೂರ್ತಿ ಬಳಿ ರಮೇಶ್ 85 ಸಾವಿರ ರೂ. ಸಾಲ ಪಡೆದಿದ್ದ. ಇದೀಗ ಹಣವನ್ನು ವಾಪಸ್ ಕೊಡುವಂತೆ ಗುರುಮೂರ್ತಿ ಕೇಳಿದ್ದ. ಈ ವೇಳೆ ರಮೇಶ್ ಕೊಡುತ್ತೇನೆ ಎಂದಿದ್ದ. ನಂತರ ಇಬ್ಬರ ನಡುವೆ ರಾಜಕೀಯ ಚರ್ಚೆ ಶುರುವಾಗಿದೆ.

    ಗುರುಮೂರ್ತಿ ಬಿಜೆಪಿ ಪಕ್ಷದ ಕಾರ್ಯಕರ್ತ, ರಮೇಶ್ ಜೆಡಿಎಸ್ ಪಕ್ಷದ ಕಾರ್ಯಕರ್ತ. ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಗುರುಮೂರ್ತಿ ಹೇಳಿದ್ದಾನೆ. ಇತ್ತ ರಮೇಶ್ ಇಲ್ಲ ಈ ಬಾರಿ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಿದ್ದಾನೆ. ಇದು ಅತಿರೇಕಕ್ಕೆ ಹೋಗಿ ಇಬ್ಬರ ನಡುವೆ ಜಗಳ ಶುರುವಾಗಿ ಪರಸ್ಪರ ತಳ್ಳಾಡಿದ್ದಾರೆ. ಕೊನೆಗೆ ಸ್ಥಳೀಯರು ಮಧ್ಯಪ್ರವೇಶ ಮಾಡಿ ಇಬ್ಬರ ಜಗಳವನ್ನು ಬಿಡಿಸಿ ಕಳುಹಿಸಿದ್ದರು.
    ಇದೇ ವಿಚಾರಕ್ಕೆ ಹೊಸ್ಕಳ್ಳಿ ಗ್ರಾಮಕ್ಕೆ ಕಾರಿನಲ್ಲಿ ಬಂದ ರಮೇಶ್, ಹಣ ಕೊಡುತ್ತೇನೆ ಮನೆಯಿಂದ ಹೊರಗೆ ಬಾ ಎಂದು ಗುರುಮೂರ್ತಿಗೆ ಫೋನ್ ಮಾಡಿದ್ದಾನೆ. ಮನೆಯಿಂದ ಹೊರಗೆ ಬಂದು ಗುರುಮೂರ್ತಿ ಕಾರಿನ ಬಳಿ ಬರುತ್ತಿದ್ದಂತೆ ರಮೇಶ್ ಮಚ್ಚು ಬೀಸಿದ್ದಾನೆ. ಆಗ ಗುರುಮೂರ್ತಿ ತನ್ನ ಎಡಗೈ ಅಡ್ಡ ಕೊಟ್ಟಿದ್ದ. ಪರಿಣಾಮ ಗುರುಮೂರ್ತಿ ಎಡಗೈ ತೀವ್ರ ಗಾಯಗಳಾಗಿವೆ.

    ಘಟನೆಯ ಬಳಿಕ ಗುರುಮೂರ್ತಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಜನವರಿ 24‌ ರಂದು BMTC ಬಸ್ ಇಲ್ಲ..
    Next Article ಭ್ರಷ್ಟಾಚಾರದ ಗಂಗೋತ್ರಿ ಯಾರು ಗೊತ್ತಾ..
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_vakl ರಲ್ಲಿ ಕಾಂಗ್ರೆಸ್ ಕಾರ್ಯಕರ್ತೆಗೆ ಹೊಡೆದರಾ ರೇವಣ್ಣ !
    • pechat_na_futbolkah_mgSt ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • karkasnyy_dom_vykl ರಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe