Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಪ್ಪು ತಿಂದವರು ನೀರು ಕುಡಿಯಲೇ ಬೇಕು | Prajwal Revanna
    Viral

    ಉಪ್ಪು ತಿಂದವರು ನೀರು ಕುಡಿಯಲೇ ಬೇಕು | Prajwal Revanna

    vartha chakraBy vartha chakraಏಪ್ರಿಲ್ 28, 202432 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.28: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಷ್ಟ ಹೇಳಿಕೊಂಡು ಬಂದಂತಹ ಹೆಣ್ಣುಮಕ್ಕಳ ಕಷ್ಟವನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಾಗಲಿ, ನಾನಾಗಲೀ ಪರಿಹರಿಸಿ ಕಳುಹಿಸಿದ್ದೇವೆ. ಹೆಣ್ಣು ಮಕ್ಕಳಿಗೆ ಹೆಚ್ಚಿನ ಗೌರವ ಕೊಟ್ಟಿದ್ದೇವೆ ಎಂದರು.

    ಹಾಸನ ಚುನಾವಣಾ ಸಂದರ್ಭದಲ್ಲಿ ಕೇಳಿಬಂದಿರುವ ಆರೋಪದ ಬಗ್ಗೆ ಎಸ್‌ಐಟಿ ತನಿಖೆ ವಹಿಸಲಾಗಿದೆ. ಈ ನೆಲದಲ್ಲಿ ಯಾರೇ ತಪ್ಪು ಮಾಡಿದರೂ ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪು ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ನುಡಿದರು.
    ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎಂಬ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಲ್ಲೇ ಇದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದು ಎಂದರು.

    ಜಿ ಟಿ ಡಿ ಸ್ವಾಗತ:
    ಮತ್ತೊಂದೆಡೆ, ಸಂಸದ ಪ್ರಜ್ವಲ್‌ ರೇವಣ್ಣ ಅವರದು ಎನ್ನಲಾದ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ರಾಜ್ಯಸರ್ಕಾರ ವಿಶೇಷ ತನಿಖಾದಳಕ್ಕೆ ವಹಿಸಿರುವುದನ್ನು ಸ್ವಾಗತಿಸುವುದಾಗಿ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಎದುರಾಳಿಗಳನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತವೆ. ಅದರ ಭಾಗ ಇದೂ ಆಗಿರಬಹುದು. ಲೈಂಗಿಕ ದೌರ್ಜನ್ಯದ ಆರೋಪದ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ.

    ರಾಜ್ಯಸರ್ಕಾರ ಎಸ್‌ಐಟಿಗೆ ವಹಿಸಿರುವುದನ್ನು ಸ್ವಾಗತಿಸುತ್ತೇವೆ. ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ. ಪೆನ್‌ಡ್ರೈವ್‌ ವಿಚಾರ ಅಥವಾ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ತಾವು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು, ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.

    prajwal revanna revanna ಚುನಾವಣೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    Next Article ಬಿಜೆಪಿಗೆ ಶ್ವೇತ ಪತ್ರ ಬೇಕಂತೆ | BJP
    vartha chakra
    • Website

    Related Posts

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet 444 ರಲ್ಲಿ ವರಸೆ ಬದಲಿಸಿದ ಈಶ್ವರಪ್ಪ
    • mostbet 648 ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • mostbet 318 ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe