Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೀವನ ರಿಲೇ ಓಟದಂತೆ-ಸಹದ್ಯೋಗಿಗಳಿಗೆ‌ಪ್ರವೀಣ್ ಸೂದ್ ಪತ್ರ
    ಬೆಂಗಳೂರು

    ಜೀವನ ರಿಲೇ ಓಟದಂತೆ-ಸಹದ್ಯೋಗಿಗಳಿಗೆ‌ಪ್ರವೀಣ್ ಸೂದ್ ಪತ್ರ

    vartha chakraBy vartha chakraಮೇ 23, 2023Updated:ಮೇ 23, 202326 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.23- ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸೇವೆಗೆ ತೆರಳಿರುವ ಪ್ರವೀಣ್‌ ಸೂದ್‌ ಅವರು ರಾಜ್ಯ ಸೇವೆಯಿಂದ ಬಿಡುಗಡೆಗೊಂಡ ವೇಳೆ ಸಹೋದ್ಯೋಗಿಗಳಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.
    ರಾಜ್ಯ ಪೊಲಿಸ್‌ ಇಲಾಖೆಯ ಮುಖ್ಯಸ್ಥನಾಗಿ ಭಾರವಾದ ಹೃದಯದಿಂದ ಕೇಂದ್ರ ಸೇವೆಗೆ ಹೊರಟಿದ್ದೇನೆ ಮೂರು ವರ್ಷಗಳ ಕಾಲ ಮಾರಿಷನ್‌ ದೇಶದಲ್ಲಿ ಪೊಲೀಸ್‌ ಸಲಹೆಗಾರನಾಗಿ ಸೇವೆ ಸಲ್ಲಿಸಿದ್ದರ ಹೊರತಾಗಿ ಇಲಾಖೆಯಲ್ಲಿ 37 ವರ್ಷ ಹಾಗೂ ಇಲಾಖಾ ಮುಖ್ಯಸ್ಥನಾಗಿ ಮೂರೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಇಲಾಖೆಯ ವಿವಿಧ ಹುದ್ದೆಗಳಲ್ಲಿ ವೃತ್ತಿಪರತೆ ಮತ್ತು ಸೇವಾ ಮನೋಭಾವದಿಂದ ನನ್ನನ್ನು ಅರ್ಪಿಸಿಕೊಂಡಿದ್ದೇನೆ’ ಎಂದು ತಿಳಿಸಿದ್ದಾರೆ. ರಾಜ್ಯ ಪೊಲೀಸ್‌ ಮುಖ್ಯಸ್ಥನಾಗಿ ನಿರ್ಗಮಿಸುತ್ತಿದ್ದರೂ ಮತ್ತೊಂದು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಸದಾವಕಾಶ ದೊರಕಿದೆ. ಜೀವನ, ರಿಲೇ ಓಟದ ತರಹ ಮತ್ತು ನಾವು ಅಧಿಕಾರವನ್ನು ಮುಂದಿನವರಿಗೆ ಹಸ್ತಾಂತರ ಮಾಡದ ಹೊರತು ಜಯಗಳಿಸಲು ಸಾಧ್ಯವಿಲ್ಲ. ಪೊಲೀಸ್‌ ಮುಖ್ಯಸ್ಥನಾಗಿ ಒಂದು ಪಡೆಯನ್ನು ಮುನ್ನಡೆಸುವುದು ನಿಜಕ್ಕೂ ಸವಾಲಿನ ವಿಷಯವೇ ಸರಿ. ಆದರೆ, ಕಾನ್ಸ್‌ಟೇಬಲ್‌ನಿಂದ ಹಿಡಿದು ಡಿಜಿ ಹುದ್ದೆವರೆಗಿನ ನನ್ನ ಎಲ್ಲಾ ಸಹೋದ್ಯೋಗಿಗಳು ನೀಡಿದ ಸಹಕಾರದಿಂದ ಈ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಸಾಧ್ಯವಾಯಿತು. ಉತ್ತುಂಗದಲ್ಲಿ ಒಮ್ಮೊಮ್ಮೆ ಏಕಾಂಗಿಭಾವ ಕಾಡಿದ್ದೂ ಉಂಟು. ಆದರೆ, ಅವು ಕೆಲವೇ ಕ್ಷಣಗಳಾಗಿದ್ದವು’ ಎಂದಿದ್ದಾರೆ.
    ಪ್ರತಿಯೊಬ್ಬ ಐಪಿಎಸ್‌ ಅಧಿಕಾರಿಗೆ ನಾಯಕತ್ವ ಮೂಲಗುಣ ಎಂಬುದು ನೆನಪಿರಬೇಕು. ಐಪಿಎಸ್‌ ಅಧಿಕಾರಿಗಳು ಇಲಾಖೆಯ ಸುಧಾರಣೆಗಾಗಿ ಯಾವುದೇ ನಿರ್ದಿಷ್ಟಹುದ್ದೆಯನ್ನು ಅಲಂಕರಿಸಲು ಕಾಯಬಾರದು. ಜಿಲ್ಲಾ ವರಿಷ್ಠಾಧಿಕಾರಿ, ಆಯುಕ್ತರು ಅಥವಾ ಮಹಾನಿರ್ದೇಶಕರ ಹುದ್ದೆಯನ್ನೇರಿದರೆ ಮಾತ್ರ ಬದಲಾವಣೆ ಸಾಧ್ಯವೆಂದು ಕಾಯುತ್ತಾ ಕೂರುವುದು ಸಮಂಜಸವಲ್ಲ. ಪೊಲೀಸ್‌ ಪಡೆಯ ಸುಧಾರಣೆಗೆ ಪ್ರತಿಯೊಂದು ಹುದ್ದೆಯು ನಮಗೆ ಉತ್ತಮ ಅವಕಾಶ ಕಲ್ಪಿಸಿಕೊಡುತ್ತದೆ. ಮಾಧ್ಯಮಗಳು ಕೆಲವೊಂದು ಹುದ್ದೆಗಳನ್ನು ಎಲ್ಲರ ಹುಬ್ಬೇರುವಂತೆ ವರ್ಣರಂಜಿತವಾಗಿ ಬಿಂಬಿಸುತ್ತವೆ.
    ಆದರೆ ಇನ್ನುಳಿದ ಹುದ್ದೆಗಳು ಕೇವಲ ಅಧೀನ ಸಿಬ್ಬಂದಿಯ ನಿಶ್ಯಬ್ದ ಹೊಗಳಿಕೆಗೆ ಪಾತ್ರವಾಗುತ್ತವೆ. ನಿಜವಾಗಿ ಅಷ್ಟೇನೂ ಮಹತ್ವವಲ್ಲದ ಹುದ್ದೆಗಳಲ್ಲಿ ವ್ಯವಸ್ಥೆಯ ಬದಲಾವಣೆಗೆ ಉತ್ತಮ ಅವಕಾಶ ಲಭಿಸುತ್ತದೆ. ಮಾಧ್ಯಮದವರು ಇದನ್ನು ಗಮನಿಸಲಾರರು. ಆದರೆ, ವೀಕ್ಷಕನಾಗಿ ಸಾಮಾನ್ಯ ಕಾನ್ಸ್‌ಟೇಬಲ್‌ ಇದನ್ನು ಗುರುತಿಸಲು ಶಕ್ತನಾಗಿರುತ್ತಾನೆ. ಇವರೇ ಅಧಿಕಾರಿಗಳ ಕಾರ್ಯವೈಖರಿಯ ನಿಜವಾದ ತೀರ್ಪುಗಾರರು’ ಎಂದು ತಮ್ಮ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ. ರಾಜ್ಯಕ್ಕೆ ಕೀರ್ತಿ ತರುವೆ:
    ರಾಜ್ಯದ ಜನತೆ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ನನಗೆ ಹಾಗೂ ನನ್ನ ಕುಟುಂಬಕ್ಕೆ ಅಪಾರ ಪ್ರೀತಿ ತೋರಿದ್ದಾರೆ. ಕರ್ನಾಟಕ ರಾಜ್ಯ ನನ್ನ ಜನ್ಮಭೂಮಿ ಅಲ್ಲದಿದ್ದರೂ ಇದು ನನ್ನ ಕರ್ಮಭೂಮಿ. ಮುಂದೆ ಎರಡು ವರ್ಷಗಳ ನಂತರ ಕನ್ನಡ ನಾಡಿಗೆ ಮರಳು ಬರಲು ನಾನು ಕಾತುರದಿಂದ ಕಾಯುತ್ತಿರುತ್ತೇನೆ. ನನಗೆ ಲಭಿಸಿದ್ದಕ್ಕಿಂತ ಹೆಚ್ಚಿನ ದೈವಾನುಗ್ರಹ ನಿಮಗೆಲ್ಲರಿಗೂ ಲಭಿಸಲಿ’ ಎಂದು ಪ್ರವೀಣ್‌ ಸೂದ್‌ ಬರೆದಿರುವ ಸುದೀರ್ಘ ಪತ್ರದಲ್ಲಿ ಸಹೋದ್ಯೋಗಿಗಳಿಗೆ ಶುಭ ಹಾರೈಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous ArticleUT ಖಾದರ್ ವಿಧಾನಸಭೆ ಸ್ಪೀಕರ್
    Next Article ರಾಜ್ಯ ಕಾಂಗ್ರೆಸ್ ನಾಯಕರ ಬಾಯಿಗೆ ಹೈಕಮಾಂಡ್ ಬೀಗ
    vartha chakra
    • Website

    Related Posts

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertQuida ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • 777bet_lhKi ರಲ್ಲಿ ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    • 777bet_sgKi ರಲ್ಲಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.