Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ಕಟ್ಟಡ ಸಕ್ರಮಕ್ಕೆ ಸಿದ್ಧತೆ | Akrama Sakrama
    Viral

    ಅಕ್ರಮ ಕಟ್ಟಡ ಸಕ್ರಮಕ್ಕೆ ಸಿದ್ಧತೆ | Akrama Sakrama

    vartha chakraBy vartha chakraನವೆಂಬರ್ 30, 202333 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭಾಲ್ಕಿ, ನ.30: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾದರಿಯಲ್ಲಿ ರಾಜ್ಯದ ಎಲ್ಲ ನಗರ, ಪಟ್ಟಣಗಳಲ್ಲಿನ ಕಟ್ಟಡಗಳಿಗೆ ಇ-ಖಾತೆ ವಿತರಣೆ ಹಾಗೂ ಕಂದಾಯ ಭೂಮಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಿಸಿರುವ ಕಟ್ಟಡಗಳಿಗೆ ತೆರಿಗೆ ವಿಧಿಸಲು ಸರ್ಕಾರ ಸಿದ್ದತೆ ನಡೆಸಿದೆ.
    ಈ ಸಂಬಂಧ ಅಗತ್ಯವಿರುವ ನಿಯಮಗಳ ರಚನೆ, ಕಾನೂನು ಜಾರಿ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ರಚಿಸಿರುವ ಸಂಪುಟ ಉಪ ಸಮಿತಿ ಅಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಹಿರಿಯ ಐ.ಎ.ಎಸ್. ಅಧಿಕಾರಿ ಮುನೀಶ್ ಮೌದ್ಗಿಲ್ ಅವರೊಂದಿಗೆ ಪರಾಮರ್ಶೆ ನಡೆಸಿದರು.

    ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ /ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದರು.
    ರಾಜ್ಯದ ಎಲ್ಲ ಸ್ಥಿರಾಸ್ತಿಗಳಿಗೆ ಇ-ಖಾತಾ ನೀಡುವ ನಿಟ್ಟಿನಲ್ಲಿ ಸಿದ್ಧವಾಗಿರುವ ತಂತ್ರಾಂಶದ ಬಗ್ಗೆಯೂ ಮಾಹಿತಿ ಪಡೆದ ಸಚಿವರು,ಪ್ರಸ್ತುತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 54.91 ಲಕ್ಷಕ್ಕೂ ಹೆಚ್ಚು ಆಸ್ತಿಗಳಿದ್ದು, ಈ ಪೈಕಿ ಸುಮಾರು 20.55 ಲಕ್ಷ ಅಧಿಕೃತ ಆಸ್ತಿಗಳಾಗಿದ್ದು ತೆರಿಗೆ ಪಾವತಿಸುತ್ತಿದ್ದರೆ, ಅನಧಿಕೃತವಾದ 34.35ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಯಾವುದೇ ತೆರಿಗೆ ವಿಧಿಸಲಾಗುತ್ತಿಲ್ಲ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಂದಾಯ ಭೂಮಿಯಲ್ಲಿ ನಕ್ಷೆ ಅನುಮೋದನೆ ಇಲ್ಲದೆ ನಿರ್ಮಿಸಿರುವ ಬಡಾವಣೆ ಮತ್ತು ಕಟ್ಟಡಗಳಿಗೆ ಬಿ ಖಾತೆ ನೀಡಿ, ವಾರ್ಷಿಕ ಕಂದಾಯ ಕಟ್ಟಿಸಿಕೊಳ್ಳುತ್ತಿರುವ ರೀತಿಯಲ್ಲೇ ರಾಜ್ಯದ ಇತರ ನಗರ ಪಟ್ಟಣಗಳ ಸ್ವತ್ತುಗಳಿಗೆ ತೆರಿಗೆ ಮತ್ತು ದಂಡ ವಿಧಿಸುವ ಕುರಿತಂತೆ ಇರುವ ಕಾನೂನಾತ್ಮಕ ವಿಚಾರಗಳ ಬಗ್ಗೆಯೂ ಮಾಹಿತಿ ಪಡೆದರು.

    ನಕ್ಷೆ ಮಂಜೂರಾತಿ ಇಲ್ಲದ ಕಟ್ಟಡಗಳು ಮತ್ತು ಅನುಮೋದನೆ ಇಲ್ಲದ ಬಡಾವಣೆಗಳಲ್ಲಿನ ವಸತಿಗಳಿಗೆ ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ಕುಡಿಯುವ ನೀರು, ರಸ್ತೆ, ವಿದ್ಯುತ್, ಬೀದಿ ದೀಪಗಳ ಸೌಲಭ್ಯ ಕಲ್ಪಿಸಲಾಗಿದ್ದರೂ, ಅವರಿಂದ ಯಾವುದೇ ತೆರಿಗೆ ಬಾರದ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದ್ದು, ಶ್ರೀಸಾಮಾನ್ಯರಿಗೂ ಹೊರೆ ಆಗದ ರೀತಿಯಲ್ಲಿ ಪರಿಹಾರೋಪಾಯಗಳ ಕುರಿತಂತೆ ಸಮಾಲೋಚಿಸಿದರು.
    ಯಾವುದೇ ಸ್ವತ್ತಿನ ಮಾರಾಟ ಮಾಡುವಾಗ ಕಾವೇರಿ ತಂತ್ರಾಂಶದಲ್ಲಿ ಖಾತೆ ಇಲ್ಲದೆ ವಹಿವಾಟು ಸಾಧ್ಯವಿಲ್ಲ. ಹೀಗಾಗಿ ಕಂದಾಯ ಭೂಮಿಯಲ್ಲಿ ಮನೆ ಕಟ್ಟಿರುವವರು, ನಿವೇಶನ ಹೊಂದಿರುವವರು ಅಕ್ರಮವಾಗಿ ಖಾತೆ ಪಡೆಯುತ್ತಿದ್ದು, ಇದು ಭ್ರಷ್ಟಾಚಾರಕ್ಕೆ ಆಸ್ಪದ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸ್ವತ್ತುಗಳಿಗೂ ಬಿ ಖಾತೆಯ ರೀತಿಯಲ್ಲಿ ಹೇಗೆ ಖಾತೆ ನೀಡುವ ಸಾಧ್ಯತೆಗಳ ಕುರಿತಂತೆ ಚರ್ಚಿಸಿದರು.

    Verbattle
    Verbattle
    Verbattle
    Akrama Sakrama Government Karnataka m News Politics ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Article250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking
    Next Article ಸೋನಿಯಾ ಗಾಂಧಿ ನಿಲುವಿಗೆ ವಿರುದ್ಧವಾ ಕಾಂಗ್ರೆಸ್ ಸರ್ಕಾರ? | Sonia Gandhi
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daanky ರಲ್ಲಿ BBC ಕಚೇರಿ ಮೇಲೆ IT ದಾಳಿ!
    • Xpvncb ರಲ್ಲಿ ಕಮೀಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ | DK Shivakumar
    • Tracymix ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.