Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಗತ್ತಿನ ಸಮಸ್ಯೆ ಪರಿಹರಿಸುವ ದೇಶವಾದ ಭಾರತ
    ರಾಜ್ಯ

    ಜಗತ್ತಿನ ಸಮಸ್ಯೆ ಪರಿಹರಿಸುವ ದೇಶವಾದ ಭಾರತ

    vartha chakraBy vartha chakraಜನವರಿ 31, 2023Updated:ಮಾರ್ಚ್ 20, 202326 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ
    ‘ಪ್ರತಿಯೊಬ್ಬ ಭಾರತೀಯನು ಆತ್ಮವಿಶ್ವಾಸದ ಉತ್ತುಂಗದಲ್ಲಿರುವುದು ಇಂದಿನ ದೊಡ್ಡ ಬದಲಾವಣೆಯಾಗಿದೆ. ಭಾರತ ಇಂದು ಜಗತ್ತಿನ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿಯಾಗಿ ಬೆಳೆದಿದೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ‌ ಮಾತನಾಡಿದ ಅವರು, ‘ಕೇಂದ್ರದಲ್ಲಿ NDA ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಶೀಘ್ರದಲ್ಲಿಯೇ ಒಂಬತ್ತು ವರ್ಷಗಳು ಪೂರೈಸಲಿವೆ. ಈ ಅವಧಿಯಲ್ಲಿ ಎಲ್ಲಾ ಜನರ ಆಶೋತ್ತರಗಳನ್ನು ಈಡೇರಿಸಲು ಸರ್ಕಾರ ಶ್ರಮಿಸಿದೆ’ ಎಂದರು.

    ‘ಪ್ರಜಾಪ್ರಭುತ್ವದಲ್ಲಿ ಭ್ರಷ್ಟಾಚಾರ ಅತೀ ದೊಡ್ಡ ಶತ್ರು ಎಂಬುದು ನನ್ನ ಸರ್ಕಾರದ ಸ್ಪಷ್ಟ ನಿಲುವಾಗಿದೆ. ಈ ಹಿಂದಿನ ವರ್ಷಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದೆ’ ಎಂದು ಹೇಳಿದರು. ‘ಭಾರತವು ಸ್ಥಿರ, ನಿರ್ಭೀತ, ನಿರ್ಣಾಯಕ ಸರ್ಕಾರವನ್ನು ಹೊಂದಿದ್ದು, ಅದು ದೊಡ್ಡ ಕನಸುಗಳನ್ನು ಈಡೇರಿಸುವತ್ತ ಕಾರ್ಯನಿರ್ವಹಿಸುತ್ತಿದೆ. ಪ್ರಾಮಾಣಿಕರನ್ನು ಗೌರವಿಸುವ ಮತ್ತು ಬಡವರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಅವರನ್ನು ಶಾಶ್ವತವಾಗಿ ಸಬಲೀಕರಣಗೊಳಿಸಲು ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.

    ‘ಅಮೃತ ಕಾಲದ 25 ವರ್ಷಗಳ ಅವಧಿಯು ಸ್ವಾತಂತ್ರ್ಯದ ಸುವರ್ಣ ಯುಗವಾಗಿದ್ದು, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಸಮಯವಾಗಿದೆ. ನಾವು ಬಡತನವಿಲ್ಲದ ಭಾರತವನ್ನು, ಮಧ್ಯಮ ವರ್ಗದವರೂ ಸಮೃದ್ಧವಾಗಿರುವ ದೇಶವನ್ನು, ಸಮಾಜಕ್ಕೆ ಮತ್ತು ದೇಶಕ್ಕೆ ದಾರಿ ತೋರಿಸಲು ಯುವಕರು ಮತ್ತು ಮಹಿಳೆಯರು ಮುಂಚೂಣಿಯಲ್ಲಿ ನಿಲ್ಲುವ ಭಾರತವನ್ನು ನಿರ್ಮಿಸಬೇಕಾಗಿದೆ. ಅಲ್ಲದೆ, ದೇಶದ ಯುವಕರು ಯಾವಾಗಲೂ ಸಮಯಕ್ಕಿಂತ ಎರಡು ಹೆಜ್ಜೆ ಮುಂದಿರುವಂತಹ ಭಾರತವನ್ನು ನಾವು ನಿರ್ಮಿಸಬೇಕಾಗಿದೆ’ ಎಂದು ರಾಷ್ಟ್ರಪತಿಗಳು ಹೇಳಿದರು.

    ‘ಜಗತ್ತಿನಲ್ಲಿ ಎಲ್ಲೆಲ್ಲಿ ರಾಜಕೀಯ ಅಸ್ಥಿರತೆ ಇದೆಯೋ ಆ ದೇಶಗಳು ಇಂದು ಭಾರಿ ಬಿಕ್ಕಟ್ಟಿನಿಂದ ಸುತ್ತುವರಿದಿವೆ. ಆದರೆ, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನನ್ನ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಂದ, ಇತರ ದೇಶಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಾನದಲ್ಲಿದೆ. ಸಂಪೂರ್ಣ ಪಾರದರ್ಶಕತೆಯೊಂದಿಗೆ ಕೋಟಿಗಟ್ಟಲೆ ಜನರಿಗೆ 27 ಲಕ್ಷ ಕೋಟಿ ರೂಪಾಯಿಗಳನ್ನು ವಿವಿಧ ಯೋಜನೆಗಳ ಮೂಲಕ ಒದಗಿಸಿದೆ. ಇಂತಹ ಯೋಜನೆಗಳು ಮತ್ತು ವ್ಯವಸ್ಥೆಗಳೊಂದಿಗೆ ಭಾರತವು ಕೋವಿಡ್ನಂತಹ ಬಿಕ್ಕಟ್ಟಿನ ಸಮಯದಲ್ಲಿ ಬಡತನದ ರೇಖೆಗಿಂತ ಕೆಳಗಿಳಿಯದಂತೆ ಕೋಟಿಗಟ್ಟಲೆ ಜನರನ್ನು ಉಳಿಸಲು ಸಾಧ್ಯವಾಯಿತು ಎಂದು ವಿಶ್ವ ಬ್ಯಾಂಕ್ ವರದಿ ಹೇಳುತ್ತದೆ’ ಎಂದು ದ್ರೌಪದಿ ಮುರ್ಮು ವಿವರಿಸಿದರು.

    Verbattle
    Verbattle
    Verbattle
    Droupadi Murmu Government NDA News President ರಾಜಕೀಯ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Article7 ಕೋಟಿ ಮೌಲ್ಯದ Cocaine ನುಂಗಿ ಬಂದ ಮಹಿಳೆ!
    Next Article ಉದಯ್ ಗರುಡಾಚಾರ್ ನಡೆಗೆ BJP ಕೆಂಗಣ್ಣು
    vartha chakra
    • Website

    Related Posts

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • king_ckEi ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • LinwoodGah ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.