Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಗತ್ತಿನ ಸಮಸ್ಯೆ ಪರಿಹರಿಸುವ ದೇಶವಾದ ಭಾರತ
    ರಾಜ್ಯ

    ಜಗತ್ತಿನ ಸಮಸ್ಯೆ ಪರಿಹರಿಸುವ ದೇಶವಾದ ಭಾರತ

    vartha chakraBy vartha chakraಜನವರಿ 31, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ
    ‘ಪ್ರತಿಯೊಬ್ಬ ಭಾರತೀಯನು ಆತ್ಮವಿಶ್ವಾಸದ ಉತ್ತುಂಗದಲ್ಲಿರುವುದು ಇಂದಿನ ದೊಡ್ಡ ಬದಲಾವಣೆಯಾಗಿದೆ. ಭಾರತ ಇಂದು ಜಗತ್ತಿನ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿಯಾಗಿ ಬೆಳೆದಿದೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ‌ ಮಾತನಾಡಿದ ಅವರು, ‘ಕೇಂದ್ರದಲ್ಲಿ NDA ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಶೀಘ್ರದಲ್ಲಿಯೇ ಒಂಬತ್ತು ವರ್ಷಗಳು ಪೂರೈಸಲಿವೆ. ಈ ಅವಧಿಯಲ್ಲಿ ಎಲ್ಲಾ ಜನರ ಆಶೋತ್ತರಗಳನ್ನು ಈಡೇರಿಸಲು ಸರ್ಕಾರ ಶ್ರಮಿಸಿದೆ’ ಎಂದರು.

    ‘ಪ್ರಜಾಪ್ರಭುತ್ವದಲ್ಲಿ ಭ್ರಷ್ಟಾಚಾರ ಅತೀ ದೊಡ್ಡ ಶತ್ರು ಎಂಬುದು ನನ್ನ ಸರ್ಕಾರದ ಸ್ಪಷ್ಟ ನಿಲುವಾಗಿದೆ. ಈ ಹಿಂದಿನ ವರ್ಷಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದೆ’ ಎಂದು ಹೇಳಿದರು. ‘ಭಾರತವು ಸ್ಥಿರ, ನಿರ್ಭೀತ, ನಿರ್ಣಾಯಕ ಸರ್ಕಾರವನ್ನು ಹೊಂದಿದ್ದು, ಅದು ದೊಡ್ಡ ಕನಸುಗಳನ್ನು ಈಡೇರಿಸುವತ್ತ ಕಾರ್ಯನಿರ್ವಹಿಸುತ್ತಿದೆ. ಪ್ರಾಮಾಣಿಕರನ್ನು ಗೌರವಿಸುವ ಮತ್ತು ಬಡವರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಅವರನ್ನು ಶಾಶ್ವತವಾಗಿ ಸಬಲೀಕರಣಗೊಳಿಸಲು ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.

    ‘ಅಮೃತ ಕಾಲದ 25 ವರ್ಷಗಳ ಅವಧಿಯು ಸ್ವಾತಂತ್ರ್ಯದ ಸುವರ್ಣ ಯುಗವಾಗಿದ್ದು, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಸಮಯವಾಗಿದೆ. ನಾವು ಬಡತನವಿಲ್ಲದ ಭಾರತವನ್ನು, ಮಧ್ಯಮ ವರ್ಗದವರೂ ಸಮೃದ್ಧವಾಗಿರುವ ದೇಶವನ್ನು, ಸಮಾಜಕ್ಕೆ ಮತ್ತು ದೇಶಕ್ಕೆ ದಾರಿ ತೋರಿಸಲು ಯುವಕರು ಮತ್ತು ಮಹಿಳೆಯರು ಮುಂಚೂಣಿಯಲ್ಲಿ ನಿಲ್ಲುವ ಭಾರತವನ್ನು ನಿರ್ಮಿಸಬೇಕಾಗಿದೆ. ಅಲ್ಲದೆ, ದೇಶದ ಯುವಕರು ಯಾವಾಗಲೂ ಸಮಯಕ್ಕಿಂತ ಎರಡು ಹೆಜ್ಜೆ ಮುಂದಿರುವಂತಹ ಭಾರತವನ್ನು ನಾವು ನಿರ್ಮಿಸಬೇಕಾಗಿದೆ’ ಎಂದು ರಾಷ್ಟ್ರಪತಿಗಳು ಹೇಳಿದರು.

    ‘ಜಗತ್ತಿನಲ್ಲಿ ಎಲ್ಲೆಲ್ಲಿ ರಾಜಕೀಯ ಅಸ್ಥಿರತೆ ಇದೆಯೋ ಆ ದೇಶಗಳು ಇಂದು ಭಾರಿ ಬಿಕ್ಕಟ್ಟಿನಿಂದ ಸುತ್ತುವರಿದಿವೆ. ಆದರೆ, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನನ್ನ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಂದ, ಇತರ ದೇಶಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಾನದಲ್ಲಿದೆ. ಸಂಪೂರ್ಣ ಪಾರದರ್ಶಕತೆಯೊಂದಿಗೆ ಕೋಟಿಗಟ್ಟಲೆ ಜನರಿಗೆ 27 ಲಕ್ಷ ಕೋಟಿ ರೂಪಾಯಿಗಳನ್ನು ವಿವಿಧ ಯೋಜನೆಗಳ ಮೂಲಕ ಒದಗಿಸಿದೆ. ಇಂತಹ ಯೋಜನೆಗಳು ಮತ್ತು ವ್ಯವಸ್ಥೆಗಳೊಂದಿಗೆ ಭಾರತವು ಕೋವಿಡ್ನಂತಹ ಬಿಕ್ಕಟ್ಟಿನ ಸಮಯದಲ್ಲಿ ಬಡತನದ ರೇಖೆಗಿಂತ ಕೆಳಗಿಳಿಯದಂತೆ ಕೋಟಿಗಟ್ಟಲೆ ಜನರನ್ನು ಉಳಿಸಲು ಸಾಧ್ಯವಾಯಿತು ಎಂದು ವಿಶ್ವ ಬ್ಯಾಂಕ್ ವರದಿ ಹೇಳುತ್ತದೆ’ ಎಂದು ದ್ರೌಪದಿ ಮುರ್ಮು ವಿವರಿಸಿದರು.

    Droupadi Murmu Government NDA News President ರಾಜಕೀಯ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Article7 ಕೋಟಿ ಮೌಲ್ಯದ Cocaine ನುಂಗಿ ಬಂದ ಮಹಿಳೆ!
    Next Article ಉದಯ್ ಗರುಡಾಚಾರ್ ನಡೆಗೆ BJP ಕೆಂಗಣ್ಣು
    vartha chakra
    • Website

    Related Posts

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    ಮೇ 22, 2025

    ಪರಮೇಶ್ವರ್ ವಿರುದ್ಧ ED ಕೆಂಗಣ್ಣು

    ಮೇ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Philliphig ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Philliphig ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Philliphig ರಲ್ಲಿ Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe