Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ Congressನಲ್ಲಿ ಪ್ರಿಯಾಂಕಾ ಸಂಚಲನ
    ವಿಶೇಷ ಸುದ್ದಿ

    ರಾಜ್ಯ Congressನಲ್ಲಿ ಪ್ರಿಯಾಂಕಾ ಸಂಚಲನ

    vartha chakraBy vartha chakraಜನವರಿ 17, 2023Updated:ಜನವರಿ 17, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.16-
    ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಶೇಕಡ 40ರಷ್ಟು ಲಂಚದ ಮೂಲಕ ₹1.5 ಲಕ್ಷ ಕೋಟಿ ಲೂಟಿ ಮಾಡಿದೆ ಎಂದು AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ವಾಗ್ದಾಳಿ ಆರೋಪಿಸಿದ್ದಾರೆ.
    ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ನಾ ನಾಯಕಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,
    ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಇಲ್ಲಿನ‌ ಸರ್ಕಾರ ಯಾವ ಕೆಲಸ ಮಾಡಿದರೂ ಶೇ 40ರಷ್ಟು ಲಂಚ ಪಡೆಯುತ್ತಿದೆ. ಜನರ ತೆರಿಗೆಯ ಹಣ ಲಂಚದ ರೂಪದಲ್ಲಿ ಸರ್ಕಾರದಲ್ಲಿರುವ ಕೆಲವರ ಜೇಬು ಸೇರುತ್ತಿದೆ’ ಎಂದು ದೂರಿದರು.
    ಸರ್ಕಾರದ ಕಾಮಗಾರಿಗಳಲ್ಲಿ ಕಮೀಷನ್ ಸಂಗ್ರಹ ಮಾಡುವುದಷ್ಟಕ್ಕೆ ಈ ಭ್ರಷ್ಟಾಚಾರ ನಿಂತಿಲ್ಲ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲೂ ದೊಡ್ಡ ಪ್ರಮಾಣದ ಅಕ್ರಮವೆಸಗಲಾಗುತ್ತಿದೆ ಎಂದು ಹೇಳಿದರು
    ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ನಡೆದಿರುವ ಹಗರಣ ನಾಚಿಕೆಗೇಡಿನ ಸಂಗತಿ. ಬಿಜೆಪಿ ಸರ್ಕಾರವು ಪೊಲೀಸ್ ಪಡೆಗಳನ್ನೂ ಮಾರಾಟಕ್ಕಿಟ್ಟಿದೆ.ವಾಹನ ಚಾಲನಾ ಪರವಾನಗಿ, ನೋಂದಣಿ ಎಲ್ಲದಕ್ಕೂ ಲಂಚ ಕೊಡಬೇಕು. ಅಧಿಕಾರಿಗಳ ನೇಮಕ, ವರ್ಗಾವಣೆ, ಸ್ಥಳ ನಿಯುಕ್ತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆಪಾದಿಸಿದರು.
    ಇಂತಹ ಸರ್ಕಾರದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರಕುವ ಭರವಸೆ ಇದೆಯೆ? ಇವರಿಂದ ಭವಿಷ್ಯ ಉತ್ತಮಗೊಳ್ಳುವ ಭರವಸೆ ಇದೆಯೆ’ ಎಂದು ಸಭೆಯಲ್ಲಿದ್ದ ಜನರನ್ನು ಪ್ರಶ್ನಿಸಿದ ಅವರು ಭ್ರಷ್ಟಾಚಾರದ ವಿಷಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಅನೇಕ ಕಸರತ್ತು ಮಾಡುತ್ತಿದ್ದಾರೆ ಎಂದು ದೂರಿದರು.
    ಮಕ್ಕಳ ಕಲಿಕೆಯ ಪಠ್ಯಕ್ರಮಕ್ಕೂ ಕೈ ಹಾಕಿದ್ದಾರೆ.‌ ಬಸವಣ್ಣ ಸೇರಿದಂತೆ ಅನೇಕ ಮಹನೀಯರಿಗೆ ಸಂಬಂಧಿಸಿದ ಪಠ್ಯಗಳನ್ನು ತಿರುಚಿದ್ದಾರೆ. ಇದೆಲ್ಲವೂ ಕೆಲವರ ಆಣತಿಯಂತೆ ನಡೆದಿದೆ ಎಂದು ದೂರಿದರು.
    ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬದುಕು ದುಸ್ತರವಾಗಿದೆ.ಅಡುಗೆ ಅನಿಲ ದರ ದುಪ್ಪಟ್ಟಾಗಿದೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು ಜನ ಸಾಮಾನ್ಯರ ಬದುಕು ದುಸ್ತರವಾಗಿದೆ ಎಂದರು.
    ಮಹಿಳೆಗೆ ಆರ್ಥಿಕ ನೆರವು:
    ಇದೇ ವೇಳೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ ₹2,000 ನೆರವು ನೀಡುವುದಾಗಿ ಘೋಷಣೆ ಮಾಡಿದ್ದು,ಈ ಘೋಷಣಾ ಪತ್ರವನ್ನು ರಾಜ್ಯ ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಗಾಂಧಿ ಅವರಿಗೆ ಹಸ್ತಾಂತರಿಸಿದರು.
    ವೇದಿಕೆಯಲ್ಲಿ ಅನೇಕ ನಾಯಕರು, ಗೃಹಲಕ್ಷ್ಮಿ ಯೋಜನೆಯ ಘೋಷಣೆಯ ಭಿತ್ತಿಪತ್ರಗಳನ್ನು ಹಿಡಿದು ಭರವಸೆ ನೀಡಿದರು
    ಅದ್ದೂರಿ ಸ್ವಾಗತ:
    ನಾ ನಾಯಕಿ ಸಮಾವೇಶಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಅದ್ಧೂರಿಯಾಗಿ ಬರಮಾಡಿಕೊಂಡರು.
    ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ‌.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಸೇರಿ ಅನೇಕ ನಾಯಕರು ವಿಮಾನ ನಿಲ್ದಾಣದಲ್ಲಿ ಪ್ರಿಯಾಂಕಗಾಂಧಿ ಅವರನ್ನು ಸ್ವಾಗತಿಸಿದರು
    ವಿ‌ಮಾನನಿಲ್ದಾಣದ ಹೊರಗೆ ಸಾದಹಳ್ಳಿ ಗೇಟ್ ಬಳಿ ಬೃಹತ್ ಸೇಬಿನ‌ ಹಾರ ಹಾಕಿ ಸ್ವಾಗತಿಸಲಾಯಿತು. ಅಲ್ಲಿಂದ ಕೆಲ ದೂರ ಮೆರಣಿಗೆಯಲ್ಲಿ ಪ್ರಿಯಾಂಕ ಆಗಮಿಸಿದರು. ಹಾದಿಯುದ್ಧಕ್ಕೂ ಕಾದು ನಿಂತಿದ್ದ ಅಭಿಮಾನಿಗಳಿಗೆ ಪ್ರಿಯಾಂಕ ಕೈ ಬಿಸಿ ಶುಭಾಷಯ ವಿನಿಮಯ ಮಾಡಿಕೊಂಡರು.
    ಸಮಾವೇಶಕ್ಕೆ ಆಗಮಿಸಿದ ಆಗಮಿಸಿದ ಪ್ರಿಯಾಂಕ ಗಾಂಧಿ ಭದ್ರತೆಯನ್ನು ಲೆಕ್ಕಿಸದೆ ಸಮಾವೇಶಗೊಂಡಿದ್ದ ಮಹಿಳಾ ಕಾರ್ಯಕರ್ತರ ಕೈ ಕುಲುಕುವ ಮೂಲಕ ಸಂಚಲನ ಮೂಡಿಸಿದರು.
    ಸಭಾಂಗಣದ ಹಾದಿಯುದ್ಧಕ್ಕೂ ಕೈ ನೀಡಿದವರಿಗೆ ಹಸ್ತಲಾಘವ ನೀಡುತ್ತಾ, ಅಲ್ಲಲ್ಲಿ ಕೆಲವರಿಗೆ ಸೆಲ್ಫಿಗೆ ಪೋಸು ನೀಡುತ್ತಾ ಪ್ರಿಯಾಂಕ ವೇದಿಕೆಯತ್ತ ಬಂದರು.
    ವಿಧಾನ ಪರಿಷತ್ ನ ಮಾಜಿ ಸದಸ್ಯೆ ಜಲಜಾನಾಯಕ್ ಪ್ರಿಯಾಂಕ ಅವರಿಗೆ ಲಂಬಾಣಿ ಸಾಂಪ್ರದಾಯಿಕ ದುಪ್ಪಟ್ಟ ಹೊದಿಸುವ ಮೂಲಕ ಬರಮಾಡಿಕೊಂಡರೆ, ಮಾಜಿ‌ಸಚಿವೆ ಮೊಟಮ್ಮ ಎರಡು ಎಳೆಯ ಚಿನ್ನದ ಸರವನ್ನು ಖುದ್ದು ಪ್ರಿಯಾಂಕರ ಕೊರಳಿಗೆ ಹಾಕಿ ಗಮನ ಸೆಳೆದರು.

    Verbattle
    Verbattle
    Verbattle
    Congress DK. Shivakumar m shiva ಕಾಂಗ್ರೆಸ್ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನೇಪಾಳದಲ್ಲಿ ಭೀಕರ ವಿಮಾನ ಅಪಘಾತ. 72 ಜನರ ದುರ್ಮರಣ!
    Next Article ಅಂಥವನಿಂದ ದುಡ್ಡು ತಗೋಳ್ಳೊದಕ್ಕಿಂತ ಸಾಯೋದು‌ ವಾಸಿ!
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zhk svetskii les sochi 62 ರಲ್ಲಿ ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    • Rubintor ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • zhk svetskii les sochi 10 ರಲ್ಲಿ ಅಲ್ಲು ಅರ್ಜುನ್ ಬಂಧನ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.