Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ? | Pakistan Zindabad
    Trending

    ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ? | Pakistan Zindabad

    vartha chakraBy vartha chakraಫೆಬ್ರವರಿ 27, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದು ಗೆದ್ದ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಪರ (Pakistan Zindabad) ಘೋಷಣೆ ಹಾಕಿದ ಆರೋಪ ಕೇಳಿ ಬಂದಿದೆ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆ ಕೂಗಿದ್ದಾರೆ. ನಾಸಿರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್‌ ಜಿಂದಾಬಾದ್‌, ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ. ಎಂಬ ಆರೋಪ ಕೇಳಿ ಬಂದಿದ್ದು ಇದೀಗ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ.

    ಮತಗಳ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಚುನಾವಣಾ ಅಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ಗೆದ್ದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ವೇಳೆ ವಿಜಯೀ ಅಭ್ಯರ್ಥಿಗಳ ಬೆಂಬಲಿಗರು ವಿಧಾನಸೌಧದಲ್ಲಿರುವ ಮತಗಟ್ಟೆ ಸಮೀಪ ಧಾವಿಸಿ ಬಂದಿದ್ದರು.
    ತಮ್ಮ ಅಭ್ಯರ್ಥಿ ಗೆಲುವಿನ ಪ್ರಮಾಣ ಪತ್ರ ಪಡೆದು ಹೊರ ಬರುತ್ತಿದ್ದಂತೆ ಅವರ ಬೆಂಬಲಿಗರು ಜಯ ಘೋಷ ಮೊಳಗಿಸಿದರು ಅದರಲ್ಲೂ ಬಿಜೆಪಿ ಕಾರ್ಯಕರ್ತರು ಜೈ ಶ್ರೀ ರಾಮ್ ಮತ್ತು ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಮೊಳಗಿಸಿದರು ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಭಾರತ ಮಾತಾ ಕಿ ಜೈ ಮತ್ತು ಜೈ ಭೀಮ್ ಎಂಬ ಘೋಷಣೆ ಹಾಕತೊಡಗಿದರು ಇದರಿಂದಾಗಿ ವಿಧಾನಸೌಧ ಆವರಣದಲ್ಲಿ ಕೆಲಕಾಲ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು.

    ಇದರ ನಡುವೆ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ನಾಸಿಕ್ ಹುಸೇನ್ ಪರವಾದ ಘೋಷಣೆಗಳನ್ನು ಮೊಳಗಿಸುತ್ತಿದ್ದರು ಇವರ ಮಧ್ಯದಿಂದ ಅನಾಮಿಕನೊಬ್ಬ ಜೈ ಪಾಕಿಸ್ತಾನ್ ಎಂಬ ಘೋಷಣೆ ಮೊಳಗಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ ಇಂತಹ ಘೋಷಣೆ ಮೊಳಗಿಸುತ್ತಿದ್ದವನನ್ನು ಆತನ ಪಕ್ಕದಲ್ಲಿಯೇ ಇದ್ದವರು ಆತನ ಬಾಯಿ ಮುಚ್ಚಿಸಿ ಹೊರಗೆ ಕರೆದುಕೊಂಡು ಹೋದರು ಎಂಬ ಆರೋಪ ಕೇಳಿಬಂದಿದೆ.

    ಸಿಡಿಮಿಡಿ:
    ತಮ್ಮ ಬೆಂಬಲಿಗ ಪಾಕಿಸ್ತಾನ ಪರ ಘೋಷಣೆ ಮೊಳಗಿಸಿದ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆಗೆ ಮುಂದಾದಾಗ ಸಿಡಿಮಿಡಿ ಗೊಂಡ ಅವರು ಮಾಧ್ಯಮ ಪ್ರತಿನಿಧಿಗಳ ವಿರುದ್ಧವೇ ಹರಿಹಾಯ್ದಿದ್ದಾರೆ.
    ಮತ್ತೊಂದೆಡೆ ಪ್ರತಿಕ್ರಿಯಿಸಿದ ವಿಜಯೀ ಅಭ್ಯರ್ಥಿ ಜಿ ಸಿ ಚಂದ್ರಶೇಖರ್ ಇದೊಂದು ಅಕ್ಷಮ್ಯ ಇಂತಹ ಘಟನೆ ನಡೆದಿದ್ದೆ ಆದರೆ ಅದನ್ನು ಯಾರೂ ಕ್ಷಮಿಸಲು ಸಾಧ್ಯವಿಲ್ಲ ಇಂತಹ ಘೋಷಣೆ ಮೊಳಗಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

    ಬಿಜೆಪಿಯ ಮುಖಂಡ ರವಿಕುಮಾರ್ ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ್ದಾರೆ. ದೇಶದ್ರೋಹಿಗಳು ವಿಧಾನಸೌಧೊಳಗೆ ಪ್ರವೇಶಿಸಿದ್ದಾರೆ ಇಂತಹ ಘಟನೆಗೆ ಕಾರಣವಾದ ರಾಜ್ಯ ಸಭೆ ಸದಸ್ಯ ನಾಸೀರ್ ಹುಸೇನ್ ವಿರುದ್ಧವು ಕ್ರಮ ಕೈಗೊಳ್ಳಬೇಕು ಘೋಷಣೆ ಮೊಳಗಿಸಿದ ವ್ಯಕ್ತಿಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
    ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತಿದ್ದು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ದೂರು ನೀಡಲು ಸಿದ್ಧತೆ ನಡೆಸಿದ ಎಂದು ಹೇಳಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿ ತಮಗೆ ಈ ಘಟನೆಯ ಬಗ್ಗೆ ಮಾಹಿತಿ ಬಂದಿದೆ ಘೋಷಣೆ ಮೊಳಗಿಸಿರುವುದು ನಿಜವಾ ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಅದರ ನಂತರವಷ್ಟೇ ನಿಖರವಾಗಿ ಹೇಳಬಹುದು ಎಂದು ತಿಳಿಸಿದರು.

    ಬಿಜೆಪಿ ಧರಣಿ:
    ಇದರ ಬೆನ್ನಲ್ಲೇ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಧಾನಸೌಧದ ದ್ವಾರದಲ್ಲಿ ಕೆಲಕಾಲ ಧರಣಿ ನಡೆಸಿ ಘೋಷಣೆ ಮೊಳಗಿಸಿದ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆ ಗ್ರಹಿಸಿದರು.
    ಬಳಿಕ ಪಕ್ಷದ ಮುಖಂಡರೊಂದಿಗೆ ತೆರಳಿ ವಿಧಾನಸೌಧ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದರು.

    Verbattle
    Verbattle
    Verbattle
    NDA ಕಾಂಗ್ರೆಸ್ ಕಾನೂನು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleವೈಜ್ಞಾನಿಕ ಮನೋಭಾವ ಪ್ರತಿಜ್ಞಾ ವಿಧಿ | National Science Day
    Next Article ಹೆಬ್ಬಾರ್ ಯಾಕೆ Vote ಮಾಡಲಿಲ್ಲ ಗೊತ್ತಾ | Shivaram Hebbar
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Edknlr ರಲ್ಲಿ ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    • LinwoodGah ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.