Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Psi ನೇಮಕ ಅಕ್ರಮ- ತೀವ್ರ ಶೋಧ
    ಸುದ್ದಿ

    Psi ನೇಮಕ ಅಕ್ರಮ- ತೀವ್ರ ಶೋಧ

    vartha chakraBy vartha chakraಮೇ 25, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.25- ಪಿಎಸ್​ಐ ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ‌ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿ ಡಿವೈಎಸ್​ಪಿ ಶಾಂತಕುಮಾರ್ ರನ್ನು ಮತ್ತೆ ಮೂರು ದಿನಗಳ ಕಾಲ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.
    ಸಿಐಡಿ ಕಸ್ಟಡಿಗೆ ನೀಡಿದ್ದ ಅವಧಿ ಮುಗಿದಿದ್ದ ಹಿನ್ನೆಲೆಯಲ್ಲಿ ನಿನ್ನೆ ಶಾಂತಕುಮಾರ್ ರನ್ನು ನಗರದ 1ನೇ ಎಸಿಎಂಎಂ ಕೋರ್ಟ್​ಗೆ ಸಿಐಡಿ ಹಾಜರುಪಡಿಸಿತ್ತು. ಸಿಐಡಿ ಪರ ವಕೀಲರ ಮನವಿ ಮೇರೆಗೆ ನ್ಯಾಯಾಲಯವು ಮತ್ತೆ ಮೂರು ದಿನ ಕಸ್ಟಡಿಗೆ ಶಾಂತಕುಮಾರ್​ರನ್ನು ಪಡೆದ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.
    ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 6 ಮಂದಿಯನ್ನು ಸಿಐಡಿ ಬಂಧಿಸಿದೆ. ಇವರೆಲ್ಲರೂ ನೇಮಕಾತಿ ವಿಭಾಗದ ಡಿವೈಎಸ್​ಪಿ ಶಾಂತಕುಮಾರ್​ ಸೂಚನೆಯಂತೆ ಕೆಲಸ ಮಾಡುತ್ತಿದ್ದರು. ಬಂಧಿತ ಆರು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಪೈಕಿ ಎಎಚ್​ಸಿ ಶ್ರೀಧರ್ ಬಳಿ ಸುಮಾರು 2 ಕೋಟಿ ನಗದು ಪತ್ತೆಯಾಗಿತ್ತು. ಹಿರಿಯ ಅಧಿಕಾರಿಗಳ ಸೂಚನೆಯಂತೆ ಹಣ ಪಡೆಯಲಾಗಿತ್ತು ಎಂಬ ಅಂಶವೂ ತನಿಖೆ ವೇಳೆ ಪತ್ತೆಯಾಗಿದೆ
    ಏಜೆಂಟ್​ಗಳಿಂದ ಹಣ:
    ಐದರಿಂದ ಆರು ಅಭ್ಯರ್ಥಿಗಳಿಗೆ ಸೇರಿದ್ದ ಹಣ ಮಾತ್ರ ಸಿಕ್ಕಿದೆ. ಸಿಐಡಿ ತನಿಖೆ ವೇಳೆ ಇನ್ನಷ್ಟು ಹಣ ಪತ್ತೆಯಾಗುವ ಸಾಧ್ಯತೆಯಿದೆ. ಪ್ರಥಮ ದರ್ಜೆ ಗುಮಾಸ್ತ ಹರ್ಷನ ಮೂಲಕವೂ ಸಾಕಷ್ಟು ಅಕ್ರಮ ನಡೆದಿರುವುದು ಪತ್ತೆಯಾಗಿದೆ.
    ರಾಜ್ಯದ ಹಲವು ಏಜೆಂಟ್​ಗಳ ಮೂಲಕ ನೇಮಕಾತಿ ವಿಭಾಗಕ್ಕೆ ಹಣ ಪಾವತಿಯಾಗುತ್ತಿತ್ತು ಎಂಬ ಸಂಗತಿ ಸಿಐಡಿ ತನಿಖೆ ವೇಳೆ ಬೆಳಕಿಗೆ ಬಂದಿದೆ.
    ನೇಮಕಾತಿ ವಿಭಾಗದ ಯಾವ ಅಧಿಕಾರಿಗಳು ಅಭ್ಯರ್ಥಿಗಳಿಂದ ಹಣ ಪಡೆದು ಕೆಲಸ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚುವುದೇ ಸವಾಲಾಗಿ ಪರಿಣಮಿಸಿದೆ. ಏಜೆಂಟ್​ಗಳ ಮೂಲಕ ನಗದು ರೂಪದಲ್ಲಿ ಹಣ ಚಲಾವಣೆಯಾಗಿದೆ.
    ಆರೋಪಿಗಳಿಗೆ ಶೋಧ:
    ಅಭ್ಯರ್ಥಿಗಳನ್ನು ವಿಚಾರಣೆಗೆ ಒಳಪಡಿಸುತ್ತಿರುವ ಸಿಐಡಿ ಅಧಿಕಾರಿಗಳು ಅವರ ಮೂಲಕವೇ ಯಾರೆಲ್ಲಾ ಹಣ ಪಡೆದಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಮುಂದಾಗಿದ್ದು, ಮತ್ತಷ್ಟು ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.
    ಈ ನಡುವೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ರುದ್ರಗೌಡ ಪಾಟೀಲನನ್ನು ಸಿಐಡಿ ಅಧಿಕಾರಿಗಳು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ನ್ಯಾಯಾಲಯವು 7 ದಿನಗಳು ವಶದಲ್ಲಿ ಇರಿಸಿಕೊಳ್ಳಲು ಸಿಐಡಿಗೆ ಅನುಮತಿ ನೀಡಿದೆ. ರುದ್ರಗೌಡ ಪಾಟೀಲ್​ನನ್ನು ಕಲಬುರಗಿಯ ಐವಾನ್​ ಇ ಶಾಹಿ ಅತಿಥಿಗೃಹದಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
    ಮಧ್ಯವರ್ತಿಗಳಿಗೆ ಶೋಧ:
    ಕಳೆದ ಏಪ್ರಿಲ್ 23ರಂದು ರುದ್ರಗೌಡ ಪಾಟೀಲ್​ನನ್ನು ಸಿಐಡಿ ಬಂಧಿಸಿತ್ತು. ರುದ್ರಗೌಡ ಪಾಟೀಲನ​ ಸಹಾಯದಿಂದ ಹಲವು ಅಭ್ಯರ್ಥಿಗಳು ಪಿಎಸ್​ಐ ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದರು. ಇಂಥ ಹಲವು ಅಭ್ಯರ್ಥಿಗಳು ಮತ್ತು ಅಕ್ರಮಕ್ಕೆ ನೆರವಾಗಿದ್ದ ಸಿಬ್ಬಂದಿ, ಮಧ್ಯವರ್ತಿಗಳನ್ನು ಶೀಘ್ರ ಬಂಧಿಸಬಹುದು ಎಂದು ಹೇಳಲಾಗುತ್ತಿದೆ.

    psi selection
    Share. Facebook Twitter Pinterest LinkedIn Tumblr Email WhatsApp
    Previous Articleಹಿಂದೂ ಧಾರ್ಮಿಕ ಸ್ಥಳ ಅಸ್ತಿತ್ವ: ತಾಂಬೂಲ ಪ್ರಶ್ನೆಯಲ್ಲೂ ಸಾಬೀತು
    Next Article ಕುಂದಾಪುರದ ಅನಿಲ್ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ
    vartha chakra
    • Website

    Related Posts

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಜನ ಸಾಮಾನ್ಯರೇ ಎಚ್ಚರ !

    ಯುದ್ದ ಆಗಬಹುದು ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JudsonMix ರಲ್ಲಿ ವೃದ್ಧೆಗೆ ವಂಚಿಸಿದ ರಾಕ್ ಲೈನ್ ವೆಂಕಟೇಶ್ ಪುತ್ರ | Rockline Venkatesh
    • JudsonMix ರಲ್ಲಿ ರಾಬಿನ್ ಉತ್ತಪ್ಪ ಹೀಗೇಕೆ ಮಾಡಿದರು.
    • JudsonMix ರಲ್ಲಿ ಕೆಫೆ ಬಾಂಬರ್ ಕೊನೆಗೂ ಸಿಕ್ಕಿಬಿದ್ದ | Rameshwaram Cafe Blast
    Latest Kannada News

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    ಜನ ಸಾಮಾನ್ಯರೇ ಎಚ್ಚರ !

    ಮೇ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಬ್ಬಬ್ಬಾ ದಿನಕ್ಕೆ 2 5 ಕೋಟಿ! ಇದು ಬಾಲಯ್ಯ ಗತ್ತು!#viralvideo #jailer #movie #ntr #filmindustry #director
    Subscribe