ಬೆಂಗಳೂರು,ಆ.19 – ಇಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಸಿಕ್ಕಿಂನ (Sikkim) ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಹಲ್ಲೆಯಿಂದ ಗಾಯಗೊಂಡಿದ್ದ ಪಶ್ಚಿಮ ಸಿಕ್ಕಿಂ (Sikkim) ಮೂಲದ ಕೆ ದಿನೇಶ್ ಸುಬ್ಬ ಅವರ ಮುಖ ಹಾಗೂ ತಲೆಗೆ ಖಾಸಗಿ ಆಸ್ಪತ್ರೆಯಲ್ಲಿ 9 ಹೊಲಿಗೆಗಳನ್ನು ಹಾಕಿ ಚಿಕಿತ್ಸೆ ನೀಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ದಿನೇಶ್ ಸುಬ್ಬ ಅವರು ಎಲೆಕ್ಟ್ರಾನಿಕ್ಸ್ ಸಿಟಿ 1 ನೇ ಹಂತದಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಿದ್ದು ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ.
ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಸಹೋದರ ಹಾಗೂ ಸ್ನೇಹತರೊಂದಿಗೆ ಪಾರ್ಟಿ ಮಾಡಿ ಕಳೆದ ಆ.16 ರ ಬೆಳಗಿನ ಜಾವ 3-4 ಗಂಟೆ ಸುಮಾರಿಗೆ ವಾಪಸ್ಸಾಗುತ್ತಿದ್ದರು.
ದೊಡ್ಡತೊಗೂರಿನ ಪಿಸಿಆರ್ ಗಾರ್ಡನ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ದುಷ್ಕರ್ಮಿಗಳ ಗುಂಪೊಂದು ದಿನೇಶ್ ಅವರನ್ನು ನೋಡಿ, ಚೈನೀಸ್, ಚೈನೀಸ್ ಎಂದು ಕರೆದಿದ್ದಾರೆ. ಈ ವೇಳೆ ನಾನು ಸಿಕ್ಕಿಂನ ಭಾರತೀಯ ಎಂದು ದಿನೇಶ್ ಉತ್ತರಿಸಿದ್ದಾರೆ.
ಕೂಡಲೇ ಹತ್ತಿರಕ್ಕೆ ಬಂದಿರುವ ದುಷ್ಕರ್ಮಿಗಳು, ದಿನೇಶ್ ಅವರ ಮೇಲೆ ಶಸ್ತ್ರಾಸ್ತ್ರಗಳ ಬಳಸಿ ಅಮಾನುಷವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ಇದನ್ನು ಕಂಡ ಸ್ಥಳೀಯ ಕಟ್ಟಡವೊಂದರ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು,ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ದಿನೇಶ್ ನನ್ನು ಆಸ್ಪತ್ರೆಗೆ ದಾಖಲಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಆಗಸ್ಟ್ 14 ರಂದು ವಿವಾಹ ವಾರ್ಷಿಕೋತ್ಸವ ಇತ್ತು. ಹೀಗಾಗಿ ಸಹೋದರ ಆಗಸ್ಟ್ 15ರ ರಾತ್ರಿ ಪಾರ್ಟಿ ನೀಡಿದ್ದು ಪಾರ್ಟಿ ಮುಗಿಸಿ ಮನೆಗೆ ಹೊರಟಿದ್ದಾಗ 100 ಮೀಟರ್ ದೂರದಲ್ಲಿ ಘಟನೆ ನಡೆದಿದೆ. ಮೂವರು ದುಷ್ಕರ್ಮಿಗಳು ಚೈನೀಸ್ ಎಂದು ಕರೆದು, ಸಹೋದರನ ಮೇಲೆ ದಾಳಿ ನಡೆಸಿದ್ದಾರೆ. ಇದೊಂದು ಜನಾಂಗೀಯ ದಾಳಿಯಾಗಿದೆ. ಬೆಡ್ ರೆಸ್ಟ್ ನಲ್ಲಿರುವಂತೆ ಸಹೋದರನಿಗೆ ವೈದ್ಯರು ಸಲಹೆ ನೀಡಿದ್ದಾರೆಂದು ನಗರದಲ್ಲಿ 2009ರಿಂದಲೂ ವಾಸವಿರುವ ದಿನೇಶ್ ಅವರ ಸಹೋದರ ದೀಪಕ್ ದೊರ್ಜಿಯವರು ಹೇಳಿದ್ದಾರೆ.
LATEST KANNADA NEWS only at www.varthchakra.com


1 ಟಿಪ್ಪಣಿ
Le bon choix santГ© commence dans notre pharmacie accueillante – https://santeenfrance.fr/pages/testcovidpharmacie/page:143 , Nous veillons sur votre santГ© avec passion et professionnalisme .