Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cambridge Universityಯಲ್ಲಿ ರಾಹುಲ್ ಭಾಷಣ- ಕಕ್ಕಾಬಿಕ್ಕಿಯಾದ ಕಾಂಗ್ರೆಸ್ #Congress
    ಅಂತಾರಾಷ್ಟ್ರೀಯ

    Cambridge Universityಯಲ್ಲಿ ರಾಹುಲ್ ಭಾಷಣ- ಕಕ್ಕಾಬಿಕ್ಕಿಯಾದ ಕಾಂಗ್ರೆಸ್ #Congress

    vartha chakraBy vartha chakraಮಾರ್ಚ್ 5, 2023Updated:ಮಾರ್ಚ್ 5, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಭಾರತ್ ಜೋಡೋ‌ ಯಾತ್ರೆಯ‌ ಯಶಸ್ಸಿನಲ್ಲಿ ಬೀಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಕೇಂಬ್ರಿಡ್ಜ್‌‌‌‌‌‌‌‌‌‌‌ ವಿಶ್ವವಿದ್ಯಾನಿಲಯದಲ್ಲಿ ಮಾಡಿದ ಭಾಷಣ ಸಾಕಷ್ಟು ವಿವಾದ ಸೃಷ್ಟಿಸಿದೆ.
    ಈ ಸಭೆಯಲ್ಲಿ ಅವರು ಭಾರತದ ವಾಸ್ತವ ಸ್ಥಿತಿ ಹೇಳುತ್ತಾ ಕೇಂದ್ರ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಆದರೆ ಈ ಆರೋಪ ಮಾಡುವ ಸಮಯದಲ್ಲಿ ಪ್ರಸ್ತಾಪಿಸಿದ ಹಲವು ಅಂಶಗಳು ವ್ಯಾಪಕ ಚರ್ಚೆಯಾಗುತ್ತಿದ್ದು,ಸ್ವತಃ ರಾಹುಲ್ ಗಾಂಧಿ ಅವರೇ ಪೇಚಿಗೆ ಸಿಲುಕುವಂತಾಗಿದೆ.
    ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ದಾಳಿಯಾಗುತ್ತಿದೆ. ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ಮೇಲೆ ದಾಳಿಗಳಾಗುತ್ತಿದೆ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಆರೋಪಿಸಿದ್ದರು.
    ಇದಕ್ಕೆ ಅವರದೇ ಶೈಲಿಯಲ್ಲಿ ತಿರುಗೇಟು ನೀಡಿರುವ ಬಿಜೆಪಿ ನಾಯಕರು ರಾಹುಲ್ ಗಾಂಧಿ ಸುಳ್ಳು ಆರೋಪಗಳನ್ನು ಮಾಡಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತ ಹಾಗೂ ಮೋದಿ ವಿರುದ್ಧ ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಬಿಜೆಪಿ ಆಪಾದಿಸಿದ್ದಾರೆ.
    ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಇದರಿಂದ ಸ್ವತಂತ್ರವಾಗಿ ಏನೂ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಆಪಾದಿಸಿದ್ದರು.ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ,ರಾಹುಲ್ ಗಾಂಧಿ ಇತ್ತೀಚೆಗೆ 40,000 ಕಿಲೋಮೀಟರ್ ಯಾತ್ರೆ ಪೂರೈಸಿದ್ದಾರೆ. ಮೋದಿ ಸರ್ಕಾರ ನೀಡಿದ ಭದ್ರತೆಯಲ್ಲಿ ಯಾವುದೇ ಆತಂಕವಿಲ್ಲದೆ ಸಾಗಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ನಾಯಕರನ್ನು ಹೇಗೆ ನಡೆಸಿಕೊಳ್ಳಲಾಗಿದೆ ಎಂಬುದನ್ನು ನೆನಪಿಸಿಕೊಳ್ಳಿ ಎಂದಿದೆ
    ನನ್ನ ಫೋನ್‌ನಲ್ಲಿ ಪೆಗಾಸಿಸ್ ಮಾಲ್‌ವೆರ್ ಇದೆ. ಮಾತನಾಡುವಾಗ ಎಚ್ಚರಿಕೆಂಯಿಂದ ಇರಿ ಎಂದು ಗುಪ್ರಚರ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ರಾಹುಲ್ ದೂರಿದ್ದರು.ಇದಕ್ಕೆ ಉತ್ತರಿಸಿದ ಬಿಜೆಪಿ
    ಪೆಗಾಸಿಸ್ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ. ರಾಹುಲ್ ಗಾಂಧಿ ತಮ್ಮ ಫೋನ್ ವಿಚಾರಣೆಗಾಗಿ ಸಲ್ಲಿಕೆ ಮಾಡಿ ಎಂದು ಕೋರ್ಟ್ ಸೂಚಿಸಿತ್ತು. ಆದರೆ ರಾಹುಲ್ ಗಾಂಧಿ ಫೋನ್ ನೀಡಲು ನಿರಾಕರಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸಿ ಪೆಗಾಸಿಸ್ ಕುರಿತು ಯಾವುದೇ ಆಧಾರವಿಲ್ಲ, ವಿಪಕ್ಷಗಳ ಆರೋಪಗಳನ್ನು ತಳ್ಳಿ ಹಾಕಿದೆ ಎಂದು ಬಿಜೆಪಿ ಹೇಳಿದೆ.
    ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿಯಾಗುತ್ತಿದೆ. ಅವರನ್ನು ಎರಡನೇ ದರ್ಜೆ ನಾಗರೀಕರಾಗಿ ನೋಡಲಾಗುತ್ತಿದೆ ಎಂದು ರಾಹುಲ್ ಆರೋಪಿಸಿದರೆ,2014ರ ಬಳಿಕ ಭಾರತದಲ್ಲಿ ದಾಖಲಾದ ಕೋಮುಗಲಭೆ ಸಂಖ್ಯೆ ಅತೀ ಕಡಿಮೆ. ಇನ್ನು ಅಲ್ಪಸಂಖ್ಯಾತ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿದೆ. ಹಲವು ಅಲ್ಪಸಂಖ್ಯಾತ ನಾಯಕರು ಮೋದಿ ನಾಯಕತ್ವ ಮೆಚ್ಚಿಕೊಂಡು, ಬೆಂಬಲ ಸೂಚಿಸಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ.
    ಭರತ್ ಜೋಡೋ ಯಾತ್ರೆಯ ಸಮಯದಲ್ಲಿ ನಾನು ಕಾಶ್ಮೀರದಲ್ಲಿ ಉಗ್ರರನ್ನು ನೋಡಿದೆ. ಅವರು ನನ್ನನ್ನು ನೋಡಿದರುಆದರೆ ಅವರು ನನ್ನನ್ನು ಗುರಿಯಾಗಿಸಿ ದಾಳಿ ಮಾಡುವುದಿಲ್ಲ ಅನ್ನೋದು ಖಚಿತ ಎಂದು ರಾಹುಲ್ ಗಾಂಧಿ ‌ಹೇಳಿದ್ದು‌ ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಈ ಘಟನೆಯನ್ನು ಭದ್ರತಾ ಪಡೆಗೆ ರಾಹುಲ್ ಗಾಂಧಿ ಯಾಕೆ ವರದಿ ಮಾಡಿಲ್ಲ? ರಾಹುಲ್ ಗಾಂಧಿ ಹಾಗೂ ಉಗ್ರರ ನಡುವೆ ಯಾವುದಾದರೂ ಒಪ್ಪಂದ ಆಗಿದೆಯಾ?‌ ಎಂದು ‌ಪ್ರಶ್ನಿಸಿದೆ.
    ಹೀಗೆ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ ಆಡಿದ ಪ್ರತಿಯೊಂದು ಮಾತಿಗೂ ಬಿಜೆಪಿ ನಾಯಕರು ದಾಖಲೆಯೊಂದಿಗೆ ಉತ್ತರ ನೀಡಿದ್ದಾರೆ ಅಷ್ಟೇ ಅಲ್ಲ ಅದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರವಾಗುವಂತೆ‌ ಮಾಡಿದ್ದಾರೆ ಬಿಜೆಯ ಈ ಉತ್ತರ ಕಾಂಗ್ರೆಸ್ ಅನ್ನು ಕಕ್ಕಾಬಿಕ್ಕಿಯಾಗಿದೆ.

    Verbattle
    Verbattle
    Verbattle
    Congress m ಉಗ್ರ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous ArticleMarch 9ಕ್ಕೆ ಕರ್ನಾಟಕ ಬಂದ್ #bundh
    Next Article ಸಿದ್ದರಾಮಯ್ಯ ಕಾಫಿ-ತಿಂಡಿಗಾಗಿ ಖರ್ಚು ಮಾಡಿದ್ದು‌ 200 ಕೋಟಿ! #siddaramaiah
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wecywk ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Rqswxq ರಲ್ಲಿ ದರ್ಶನ್ ಕೈದಿ ನಂಬರ್ 7,314.
    • LarryCax ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.