Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮಲಿಂಗಾರೆಡ್ಡಿ ಮಾಡಿದ ಅದ್ಭುತ ಕೆಲಸ | Ramalinga Reddy
    ಸುದ್ದಿ

    ರಾಮಲಿಂಗಾರೆಡ್ಡಿ ಮಾಡಿದ ಅದ್ಭುತ ಕೆಲಸ | Ramalinga Reddy

    vartha chakraBy vartha chakraಜನವರಿ 1, 2024502 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.1: ಹೊಸ ವರ್ಷದ ಮೊದಲ ದಿನವೆಂದರೆ,ಮಂತ್ರಿ ಮಹೋದಯರು,ಹಿರಿಯ ಅಧಿಕಾರಿಗಳು, ಬೆಂಬಲಿಗರು,ಆಪ್ತರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸುವುದು‌ ಮಾಮೂಲಿಯಾದ ಸಂಗತಿ.
    ಆದರೆ ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿ ವರ್ಷದ ಮೊದಲ ದಿನ ಅತ್ಯಂತ ವಿಭಿನ್ನವಾಗಿ ವರ್ಷದ ಮೊದಲ ದಿನವನ್ನು ಬರಮಾಡಿಕೊಂಡು ಹಲವರ ಬದುಕಲ್ಲಿ ನೆನಪಿನಲ್ಲಿ ಉಳಿಯುವಂತಹ ಕೆಲಸ ಮಾಡಿದರು.
    ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ ಕೆಲವರು ಕರ್ತವ್ಯ ನಿರ್ವಹಣೆಯ ಸಮಯದಲ್ಲಿ ಅಪಘಾತಕ್ಕೆ ಬಲಿಯಾಗಿದ್ದಾರೆ.ಅಂತಹವರ ಕುಟುಂಬ ಸದಸ್ಯರನ್ನು ಕೇಂದ್ರ ಕಚೇರಿಗೆ ಆಹ್ವಾನಿಸಿ,ಇಲಾಖೆಯ ವತಿಯಿಂದ ಅವರಿಗೆ ನೀಡಬೇಕಾದ ಪರಿಹಾರ ಮತ್ತಿತರ ಸೌಲಭ್ಯಗಳನ್ನು ವಿತರಿಸಿ ಅವರೊಂದಿಗೆ ಹೊಸ ವರ್ಷ ಆಚರಿಸಿದರು.

    ಮೃತರ ಅವಲಂಬಿತರ ಕುಟುಂಬದವರಿಗೆ ಒಂದು ಕೋಟಿ ರೂಪಾಯಿ ಪರಿಹಾರ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕೋಟಿ ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು‌ ನಡೆಸಬಹುದಾಗಿದೆ ಎಂದರು.
    ಈ ಹಿಂದೆ ಅಪಘಾತ ಸೇರಿದಂತೆ ಇತರ ಕಾರಣಗಳಿಂದ ಮೃತಪಟ್ಟ ಕುಟುಂಬದವರಿಗೆ ಇಲಾಖೆಯ ವತಿಯಿಂದ 3 ಲಕ್ಷ ರೂಪಾಯಿಗಳನ್ನು ಮಾತ್ರ ನೀಡಲಾಗುತ್ತಿತ್ತು.ಆದರೆ ಈಗ ಇದನ್ನು ಬದಲಾಯಿಸಿ ಸಾರಿಗೆ ಸುರಕ್ಷಾ ಅಪಘಾತ ವಿಮಾ ಪರಿಹಾರ ಯೋಜನೆ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

    ಈ ಯೋಜನೆ ಅನ್ವಯ ನಿಗಮದಲ್ಲಿ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅದೇರೀತಿ ಖಾಸಗಿ ಸಿಬ್ಬಂದಿ ಕರ್ತವ್ಯ ನಿರತರಾಗಿದ್ದ ವೇಳೆ ಅಪಘಾತದಲ್ಲಿ ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಹೆಚ್ಚಿನ ಮೊತ್ತದ ಆರ್ಥಿಕ ಪರಿಹಾರ ಒದಗಿಸುವ ಮೂಲಕ ಅವರ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ 50 ಲಕ್ಷ (ಯುನೈಟೆಡ್ ಇಂಡಿಯಾ ಇನ್ಸುರೆನ್ಸ್) ಹಾಗೂ SBI Corporate Salary Package ಅಡಿಯಲ್ಲಿ 50 ಲಕ್ಷ ರೂ. ನೀಡಲಾಗುತ್ತಿದೆ ಎಂದು ವಿವರಿಸಿದರು ಯೋಜನೆ ಅಡಿಯಲ್ಲಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟ ನೌಕರರ ನಾಮನಿರ್ದೇಶಿತರಿಗೆ ಒಟ್ಟು 1 ಕೋಟಿ ರೂ. ಅಪಘಾತ ವಿಮಾ ಮೊತ್ತವನ್ನು ನೀಡಲಾಗುತ್ತದೆ.
    ಸಾರಿಗೆ ನಿಗಮಗಳಲ್ಲಿ ದೇಶದಲ್ಲಿಯೇ ಈ ಯೋಜನೆಯನ್ನು ಪ್ರಥಮ ಬಾರಿಗೆ ಕರಾರಸಾ ನಿಗಮದಲ್ಲಿ ಜಾರಿಗೊಳಿಸಲಾಗಿತ್ತು,‌ ನಂತರ ಇತರೆ ನಿಗಮಗಳಲ್ಲಿಯೂ ಜಾರಿಗೆಗೊಳಿಸಲಾಗಿದೆ ಎಂದು ತಿಳಿಸಿದರು ಈ ಯೋಜನೆ ಜಾರಿಯಾದ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ.ಅವರಲ್ಲಿ ಇದುವರೆವಿಗೂ 9 ನೌಕರರ ಕುಟುಂಬದವರಿಗೆ ತಲಾ 1 ಕೋಟಿ ರೂ.ಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ.ಇದೀಗ ಮೃತಪಟ್ಟ ಮೂವರು ನೌಕರರ ಅವಲಂಬಿತರಿಗೆ 1 ಕೋಟಿ ರೂ.ಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

    ED Government Karnataka m News Politics Ramalinga Reddy sbi Trending Varthachakra ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಸಜ್ಜು | Congress
    Next Article ಸಿದ್ದೇಶ್ವರ ಶ್ರೀ ಗಳನ್ನು ನೆನೆದ ಈಶ್ವರ ಖಂಡ್ರೆ | Eshwar Khandre
    vartha chakra
    • Website

    Related Posts

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • loto188.pro ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • aviator_ktEt ರಲ್ಲಿ ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    • kypit kyrsovyu_zdKl ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe