Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಟುರು ಹಾಕಿದ Ramesh Jarkiholi – ಬೆಚ್ಚಿದ Bommai #amitshah #bjp #karnataka #belgaum
    ರಾಜ್ಯ

    ಗುಟುರು ಹಾಕಿದ Ramesh Jarkiholi – ಬೆಚ್ಚಿದ Bommai #amitshah #bjp #karnataka #belgaum

    vartha chakraBy vartha chakraಮಾರ್ಚ್ 27, 2023Updated:ಮಾರ್ಚ್ 27, 202349 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Photo courtesy Kannadaprabha
    Photo courtesy Kannadaprabha
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ರಣತಂತ್ರ ರೂಪಿಸುತ್ತಿರುವ ಬಿಜೆಪಿಗೆ ಇದೀಗ ಹೊಸ ತಲೆ ನೋವು ಶುರುವಾಗಿದೆ.
    ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿದರೆ ಅತಿಹೆಚ್ಚಿನ ವಿಧಾನಸಭಾ ಕ್ಷೇತ್ರಗಳಿರುವ ಬೆಳಗಾವಿಯಲ್ಲಿ ಬಿಜೆಪಿ ಒಡೆದ ಮನೆಯಾಗಿದೆ. ಕಳೆದ ಬಾರಿ ಇಲ್ಲಿನ ಹದಿಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ ಇನ್ನೂ ಹೆಚ್ಚಿನ ಸ್ಥಾನ ಗಳಿಸಲು ಯತ್ನಿಸುತ್ತಿರುವಾಗ ಇಲ್ಲಿನ ನಾಯಕರ ನಡುವಿನ ಬಿಕ್ಕಟ್ಟು ಹೈಕಮಾಂಡ್ ಗೆ ಕಗ್ಗಂಟಾಗಿ ಪರಿಣಮಿಸಿದೆ.
    ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತಿ ಸರ್ಕಾರ ಪತನದಲ್ಲಿ ಪ್ರಮುಖ ಪಾತ್ರವಹಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಬೆಳಗಾವಿ ಸಾಹುಕಾರ್ ‌ರಮೇಶ್ ಜಾರಕಿಹೊಳಿ ಈ ಬಿಕ್ಕಟ್ಟಿನ ಕೇಂದ್ರ ಬಿಂದುವಾಗಿದ್ದಾರೆ.
    ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಮಾತ್ರವಲ್ಲ ನೆರೆಯ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ‌ ಸರ್ಕಾರದ ಪತನದಲ್ಲೂ ಇವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಇವರು ಹೈಕಮಾಂಡ್ ವಲಯದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ.

    ಆದರೆ,ಬೆಳಗಾವಿಯ ಮೂಲ ಬಿಜೆಪಿ ನಾಯಕರು ಮತ್ತು ಸಂಘ ಪರಿವಾರದ ನಾಯಕರು ಇವರ ಕಾರ್ಯ ವೈಖರಿಗೆ ಅಸಮಾಧಾನ ಹೊಂದಿದ್ದು, ಇವರಿಗೆ ಯಾವುದೇ ಪ್ರಾಶಸ್ತ್ಯ ನೀಡಬಾರದು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.ಬಿಜೆಪಿ ಒತ್ತಡದ ರಾಜಕಾರಣಕ್ಕೆ ಮಣಿಯಬಾರದು.ರಮೇಶ್ ಜಾರಕಿಹೊಳಿ ಆರಂಭದಿಂದಲೂ ಒತ್ತಡದ ರಾಜಕಾರಣ ಮಾಡುತ್ತಾ ಬಂದಿದ್ದಾರೆ ಇದಕ್ಕೆ ಈಗಲೇ ಪೂರ್ಣ ವಿರಾಮ ಹಾಕಬೇಕು ಎಂಬುದು ಈ ನಾಯಕರ ವಾದವಾಗಿದೆ.
    ಬಿಜೆಪಿ ಯಾವಾಗಲೂ ನಾಯಕ ಆಧಾರಿತ ಪಕ್ಷವಾಗದೆ ಕಾರ್ಯಕರ್ತರ ಆಧಾರಿತ ಪಕ್ಷವಾಗಬೇಕು.ರಮೇಶ್ ಜಾರಕಿಹೊಳಿ‌ ಇದಕ್ಕೆ ಪೂರ್ಣ ವಿರುದ್ದವಿದ್ದು ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಅವರ ಕ್ಷೇತ್ರಕ್ಕೆ ಅವರನ್ನು ಸೀಮಿತಗೊಳಿಸಬೇಕು ಇಲ್ಲವಾದರೆ ನಿರ್ದಾಕ್ಷಿಣ್ಯ ಕ್ರಮಕ್ಕೂ ಹಿಂಜರಿಯಬಾರದು ಎಂದು ಹೇಳಿರುವುದು ಈಗ ಗುಟ್ಟಾಗೇನೂ ಉಳಿದಿಲ್ಲ‌.

    BJP tries to assuage 'disenchanted' Karnataka ex-minister Ramesh Jarkiholi | Cities News,The Indian Express

    ಇದು ಇಷ್ಟಕ್ಕೇ ನಿಂತಿಲ್ಲ. ರಮೇಶ್ ಜಾರಕಿಹೊಳಿ ಅವರ ಸ್ವ ಕ್ಷೇತ್ರ ಗೋಕಾಕ್ ನಲ್ಲಿ ಪರ್ಯಾಯ ನಾಯಕನನ್ನು ಹುಟ್ಟು ಹಾಕುವ ಪ್ರಕ್ರಿಯೆಗೆ ಈ ಬಣ ಚಾಲನೆ ನೀಡಿದೆ .
    ಗೋಕಾಕ ಕ್ಷೇತ್ರದಲ್ಲಿ ಉಪ್ಪಾರ ಸಮಾಜದ ಮತದಾರರ ಸಂಖ್ಯೆ 30 ಸಾವಿರಕ್ಕೂ ಅಧಿಕವಾಗಿದೆ ಎಂಬುದು ಗಮನಿಸಬೇಕಾದ ಸಂಗತಿ.ಈ ಸಮುದಾಯಕ್ಕೆ ಸೇರಿದ ಪ್ರಭಾವಿ ನಾಯಕ
    ಸದಾಶಿವ ಗುದಗಗೋಳ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ರಯತ್ನ ಆರಂಭಿಸಿದೆ.
    ಮೂಲ ಬಿಜೆಪಿ ಹಾಗೂ ಸಂಘ ಪರಿವಾರದ ಪ್ರಮುಖರ ನೆರವಿನೊಂದಿಗೆ ಕ್ಷೇತ್ರದಲ್ಲಿ ಸದ್ದಿಲ್ಲದೆ ಪ್ರಚಾರದಲ್ಲಿ ತೊಡಗಿರುವ ಸದಾಶಿವ ಗುದಗಗೋಳ
    ಸದ್ಯದಲ್ಲೇ ತಮ್ಮ ಸಮಾಜದ ಸಭೆ ಕರೆಯಲು ಚಿಂತನೆ ನಡೆಸಿದ್ದಾರೆ.

    ಇದು ರಮೇಶ್ ಜಾರಕಿಹೊಳಿ ಅವರನ್ನು ಕೆರಳುವಂತೆ ಮಾಡಿದೆ.ಈ ಎಲ್ಲಾ ಬೆಳವಣಿಗೆಯ ಕೇಂದ್ರವಾಗಿರುವ ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ,ಲಕ್ಷ್ಮಣ ಸವದಿ,ಮಹಾಂತೇಶ ಕವಟಗಿಮಠ ಮತ್ತು ಅಭಯ್ ಪಾಟೀಲ್ ವಿರುದ್ಧ ಕೆಂಡಾಮಂಡಲವಾಗಿರುವ ರಮೇಶ್ ಜಾರಕಿಹೊಳಿ ಪಕ್ಷದ ಹಿರಿಯ ನಾಯಕ ಅಮಿತ್ ‌ಶಾ ನೇತೃತ್ವದಲ್ಲಿ
    ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಗೂ ಮುನ್ನ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
    ಅಥಣಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ನೀಡಲೇಬೇಕು.ಅವರನ್ನು ಮಂತ್ರಿ ಸ್ಥಾನದಿಂದ ತೆಗೆದರೂ ಪಕ್ಷದ ಹಿತದೃಷ್ಟಿಯಿಂದ ಸಹಿಸಿಕೊಂಡಿದ್ದೆ ಆದರೆ ಈಗ ಟಿಕೆಟ್ ನೀಡುವುದಿಲ್ಲ ಎಂದರೆ ಸುಮ್ಮನಿರುವುದಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದರೆನ್ನಲಾಗಿದೆ.
    ಗೋಕಾಕ್ ನಲ್ಲಿ ‌ನನಗೆ ಟಿಕೆಟ್ ನೀಡದಿದ್ದರೂ ಚಿಂತೆ ಇಲ್ಲ ಅಲ್ಲಿ ನನ್ನಷ್ಟೇ ನನ್ನ ಮಗ ಅಮರನಾಥ ಜಾರಕಿಹೊಳಿ ಪ್ರಭಾವಿಯಾಗಿದ್ದಾನೆ ಅವನಿಗೆ ಟಿಕೆಟ್ ಕೊಡಿ ಆದರೆ ಅಥಣಿಯಲ್ಲಿ ಕುಮಟಳ್ಳಿ ಬಿಟ್ಟು ಬೇರೆ ಯೋಚನೆ ಮಾಡಿದರೆ‌ ಪರಿಸ್ಥಿತಿ ಗಂಭೀರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ನೇರವಾಗಿ ಹೇಳಿದರೆನ್ನಲಾಗಿದೆ.
    ಇದಾದ ನಂತರ ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಈ ವಿಷಯ ಪ್ರಮುಖವಾಗಿ ಚರ್ಚೆಗೆ ಬಂದಿತು ಎನ್ನಲಾಗಿದೆ. ಈ ವಿಷಯದಲ್ಲಿ ರಾಜ್ಯ ನಾಯಕರು ಯಾವುದೇ ತೀರ್ಮಾನ ಕೈಗೊಳ್ಳುವ ಸ್ಥಿತಿಯಲ್ಲಿ ಇಲ್ಲ ಹೀಗಾಗಿ ಹೈಕಮಾಂಡ್ ಸೂಕ್ತವೆನಿಸುವ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂದು ಸಭೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ‌ ಹೇಳಿದರೆನ್ನಲಾಗಿದೆ ಈ ವೇಳೆ ಹಿರಿಯ ನಾಯಕ ಸಂತೋಷ್ ಮಾತನಾಡಲು ಮುಂದಾಗುತ್ತಿದ್ದಂತೆ ಅಮಿತ್ ಶಾ ಈ ವಿಷಯ ತಮಗೆ ಬಿಡಿ ಅದನ್ನು ನಾನು ಬಗೆಹರಿಸುತ್ತೇನೆ ಎಂದು ತಿಳಿಸಿದ್ದು,ಇಡೀ ಪ್ರಕರಣ ಇದೀಗ ಅಮಿತ್ ಶಾ ಅಂಗಳಕ್ಕೆ ಬಂದಿದೆ.

    #Belgaum #karnata BJP bommai Entertainment Karnataka m mi ಕಾಂಗ್ರೆಸ್ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleKabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha
    Next Article ಅದಾನಿ ಸಮೂಹ ಕಂಪನಿಗಳಲ್ಲಿ ಹೂಡಿಕೆ ಮುಂದುವರೆಸಿದ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fabiantat ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • DichaelFew ರಲ್ಲಿ ಅಗಲಿದ “ಕಲಾ ತಪಸ್ವಿ”
    • thepokies.net online ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe